ದಿಸ್ಪುರ:ಮಾನ್ಸೂನ್​ ಮಳೆಯ ಅಬ್ಬರಕ್ಕೆ ಆಸ್ಸಾಂ ತತ್ತರಿಸಿದೆ. ಪ್ರವಾಹದಿಂದ ಅಪಾರ ಪ್ರಮಾಣದಲ್ಲಿ ಸಾವು-ನೋವು ಉಂಟಾಗುತ್ತಿದೆ.
ಆಸ್ಸಾಂನ ಕಾಜಿರಂಗ್​ ರಾಷ್ಟ್ರೀಯ ಉದ್ಯಾನವನದ ಶೇ.85ರಷ್ಟು ಭಾಗ ನೀರಿನಲ್ಲಿ ಮುಳುಗಿಹೋಗಿದೆ. 100ಕ್ಕೂ ಹೆಚ್ಚು ಪ್ರಾಣಿಗಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿವೆ.
ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾನುವಾರ ಆಸ್ಸಾಂ ಮುಖ್ಯಮಂತ್ರಿ ಸರ್ಬಾನಂದ್​ ಸೊರೊವಾಲ್​ ಅವರಿಗೆ ಕರೆ ಮಾಡಿ ರಾಜ್ಯದಲ್ಲಿ ಇರುವ ಪ್ರವಾಹ ಪರಿಸ್ಥಿತಿಯ ಬಗ್ಗೆ ವರದಿ ಕೇಳಿದ್ದಾರೆ. ಅಷ್ಟೇ ಅಲ್ಲ ಕೊವಿಡ್​-19 ಸ್ಥಿತಿಗತಿ, ತಿನಸುಕಿಯಾ ಜಿಲ್ಲೆಯ ಬಾಘ್​​ಜನ್ ಬಳಿ ಇರುವ ಆಯಿಲ್ ಇಂಡಿಯಾ ಲಿಮಿಟೆಡ್​ನ ತೈಲ ಬಾವಿಯಲ್ಲಿ ಕಾಣಿಸಿಕೊಂಡ ಬೆಂಕಿಯ ಬಗ್ಗೆಯೂ ವಿಚಾರಿಸಿದ್ದಾರೆ ಎಂದು ವರದಿಯಾಗಿದೆ.
ಆಸ್ಸಾಂನ ಪ್ರವಾಹಕ್ಕೆ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಮುಕ್ಕಾಲು ಭಾಗ ಮುಳುಗಿದ್ದು, ಪರಿಣಾಮವಾಗಿ 9 ಖಡ್ಗಮೃಗಗಳು, 80ಕ್ಕೂ ಹೆಚ್ಚು ಜಿಂಕೆಗಳು ಸೇರಿ ಸುಮಾರು 100 ಪ್ರಾಣಿಗಳು ಮೃತಪಟ್ಟಿವೆ. 130ಕ್ಕೂ ಹೆಚ್ಚು ಪ್ರಾಣಿಗಳನ್ನು ರಕ್ಷಣೆ ಮಾಡಲಾಗಿದೆ ಎಂದು ಉದ್ಯಾನವನದ ಆಡಳಿತ ತಿಳಿಸಿದೆ. ಹಾಗೇ ಪ್ರಾಣಿಗಳ ರಕ್ಷಣೆಗಾಗಿ ಸುಮಾರು 32 ಕಿ.ಮೀ.ಉದ್ದದ ಕೃತಕ ಗುಡ್ಡಗಾಡು ಪ್ರದೇಶ  ನಿರ್ಮಿಸಲು ಸರ್ಕಾರ ನಿರ್ಧರಿಸಿದೆ. ಈ ಪ್ರಸ್ತಾವನೆಯನ್ನು ರಾಜ್ಯಸರ್ಕಾರ ಕೇಂದ್ರ ಸರ್ಕಾರದ ಎದುರು ಇಟ್ಟಿತ್ತು. ಅದಕ್ಕೆ ಕೇಂದ್ರ ಅಸ್ತು ಎಂದಿದೆ.
ರಾಜ್ಯದ ಪ್ರವಾಹ ಪರಿಸ್ಥಿತಿ ನಿಭಾಯಿಸಲು ಎಲ್ಲ ರೀತಿಯ ಅಗತ್ಯ ನೆರವನ್ನೂ ನೀಡುವುದಾಗಿ ಪ್ರಧಾನಿ ಮೋದಿಯವರು ಭರವಸೆ ನೀಡಿದ್ದಾರೆಂದು ಆಸ್ಸಾಂ ಮುಖ್ಯಮಂತ್ರಿ ಟ್ವೀಟ್​ ಮಾಡಿದ್ದಾರೆ. (ಏಜೆನ್ಸೀಸ್​)
ಮಹಿಳೆಯರ ಅರೆನಗ್ನ ಚಿತ್ರಗಳು: ಭಾರಿ ಕೋಲಾಹಲವೆಬ್ಬಿಸಿದೆ ಜಲಿಯನ್​​ವಾಲಾ ಬಾಗ್ ನ ನವೀಕೃತ ಫೋಟೊ ಗ್ಯಾಲರಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − 3 =
Remember me
