ವಿಜಯವಾಡ:ಆಂಧ್ರಪ್ರದೇಶದ ರಾಜಧಾನಿ ಅಮರಾವತಿ ಎಂದು ಸಿಎಂ ಜಗನ್​ ಮೋಹನ್​ ರೆಡ್ಡಿ ಸೋಮವಾರ ಘೋಷಿಸಿದ್ದಾರೆ.
ಆಂಧ್ರಕ್ಕೆ ಮೂರು ರಾಜಧಾನಿಗಳ ನಿರ್ಮಾಣ ಕುರಿತು ಸೃಷ್ಟಿಯಾಗಿದ್ದ ವಿವಾದದ ನಡುವೆಯೇ ರಾಜ್ಯಕ್ಕೊಂದೇ ರಾಜಧಾನಿ. ಅದು ಅಮರಾವತಿ ಎಂದು ಜಗನ್​ ಮೋಹನ್​ ರೆಡ್ಡಿ ಹೇಳಿದ್ದಾರೆ. ಈ ಘೋಷಣೆಯೊಂದಿಗೆ ಮೂರು ರಾಜಧಾನಿ ಮಸೂದೆಯನ್ನ ಹಿಂಪಡೆದು ಒಂದೇ ಒಂದು ರಾಜಧಾನಿ ಬಗ್ಗೆ ಹೈಕೋರ್ಟ್​ಗೆ ಮಾಹಿತಿ ನೀಡಲು ರಾಜ್ಯ ಸಂಪುಟ ನಿರ್ಧರಿಸಿದೆ.
ಅಮರಾವತಿ-ಶಾಸಕಾಂಗ ರಾಜಧಾನಿ, ವಿಶಾಖಪಟ್ಟಣಂ- ಕಾಯರ್ಕಾರಿ ರಾಜಧಾನಿ, ಕರ್ನೂಲ್-​ ನ್ಯಾಯಾಂಗ ರಾಜಧಾನಿ ಎಂದು ವೈಎಸ್​ಆರ್​ ಕಾಂಗ್ರೆಸ್​ ಪಕ್ಷದ ಸರ್ಕಾರ ಈ ಹಿಂದೆ ಪ್ರಸ್ತಾಪಿಸಿತ್ತು. ಒಂದು ರಾಜ್ಯಕ್ಕೆ ಮೂರು ರಾಜಧಾನಿಗಳ ವಿಚಾರ ಆಂಧ್ರದಲ್ಲಿ ಭಾರಿ ವಿವಾದ ಸೃಷ್ಟಿಸಿತ್ತು. ವಿಪಕ್ಷಗಳು ಮತ್ತು ಅಮರಾವತಿ ಭಾಗದ ರೈತರಿಂದ ಇದಕ್ಕೆ ತೀವ್ರ ವಿರೋಧ ವ್ಯಕ್ತವಾಗಿತ್ತು. ಅಮರಾವತಿ ಭಾಗದ ರೈತರು ಇದನ್ನು ಪ್ರಶ್ನಿಸಿ ಹೈಕೋರ್ಟ್​ ಮೆಟ್ಟಿಲೇರಿದ್ದರು. ರಾಜಧಾನಿ ಅಭಿವೃದ್ಧಿ ಕಾರ್ಯಕ್ಕಾಗಿ ಅಮರಾವತಿ ಭಾಗದಲ್ಲಿ ರೈತರು ಭೂಮಿ ಕೊಟ್ಟಿದ್ದರು. ಆ ರೈತರೆಲ್ಲರೂ ಅಮರಾವತಿಯೇ ರಾಜಧಾನಿ ಆಗಬೇಕು ಎಂದು ಪಟ್ಟು ಹಿಡಿದಿದ್ದರು. ಇದೀಗ ರಾಜ್ಯಕ್ಕೆ ಒಂದೇ ರಾಜಧಾನಿ. ಅದುವೆ ಅಮರಾವತಿ ಎಂದು ಜಗನ್​ಮೋಹನ್​ ರೆಡ್ಡಿ ಘೋಷಿಸಿದ್ದಾರೆ.
ವಾರದ ಬಳಿಕ ಬಯಲಾಯ್ತು ಪತ್ನಿ ಕೊಲೆ ರಹಸ್ಯ! ಮಾಡಬಾರದ್ದು ಮಾಡಿ ನಾಟಕ ಮಾಡ್ತಿದ್ದವ ಕೊನೆಗೂ ಸಿಕ್ಕಿಬಿದ್ದ

ಇಷ್ಟಕ್ಕೆ ನಿಲ್ಲಲ್ಲ, ಇನ್ನೂ ಇದೆ ಮಳೆ ಕಾಟ.. ಏನು ಮಾಡೋಕೂ ಆಗಲ್ಲ: ಭವಿಷ್ಯ ನುಡಿದ ಕೋಡಿಮಠ ಶ್ರೀಗಳು

ನನ್ನ ಗಂಡನನ್ನು ಬೆತ್ತಲೆಗೊಳಿಸಿ ನಾಗಿಣಿ ಡಾನ್ಸ್​ ಮಾಡಿಸಿದ್ರು… ಆ ನೋವನ್ನು ಎಳೆಎಳೆಯಾಗಿ ಬಿಚ್ಚಿಟ್ಟ ಪತ್ನಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen − 3 =
Remember me
