ಚೆನ್ನೈ:ತಮಿಳು ನಟ ದಳಪತಿ ವಿಜಯ್ ಅವರು ‘ತಮಿಳಗ ವೆಟ್ರಿ ಕಳಗಂ’ ಎಂಬ ರಾಜಕೀಯ ಪಕ್ಷ ಸ್ಥಾಪನೆ ಮಾಡುವ ಮೂಲಕ ತಮಿಳುನಾಡಿನಲ್ಲಿ ಹೊಸ ಸಂಚಲನ ಮೂಡಿಸಿದ್ದಾರೆ.
ಇದನ್ನೂ ಓದಿ:ಗಣೇಶೋತ್ಸವ ಅನುಮತಿಗೆ ಏಕಗವಾಕ್ಷಿ ಕೇಂದ್ರ; ಪಿಒಪಿ ಗಣೇಶ ಮೂರ್ತಿಗೆ ನಿಷೇಧ; ತುಷಾರ್ ಗಿರಿ ನಾಥ್
ದಳಪತಿ ವಿಜಯ್ ಗುರುವಾರ ತಮ್ಮ ರಾಜಕೀಯ ಪಕ್ಷದ ಬಾವುಟ ಹಾಗೂ ಚಿಹ್ನೆಯನ್ನು ಬಿಡುಗಡೆ ಮಾಡಿದ್ದಾರೆ. ಈ ಮೂಲಕ ವಿಜಯ್ ಅವರ ಪಕ್ಷವು 2026ರ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಅವರು ಸಿದ್ಧತೆ ಮಾಡಿದ್ದಾರೆ.
Actor Vijay unveils Tamilaga Vettri Kazhagam flag, symbol
Read@ANIStory |https://t.co/TZh8MjNGio#Vijay#TamilagaVettriKazhagampic.twitter.com/KANy1yzZ8K
— ANI Digital (@ani_digital)August 22, 2024

ಟಿವಿಕೆ ಪಕ್ಷದ ಕಚೇರಿಯಲ್ಲಿ ಪಕ್ಷದ ಕಾರ್ಯಕರ್ತರ ಸಮ್ಮುಖದಲ್ಲಿ ಅವರು ಪಕ್ಷದ ಧ್ವಜ ಮತ್ತು ಚಿಹ್ನೆ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ವಿಜಯ್ ಅವರ ತಂದೆ ಮತ್ತು ತಾಯಿ, ವಿವಿಧ ಪಕ್ಷದ ಕೆಲ ನಾಯಕರು ಅಗಮಿಸಿದ್ದರು ಎಂದು ವರದಿಯಾಗಿದೆ.
ಧ್ವಜ ಬಿಡುಗಡೆ ಮಾಡಿದ ಬಳಿಕ ಮಾತನಾಡಿದ ಅವರು, “ನಮ್ಮ ದೇಶದ ಸ್ವಾತಂತ್ರ್ಯಕ್ಕಾಗಿ, ತಮಿಳುನಾಡಿನ ಮಣ್ಣಿನಿಂದ ನಮ್ಮ ಜನರ ಹಕ್ಕುಗಳಿಗಾಗಿ ಶೌರ್ಯದಿಂದ ಹೋರಾಡಿ ತಮ್ಮ ಪ್ರಾಣ ತ್ಯಾಗ ಮಾಡಿದ ಅಸಂಖ್ಯಾತ ತ್ಯಾಗವನ್ನು ನಾನು ಯಾವಾಗಲೂ ಸ್ಮರಿಸುತ್ತೇನೆ. ತಮಿಳು ಭಾಷೆಯನ್ನು ರಕ್ಷಿಸಲು ತಮ್ಮ ಪ್ರಾಣವನ್ನು ತ್ಯಾಗ ಮಾಡಿದ ಹುತಾತ್ಮರನ್ನು ಸ್ಮರಣೆ ಮಾಡುತ್ತಾ ಅವರ ದಾರಿಯಲ್ಲಿ ನಡೆಯುತ್ತೇನೆ ಭಾರತ ಸಂವಿಧಾನ ಮತ್ತು ಭಾರತ ಸಾರ್ವಭೌಮತ್ವದ ಮೇಲೆ ನನಗೆ ಸಂಪೂರ್ಣ ನನಗೆ ನಂಬಿಕೆ ಎಂದು ಹೇಳಿದರು.
ರಾಜಕೀಯ ಪಕ್ಷ ಪ್ರಾರಂಭಿಸುವುದಾಗಿ ಮೊದಲೇ ಘೋಷಿಸಿದ್ದರು: 2026ರಲ್ಲಿ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ. ಈ ವರ್ಷದ ಫೆಬ್ರವರಿಯಲ್ಲಿ ನಟ ದಳಪತಿ ವಿಜಯ್ ಅವರು ರಾಜಕೀಯ ಪಕ್ಷವನ್ನು ಪ್ರಾರಂಭಿಸುವುದಾಗಿ ಘೋಷಿಸಿದ್ದರು. ಇದರೊಂದಿಗೆ 2026ರಲ್ಲಿ ನಡೆಯಲಿರುವ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿಯೂ ವಿಜಯ್ ಹೇಳಿದ್ದರು. ಈ ವರ್ಷ ನಡೆದ ಲೋಕಸಭೆ ಚುನಾವಣೆಯಲ್ಲಿ ದಳಪತಿ ವಿಜಯ್ ಯಾವುದೇ ಮೈತ್ರಿ ಅಥವಾ ಪಕ್ಷವನ್ನು ಬೆಂಬಲಿಸಲಿಲ್ಲ.
60 ವರ್ಷದ ಅರ್ಚಕನ ಜೊತೆ 20 ವರ್ಷದ ಯುವತಿ ಚಾಟಿಂಗ್: ಆನ್​ಲೈನ್​ನಲ್ಲೇ ಪೂಜಾರಿಗೆ ಲಕ್ಷ, ಲಕ್ಷ ಪಂಗನಾಮ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − 3 =
Remember me
