ನವದೆಹಲಿ:ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಾಮಾನ್ಯಕ್ಕಿಂತ ಅಧಿಕ ಪ್ರಮಾಣದಲ್ಲಿ ಕಂಡುಬರುತ್ತದೆ ಎಂದು ಕೇಂದ್ರ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ.
ಇದನ್ನೂ ಓದಿ:ಕೇಜ್ರಿವಾಲ್‌ಗೆ ಜೈಲೇ ಗತಿ: ತುರ್ತು ವಿಚಾರಣೆಗೆ ಸುಪ್ರೀಂಕೋರ್ಟ್​ ನಕಾರ!
2024ರಲ್ಲಿ ಮುಂಗಾರು ಸರಾಸರಿ 87 ಸೆಂಟಿಮೀಟರ್‌ ಗೆ ಬದಲಾಗಿ 106ಸೆಂಟಿ ಮೀಟರ್​ ಬರಲಿದೆ. ಎಲ್ ನಿನೋ ದುರ್ಬಲಗೊಳ್ಳುತ್ತಿದೆ. ಮಾನ್ಸೂನ್ ಪ್ರಾರಂಭವಾಗುವ ವೇಳೆಗೆ ಇದು ತಟಸ್ಥ ಹಂತವನ್ನು ಪ್ರವೇಶಿಸುತ್ತದೆ ಎಂದು ಐಎಂಡಿಯ ಡಿಜಿಎಂ ಮೃತ್ಯುಂಜಯ್ ಮಹಾಪಾತ್ರ ಹೇಳಿದ್ದಾರೆ.
ಎಲ್ ನಿನೋ ದುರ್ಬಲಗೊಂಡ ನಂತರ ಮಾನ್ಸೂನ್ ಆರಂಭವಾಗುತ್ತದೆ. ಬಳಿಕ ಲಾ ನಿನಾ ಬೆಳೆಯಬಹುದು ಎಂದು ತಿಳಿಸಿದ್ದಾರೆ.
ಈ ವರ್ಷದ ಮಾನ್ಸೂನ್ ಋತುವಿನ ಎರಡನೇ ಅವಧಿಯಲ್ಲಿ ಲಾ ನಿನಾ ಹವಾಮಾನ ಪರಿಸ್ಥಿತಿಗಳು ಅಭಿವೃದ್ಧಿಗೊಳ್ಳುತ್ತಿರುವುದು ಕಂಡುಬರುತ್ತದೆ. ಭಾರತದಲ್ಲಿ ಉತ್ತಮ ಮಾನ್ಸೂನ್‌ಗೆ ಸಂಬಂಧಿಸಿದ ಲಾ ನಿನಾ ಪರಿಸ್ಥಿತಿಗಳು ಆಗಸ್ಟ್, ಸೆಪ್ಟೆಂಬರ್ ವೇಳೆಗೆ ಪ್ರಾರಂಭವಾಗುವ ಸಾಧ್ಯತೆಯಿದೆ ಎಂದು ಅವರು ವಿವರಿಸಿದ್ದಾರೆ.
1951 ರಿಂದ 2023 ರವರೆಗಿನ ದತ್ತಾಂಶ ನೋಡಿದರೆ ಭಾರತವು 9 ಸಂದರ್ಭಗಳಲ್ಲಿ ಲಾ ನಿನಾ ಮತ್ತು ಎಲ್ ನಿನೋ ಪ್ರಭಾವಕ್ಕೆ ಒಳಗಾಗಿದೆ. ಈ ಎಲ್ಲ 9 ಸಂದರ್ಭಗಳಲ್ಲಿಯೂ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆ ಸುರಿದಿದೆ ಎಂದು ಅವರು ಹೇಳಿದ್ದಾರೆ.
ಹವಾಮಾನ ಕಚೇರಿಯ ಪ್ರಕಾರ, ವಾಯವ್ಯ, ಪೂರ್ವ ಮತ್ತು ಕೆಲವು ಪ್ರದೇಶಗಳನ್ನು ಹೊರತುಪಡಿಸಿ ದೇಶದ ಹೆಚ್ಚಿನ ಭಾಗಗಳಲ್ಲಿ ಕಾಲಕ್ಕೆ ತಕ್ಕಂತೆ ಮಳೆಯಾಗುವ ಸಾಧ್ಯತೆಯಿದೆ. ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗುವ ಮುನ್ಸೂಚನೆ ಇದೆ.
“1971 ರಿಂದ 2020 ರವರೆಗಿನ ಮಳೆಯ ಮಾಹಿತಿಯ ಪ್ರಕಾರ, ನಾವು ಹೊಸ ದೀರ್ಘಾವಧಿಯ ಸರಾಸರಿ ಮತ್ತು ಸಾಮಾನ್ಯವನ್ನು ಪರಿಚಯಿಸಿದ್ದೇವೆ. ಈ ಸಾಮಾನ್ಯ ಪ್ರಕಾರ, ಜೂನ್ 1 ರಿಂದ ಸೆಪ್ಟೆಂಬರ್ 30 ರವರೆಗೆ ಇಡೀ ದೇಶದ ಒಟ್ಟು ಮಳೆಯ ಸರಾಸರಿ 87 ಸೆಂ.ಮೀ ಆಗಿರುತ್ತದೆ ಎಂದು ಭೂ ವಿಜ್ಞಾನ ಸಚಿವಾಲಯದ ಕಾರ್ಯದರ್ಶಿ ಎಂ ರವಿಚಂದ್ರನ್ ಹೇಳಿದ್ದಾರೆ.
ಕಳೆದ 10 ವರ್ಷದಲ್ಲಿ ಏಪ್ರಿಲ್​ನಲ್ಲಿ ಶೇ.7 ರಷ್ಟು ಮಳೆ ಕೊರತೆಯಾಗಿದೆ ಎಂದು 2023 ರಲ್ಲಿ ಇಟಿ ವರದಿ ಮಾಡಿದೆ. ಖಾಸಗಿ ಹವಾಮಾನ ಮುನ್ಸೂಚನೆ ಸಂಸ್ಥೆ ಸ್ಕೈಮೆಟ್ ಇತ್ತೀಚೆಗೆ ಜೂನ್ ಮತ್ತು ಸೆಪ್ಟೆಂಬರ್ 2024 ರ ನಡುವೆ ಭಾರತವು ‘ಸಾಮಾನ್ಯ’ ಮಾನ್ಸೂನ್ ಅನ್ನು ನಿರೀಕ್ಷಿಸುತ್ತದೆ ಎಂದು ಹೇಳಿದೆ. ನಾಲ್ಕು ತಿಂಗಳ ಅವಧಿಗೆ ಮಾನ್ಸೂನ್ ಮಳೆಯು ದೀರ್ಘಾವಧಿಯ ಸರಾಸರಿ 868.6ಮಿ ಮೀ ಅಂದರೆ ಪ್ರತಿಶತ 102 ರಷ್ಟು ಎಂದು ನಿರೀಕ್ಷಿಸಲಾಗಿದೆ ಎಂದು ಸ್ಕೈಮೆಟ್ ಹೇಳಿದೆ.
ವಿಶ್ವ ವಿಖ್ಯಾತ ಬೆಂಗಳೂರು ಕರಗ ಶಕ್ತ್ಯುತ್ಸವಕ್ಕೆ ಚಾಲನೆ ಇಂದು

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:twenty + one =
Remember me
