ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಭದ್ರತೆ ಬಿಗಿಗೊಳಿಸಲಾಗಿದ್ದು, ಶ್ರೀನಗರದಲ್ಲಿ ಕರ್ಫ್ಯೂ ಘೋಷಿಸಲಾಗಿದೆ. ಸೋಮವಾರದಿಂದಲೇ ಇದು ಜಾರಿಗೆ ಬಂದಿದ್ದು, ನಾಳೆ ರಾತ್ರಿವರೆಗೂ ಮುಂದುವರಿಯಲಿದೆ. ಇದಕ್ಕೂ ಮುನ್ನ ಪರಿಸ್ಥಿತಿ ಅವಲೋಕನಕ್ಕಾಗಿ ಸೇನೆಯ ಕೋರ್​ಗ್ರೂಪ್​ ಮೀಟಿಂಗ್ ನಡೆದಿತ್ತು ಎಂದು ಸೇನಾ ಮೂಲಗಳು ತಿಳಿಸಿವೆ.
ಜಮ್ಮು-ಕಾಶ್ಮೀರಕ್ಕೆ ಸಂಬಂಧಿಸಿ ವಿಶೇಷ ಸ್ಥಾನಮಾನ ಒದಗಿಸಿದ್ದ 370ನೇ ವಿಧಿಯನ್ನು ರದ್ದುಗೊಳಿಸಿ ನಾಳೆಗೆ ಒಂದು ವರ್ಷ. ಈ ಸಂದರ್ಭದಲ್ಲಿ ಅಹಿತಕರ ಘಟನೆಗಳು ಆಗದಿರುವಂತೆ ಮುಂಜಾಗ್ರತಾ ಕ್ರಮಗಳನ್ನು ಸ್ಥಳೀಯಾಡಳಿತ ತೆಗೆದುಕೊಂಡಿದೆ. ಆಗಸ್ಟ್ 3ರ ಸಂಜೆಯಿಂದ ಶ್ರೀನಗರದಲ್ಲಿ ಕರ್ಫ್ಯೂ ಚಾಲ್ತಿಯಲ್ಲಿದೆ. ಉಳಿದೆಡೆ ಇಂದು ಮತ್ತು ನಾಳೆ ನಿರ್ಬಂಧಗಳು ಚಾಲ್ತಿಯಲ್ಲಿ ಇರಲಿವೆ. ಇದಲ್ಲದೆ, ಕೋವಿಡ್ 19 ಸಂಬಂಧ ಜಾರಿಯಲ್ಲಿರುವ ಎಲ್ಲ ನಿರ್ಬಂಧಗಳು ಮುಂದಿನ ಆದೇಶದ ತನಕ ಚಾಲ್ತಿಯಲ್ಲಿ ಇರುತ್ತವೆ. ಇದರಲ್ಲಿ ಸದ್ಯಕ್ಕೇನೂ ಬದಲಾವಣೆ ಇಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ:ರಾಮಲಲ್ಲಾಗೆ ಸಜ್ಜಾಗಿವೆ ವಿಶೇಷ ಉಡುಪುಗಳು; ಚಿನ್ನದ ದಾರದಲ್ಲಿ ಒಂಬತ್ತು ರತ್ನ ಪೋಣಿಸಿದ ಮಖ್ಮಲ್ ವಸ್ತ್ರ, ಹಸಿರು- ಕಿತ್ತಳೆ ಬಣ್ಣದ ಬಟ್ಟೆ
ಪಾಕಿಸ್ತಾನ ಪರ ಮತ್ತು ಪ್ರಾಯೋಜಿತ ಗುಂಪು, ಸಂಘಟನೆಗಳು ಆಗಸ್ಟ್​ 5ರಂದು ಕಪ್ಪು ದಿನ ಆಚರಿಸುವುದಕ್ಕೆ ಸಿದ್ಧತೆ ನಡೆಸಿಕೊಂಡಿವೆ. ಸದ್ಯದ ಪರಿಸ್ಥಿತಿಯಲ್ಲಿ ಅಂತಹ ಯಾವುದೇ ಅಹಿತಕರ ಘಟನೆ, ಕಾರ್ಯಕ್ರಮಗಳಿಗೆ ಅವಕಾಶವಿಲ್ಲ. ಹಿಂಸಾಚಾರವೂ ನಡೆಯದು ಎಂದು ಶ್ರೀನಗರ ಪೊಲೀಸ್ ವರಿಷ್ಠಾಧಿಕಾರಿ ಹೇಳಿದ್ದಾಗಿ ವರದಿಯಾಗಿದೆ.
ಇದನ್ನೂ ಓದಿ:ಅಂಚೆ ಕಚೇರಿಗೆ ಚಿಕ್ಕ-ಚೊಕ್ಕ ಕಟ್ಟಡ
ಕಳೆದ ವರ್ಷ ಆಗಸ್ಟ್ 5ರಂದು ಜಮ್ಮು-ಕಾಶ್ಮೀರದ 370ನೇ ವಿಧಿಯ ಸವಲತ್ತನ್ನು ರದ್ದುಗೊಳಿಸುವ ತೀರ್ಮಾನವನ್ನು ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಪ್ರಕಟಿಸಿತ್ತು. ಅಲ್ಲದೆ, ಜಮ್ಮ-ಕಾಶ್ಮೀರ ಮತ್ತು ಲಡಾಖ್ ಗಳನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ವಿಂಗಡಿಸಿ ಆಡಳಿತವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿತ್ತು. (ಏಜೆನ್ಸೀಸ್)
ಆದಾಯ ತೆರಿಗೆ ಇಲಾಖೆಗೆ ಇನ್ನು ಭೇಟಿಕೊಡಬೇಕಾಗಿಲ್ಲ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 + fifteen =
Remember me
