ಮುಂಬೈ:ಕರೊನಾವೈರಸ್ ಸೋಂಕು ವ್ಯಾಪಕವಾಗಿ ಪಸರಿಸುತ್ತಿರುವುದರಿಂದ ಮಹಾರಾಷ್ಟ್ರದಲ್ಲಿ ಬಾಗಶಃ ಲಾಕ್​ಡೌನ್ ಮಾಡಲು ಅಲ್ಲಿನ ಸರ್ಕಾರ ನಿರ್ಧರಿಸಿದೆ.
ಸೋಮವಾರದಿಂದ ಸಂಜೆ 8 ಗಂಟೆಯಿಂದ ಬೆಳಿಗ್ಗೆ 7 ಗಂಟೆವರೆಗೆ ಕರ್ಫ್ಯೂ ಜಾರಿಯಲ್ಲಿರಲಿದೆ. ವಾರದ ಕೊನೆಯಲ್ಲಿ ಅಂದರೆ ಭಾನುವಾರ ಪೂರ್ತಿ ಲಾಕ್​​ಡೌನ್​ ಇರಲಿದೆ ಎಂದು ಮುಖ್ಯಮಂತ್ರಿ ಉದ್ದವ್ ಠಾಕ್ರೆ ಹೇಳಿದ್ದಾರೆ. ಅಲ್ಲದೇ ಇನ್ನೊಂದು ವಾರ ನೋಡಿಕೊಂಡು ಸಂಪೂರ್ಣ ಲಾಕ್​ಡೌನ್​ ಮಾಡಬೇಕೋ ಬೇಡವೋ ಎಂದು ತೀರ್ಮಾನಿಸಲಾಗುವುದು ಎಂದು ಹೇಳಿದ್ದಾರೆ.
ಇಂದು ನಡೆದ ಮಹತ್ವದ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿ ಈ ನಿರ್ಧಾರ ತೆಗೆದುಕೊಂಡಿದ್ದಾರೆ. ಈಗಾಗಲೇ ಎಲ್ಲ ಚಿತ್ರಮಂದಿರಗಳನ್ನು, ಬಾರ್​ ರೆಸ್ಟೋರಂಟ್​ಗಳನ್ನು, ಶಾಪಿಂಗ್ ಮಾಲ್​ಗಳನ್ನು ಹಾಗೂ ಧಾರ್ಮಿಕ ಕೇಂದ್ರಗಳನ್ನು ಒಂದು ವಾರ ಮುಚ್ಚಲು ಆದೇಶಿಸಲಾಗಿತ್ತು.
ಅವಶ್ಯಕ ಪ್ರಯಾಣಗಳಿಗೆ ಮಾತ್ರ ರಾತ್ರಿ ಅವಕಾಶ ಇರಲಿದೆ. ಹೋಟೆಲ್​ಗಳಲ್ಲಿ ಸೇವೆ ನಿಷಿದ್ದವಾಗಿದ್ದು, ಕೇವಲ ಪಾರ್ಸ್​ಲ್​ಗಳಿಗೆ ಮಾತ್ರ ಅವಕಾಶ ನೀಡಲಾಗಿದೆ. ಮುಖ್ಯಮಂತ್ರಿ ಠಾಕ್ರೆ ಸಚಿವ ಸಂಪುಟ ಸಭೆಯಲ್ಲಿ ಸಂಪೂರ್ಣ ಲಾಕ್​ಡೌನ್ ಮಾಡುವ ನಿರ್ಧಾರ ಪ್ರಕಟಿಸಿದರೂ ಕೂಡ ಇದಕ್ಕೆ ಕೆಲ ಸಚಿವರು ತೀವ್ರ ವಿರೋಧ ವ್ಯಕ್ತಪಡಿಸಿದ್ದರಿಂದ ಹಿಂದೆ ಸರಿದರು ಎಂದು ವರದಿಗಳು ಹೇಳಿವೆ. (ಏಜೇನ್ಸಿಸ್).
ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಏ.6 ರಂದು ಪ್ರಧಾನಿ ಮೋದಿ ಮಾತು: ಕಾರಣ ಏನು?

ತಿರುಪತಿ ಲೋಕಸಭೆ ಉಪಚುನಾವಣೆ: ಪ್ರಮುಖ ಅಭ್ಯರ್ಥಿಗಳಿಗೆ ಸವಾಲಾಗಿರುವ ಕನ್ನಡತಿ, ಬಿಜೆಪಿ ಅಭ್ಯರ್ಥಿ ಕೆ ರತ್ನ ಪ್ರಭಾ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four + 6 =
Remember me
