ಬೆಂಗಳೂರು:ತೆಲುಗು ಸಿನಿಮಾ ಗಾಯಕಿ ಹರಿಣಿ ಅವರ ತಂದೆ ಶವ ಬೆಂಗಳೂರಿನ ರೈಲ್ವೆ ಹಳಿ ಮೇಲೆ ಪತ್ತೆಯಾಗಿದ್ದು, ಸಾವಿನ ಸುತ್ತ ಅನುಮಾನದ ಹುತ್ತ ಬೆಳೆದಿದೆ.
ಹರಿಣಿ ತಂದೆ ಎ.ಕೆ.ರಾವ್ ಕೆಲ ದಿನಗಳಿಂದ ನಾಪತ್ತೆಯಾಗಿದ್ದರು. ಈ ಕುರಿತು ಕುಟುಂಬಸ್ಥರು ಸ್ಥಳೀಯ ಪೊಲೀಸ್​ ಠಾಣೆಗೆ ದೂರು ನೀಡಿದ್ದರು. ಈ ನಡುವೆ ನ.22ರ ರಾತ್ರಿ ಯಲಹಂಕ- ರಾಜಾನುಕುಂಟೆ ರೈಲ್ವೆ ಹಳಿ ಮಧ್ಯೆ ಎ.ಕೆ.ರಾವ್​ ಶವವಾಗಿ ಪತ್ತೆಯಾಗಿದ್ದರು. ಚಾಕುವಿನಿಂದ‌ ಕೈ ಮತ್ತು ಕುತ್ತಿಗೆಯನ್ನು ಚುಚ್ಚಿದ್ದ ಸ್ಥಿತಿಯಲ್ಲಿ ಶವ ಕಂಡು ಬಂದಿತ್ತು.
ವಿಷಯ ತಿಳಿಯುತ್ತಿದ್ದಂತೆ ರಾವ್ ಕುಟುಂಬಸ್ಥರು ಇದು ಕೊಲೆ ಎಂದು ಬೆಂಗಳೂರು ನಗರ ರೈಲ್ವೆ ಪೊಲೀಸ್​ ಠಾಣೆಗೆ ದೂರು ನೀಡಿದ್ದಾರೆ. ಆದರೆ, ಮರಣೋತ್ತರ ಪರೀಕ್ಷೆ ನಡೆಸಿದ ವೈದ್ಯರು ಇದು ಆತ್ಮಹತ್ಯೆ ಎಂದಿದ್ದಾರೆ. ಸಾವಿಗೂ ಮುನ್ನ ಎ.ಕೆ. ರಾವ್, ಬೆಂಗಳೂರಿನ ಹೋಟೆಲ್​ವೊಂದರಲ್ಲಿ ಉಳಿದುಕೊಂಡಿದ್ದರು. ಮೃತಪಟ್ಟ ಸ್ಥಳದಲ್ಲಿ ಆಧಾರ್ ಕಾರ್ಡ್, ಕೆಲ ದಾಖಲಾತಿ ಜತೆಗೆ ವಂಚನೆ ಪ್ರಕರಣವೊಂದರ ಬಗ್ಗೆ ನೀಡಬೇಕಿದ್ದ ದೂರಿನ‌ ಪ್ರತಿಯೂ ಪತ್ತೆಯಾಗಿದೆ. ಈ ಜಾಡು ಹಿಡಿದ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ವಂಚನೆ ಪ್ರಕರಣ ಸಂಬಂಧ ಬೆಂಗಳೂರಲ್ಲಿ ಈ ಹಿಂದೆ ಎ.ಕೆ.ರಾವ್​ ವಿರುದ್ಧ ಕೇಸ್​ವೊಂದು ದಾಖಲಾಗಿದೆ ಎಂದು ಮೂಲಗಳು ತಿಳಿಸಿವೆ.
ದುಬಾರಿ ಟೊಮ್ಯಾಟೊಗೆ ಗೌರಿಬಿದನೂರಲ್ಲಿ ಇಬ್ಬರು ಬಲಿ! ತೋಟದಲ್ಲೇ ನಡೀತು ಘೋರ ಕೃತ್ಯ, ಇಲ್ಲಿ ಯಾರದ್ದು ತಪ್ಪು?

ಅಪ್ಪು ಅಗಲಿಕೆ ನೋವು ಇನ್ನೂ ಮಾಸಿಲ್ಲ… ಈಗಲೇ ಇದೆಲ್ಲಾ ಬೇಕಿತ್ತಾ? ಸುಮಲತಾ ಅಂಬರೀಷ್​ ಬೇಸರ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:4 × one =
Remember me
