ತಿರುವನಂತಪುರಂ:ಎಡ ಪಂಥೀಯ ಪ್ರಾಬಲ್ಯವಿರುವ ಕೇರಳದಲ್ಲಿ ಇದೀಗ ಬಿಜೆಪಿ ನಿಧಾನವಾಗಿ ತಲೆ ಎತ್ತಲಾರಂಭಿಸಿದೆ. ರಾಜ್ಯದ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ಎಡ ಪಂಥೀಯ ಸಂಘಟನೆಗಳ ಕಾರ್ಯಕರ್ತರು ಬಿಜೆಪಿ ಸೇರಲಾರಂಭಿಸಿದ್ದಾರೆ.
ಸಿಪಿಐ(ಎಂ), ಸಿಪಿಐ ಮತ್ತು ಸಿಐಟಿಯು ಪಕ್ಷಗಳು ಮಾಜಿ ಸದಸ್ಯರಾಗಿರುವ 98 ಕಾರ್ಯಕರ್ತರು ಮಂಗಳವಾರದಂದು ಬಿಜೆಪಿ ಸೇರಿದ್ದಾರೆ. ಕೇಂದ್ರ ಸಚಿವ ವಿ.ಮುರುಳೀಧರನ್​ ಮತ್ತು ಪ್ರಹ್ಲಾದ್ ಜೋಶಿ ನೇತೃತ್ವದಲ್ಲಿ ಅವರು ಬಿಜೆಪಿ ಸೇರ್ಪಡೆಯಾಗಿದ್ದಾರೆ.
ದಕ್ಷಿಣ ಭಾರತದ ರಾಜ್ಯಗಳನ್ನು ಗುರಿಯಾಗಿಸಿಕೊಂಡು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯಾನಾಥ ಪಕ್ಷದ ವಿಜಯ ಯಾತ್ರೆ ಆರಂಭಿಸಿದ್ದಾರೆ. ಅದೇ ಬೆನ್ನಲ್ಲೇ ರಾಜ್ಯಗಳ ಕೆಲ ನಾಯಕರು ಮತ್ತು ಕಾರ್ಯಕರ್ತರು ಬಿಜೆಪಿ ಸೇರಲಾರಂಭಿಸಿದ್ದಾರೆ. ಈ ಹಿಂದೆ ಮೆಟ್ರೋ ಮ್ಯಾನ್​ ಶ್ರೀಧರನ್​ ಕೂಡ ವಿಜಯ ಯಾತ್ರೆ ಸಮಯದಲ್ಲಿಯೇ ಬಿಜೆಪಿ ಸೇರಿದ್ದರು. (ಏಜೆನ್ಸೀಸ್)
ಕ್ಷಣಕ್ಷಣದ ಮಾಹಿತಿಗಾಗಿ ವಿಜಯವಾಣಿ ಫೇಸ್​ಬುಕ್​ ಪೇಜ್​ ಲೈಕ್​ ಮಾಡಿ
ಕೆಲಸಕ್ಕೆ ರಜೆ ಸಿಗಲೆಂದು ತನ್ನನ್ನು ತಾನೇ ಕಿಡ್ನಾಪ್​ ಮಾಡಿಕೊಂಡ ಖದೀಮ!

ಕೃಷಿ ಕಾಯ್ದೆ ವಿರೋಧಿ ಹೋರಾಟದಲ್ಲಿ ಪಾಕಿಸ್ತಾನದ ಧ್ವಜ! ಸಾಗರೋತ್ತರ ಕಾಂಗ್ರೆಸ್ ಕೆಲಸವೆಂದು ದೂರಿದ ಬಿಜೆಪಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:6 + nineteen =
Remember me
