ಚೆನ್ನೈ:ಬಿಜೆಪಿ ನೇತೃತ್ವದ ಎನ್​ಡಿಎ ಜತೆ ಕರ್ನಾಟಕದ ಜೆಡಿಎಸ್​ ಮೈತ್ರಿ ಮಾಡಿಕೊಂಡ ಬೆನ್ನಿಗೇ ಅತ್ತ ತಮಿಳುನಾಡಿನಲ್ಲಿ ಮೈತ್ರಿಯೊಂದು ಮುರಿದು ಬಿದ್ದಿರುವುದು ಖಚಿತಗೊಂಡಿದೆ. ಅರ್ಥಾತ್, ಎಐಎಡಿಎಂಕೆ ಪಕ್ಷವು ಎನ್​ಡಿಎ ಮೈತ್ರಿಕೂಟದಿಂದ ಹೊರಬಂದಿದೆ.
ಬಿಜೆಪಿಯು ಎನ್​ಡಿಎ ವಿರುದ್ಧ ಕಳೆದ ಒಂದು ವರ್ಷದಿಂದ ವಾಗ್ದಾಳಿ ನಡೆಸುತ್ತಿದ್ದು, ಎಐಎಡಿಎಂಕೆ ನಾಯಕರ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡುತ್ತಿದ್ದುದೇ ಬಿಜೆಪಿ ನೇತೃತ್ವದ ಎನ್​ಡಿಎ ಮೈತ್ರಿಕೂಟದಿಂದ ಹೊರಬರಲು ಪ್ರಮುಖ ಕಾರಣ ಎಂದು ಪಕ್ಷವು ತಿಳಿಸಿದೆ.
ರಾಜ್ಯ ಬಿಜೆಪಿ ನಾಯಕರು ನಿರಂತರವಾಗಿ ನಮ್ಮ ನಾಯಕ, ಪಕ್ಷದ ಪ್ರಧಾನ ಕಾರ್ಯದರ್ಶಿ ಪಳನಿಸ್ವಾಮಿ ವಿರುದ್ಧ ಹೇಳಿಕೆಗಳನ್ನು ನೀಡುತ್ತಿರುವುದರಿಂದ ಇಂಥದ್ದೊಂದು ನಿರ್ಧಾರವನ್ನು ಅವಿರೋಧವಾಗಿ ಕೈಗೊಳ್ಳಲಾಗಿದೆ. ಪಕ್ಷದ 2 ಕೋಟಿ ಸ್ವಯಂಸೇವಕರ ಅಭಿಪ್ರಾಯ, ಆಶಯದಂತೆ ಮೈತ್ರಿಕೂಟದಿಂದ ಹೊರಬರಲಾಗಿದೆ ಎಂದು ಎಐಎಡಿಎಂಕೆ ಹೇಳಿದೆ.
ಮುಂದಿನ ಲೋಕಸಭಾ ಚುನಾವಣೆಗೆ ಇನ್ನೇನು ಕೆಲವೇ ಸಮಯ ಇರುವಾಗ ಇಂಥದ್ದೊಂದು ಬೆಳವಣಿಗೆ ನಡೆದಿರುವುದು ಚುನಾವಣಾ ಫಲಿತಾಂಶದ ಮೇಲೆ ನಿರ್ಣಾಯಕ ಪರಿಣಾಮ ಬೀರುವ ಸಾಧ್ಯತೆ ಇದೆ ಎನ್ನಲಾಗಿದೆ.
ನಾಳೆ ಇಡೀ ಬೆಂಗಳೂರು ಬಂದ್ ಆಗ್ಬೇಕು; ಅದಾಗ್ಯೂ ವ್ಯಾಪಾರ ಮಾಡಿದ್ರೆ ಮುಂದಾಗುವ ತೊಂದರೆಗೆ ನೀವೇ ಹೊಣೆ: ಬಿಎಸ್​ವೈ

ಮೀನು ಮಾರುವವರಿಗೂ ಎಚ್ಚರಿಕೆ: ಆ ಒಂದು ದಿನ ಮಾರಾಟ ಮಾಡಿದರೆ ಕಾನೂನು ಕ್ರಮ, ದಂಡನೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 + nineteen =
Remember me
