ನವದೆಹಲಿ:ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ವತಿಯಿಂದ ಚಂದ್ರಯಾನ-3 ಸಲುವಾಗಿ ತಿರುಪತಿಯಲ್ಲಿ ಪೂಜೆ ನಡೆದಿದ್ದು, ಇದೀಗ ಸೂರ್ಯಯಾನ ವಿಚಾರದಲ್ಲಿ ಮತ್ತೊಮ್ಮೆ ತಿರುಪತಿಯಲ್ಲಿ ಪೂಜೆ ನಡೆದಿದೆ.
ಇಸ್ರೋ ಅಧ್ಯಕ್ಷ ಆರ್. ಸೋಮನಾಥ್ ಇಂದು ಆಂಧ್ರಪ್ರದೇಶದ ತಿರುಪತಿಯ ಚೆಂಗಲಮ್ಮ ಪರಮೇಶ್ವರಿ ದೇವಸ್ಥಾನದಲ್ಲಿ ಪೂಜೆ ನಡೆಸಿದ್ದಾರೆ. ಇಸ್ರೋದ ಉದ್ದೇಶಿತ ಸೂರ್ಯಯಾನ ಆದಿತ್ಯ ಎಲ್​-1 ಮಿಷನ್ ಸಲುವಾಗಿ ಅವರು ಈ ಪೂಜೆಯನ್ನು ಕೈಗೊಂಡಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ:ಏಯ್.. ಎಲ್ಲಿಗೆ ಬಂತು ಎಐ(AI)?; ಸೆX ರೋಬೋಗಳಲ್ಲೂ ಕೃತಕ ಬುದ್ಧಿಮತ್ತೆ; ಹಾಸಿಗೆಯಲ್ಲಿ ಸಂಗಾತಿಯೇ ಬೇಕಾಗಲ್ವಂತೆ!
ಇಂದು ಬೆಳಗ್ಗೆ 7.30ಕ್ಕೆ ದೇವಸ್ಥಾನಕ್ಕೆ ಬಂದಿದ್ದ ಸೋಮನಾಥ್, ಪೂಜೆ ಸಲ್ಲಿಸಿ ಪ್ರಾರ್ಥನೆ ಕೈಗೊಂಡರು. ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ನಾಳೆ ಸೆ.2ರಂದು ಬೆಳಗ್ಗೆ 11.50ಕ್ಕೆ ಆದಿತ್ಯ ಎಲ್​-1 ಮಿಷನ್​ ಉಡಾವಣೆ ಆಗಲಿರುವ ಕುರಿತು ಮಾಹಿತಿ ನೀಡಿದರು.
ಇದನ್ನೂ ಓದಿ:ಈಕೆಯ ಕೈ ಸ್ಕ್ಯಾನ್ ಮಾಡಿದ್ರೆ ಸಾಕು ಹಣ ಕಳಿಸಿಕೊಡಬಹುದು; ಇದಕ್ಕಿಂತ ‘ಡೈರೆಕ್ಟ್ ಟ್ರಾನ್ಸ್​ಫರ್’​ ಅಸಾಧ್ಯ ಅನಿಸುತ್ತೆ!
ಚಂದ್ರಯಾನ-3ರ ಉಡಾವಣೆಯ ಹಿಂದಿನ ರಾತ್ರಿ ಇಸ್ರೋ ಅಧ್ಯಕ್ಷರು ಇದೇ ದೇವಸ್ಥಾನಕ್ಕೆ ಬಂದು ಪೂಜೆ ಸಲ್ಲಿಸಿದ್ದರು. ಇಸ್ರೋ ಮುಖ್ಯಸ್ಥರು ಬಾಹ್ಯಾಕಾಶ ನೌಕೆ ಉಡಾವಣೆ ಸಂದರ್ಭದಲ್ಲೆಲ್ಲ ಈ ದೇವಸ್ಥಾನಕ್ಕೆ ಬಂದು ದರ್ಶನ ಪಡೆದು ಪ್ರಾರ್ಥನೆ ಸಲ್ಲಿಸುವುದು 15 ವರ್ಷಗಳಿಂದ ಪದ್ಧತಿ ಆಗಿದೆ ಎಂದು ಚೆಂಗಲಮ್ಮ ಪರಮೇಶ್ವರಿ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಶ್ರೀನಿವಾಸ ರೆಡ್ಡಿ ತಿಳಿಸಿದ್ದಾರೆ.
VIDEO | ISRO chief S Somanath offered prayers at Chengalamma Parameshwari Temple in Tirupati district, Andhra Pradesh ahead of the launch of#AdityaL1Mission.pic.twitter.com/gqxJlJ3CJi
— Press Trust of India (@PTI_News)September 1, 2023

ನೆಲದಡಿಯಲ್ಲಿದೆ ಎರಡಂತಸ್ತಿನ ಮನೆ; ಇದರ ನಿರ್ಮಾಣಕ್ಕೆ ಈತ ತೆಗೆದುಕೊಂಡ ಸಮಯ 12 ವರ್ಷ

ಪೊಲೀಸ್ ‘ಪೋಸ್ಟ್​’ಗಳಲ್ಲೂ ಕ್ರಿಯೇಟಿವಿಟಿ; ಇಂಪ್ರೆಸ್​ ಆಗುವಂತೆ ‘ಎಕ್ಸ್​’ಪ್ರೆಸ್ ಮಾಡುತ್ತಿರುವ ಪೊಲೀಸರು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight − six =
Remember me
