ತಿರುವನಂತಪುರಂ​:ದುಬೈನಿಂದ 191 ಪ್ರಯಾಣಿಕರನ್ನು ಹೊತ್ತು ಕೇರಳ ತಲುಪಿದ ಏರ್​ ಇಂಡಿಯಾ ವಿಮಾನ ಕರೀಪುರದಲ್ಲಿರುವ ಕೋಳಿಕ್ಕೊಡ್​ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ರನ್​ವೇನಲ್ಲಿ ಸ್ಕಿಡ್​ ಆಗಿದ್ದು, ಅಪ್ಪಳಿಸಿದ ರಭಸಕ್ಕೆ ಎರಡು ಭಾಗವಾಗಿದೆ. ಘಟನೆಯಲ್ಲಿ ಪೈಲಟ್ ಸೇರಿದಂತೆ ಸಾವಿನ ಸಂಖ್ಯೆ 17ಕ್ಕೇರಿದೆ. ಇದನ್ನು ಮಲಪ್ಪುರಂ ಜಿಲ್ಲಾಧಿಕಾರಿ ದೃಢ ಪಡಿಸಿದ್ದಾರೆ.
ಶುಕ್ರವಾರ ರಾತ್ರಿ 7.40ರ ಸುಮಾರಿಗೆ ಭಾರಿ ಮಳೆಯ ನಡುವೆಯೇ ದುರ್ಘಟನೆ ಸಂಭವಿಸಿದ್ದು, ರಕ್ಷಣಾ ಕಾರ್ಯ ನಡೆಯುತ್ತಿದೆ. ವಿಮಾನದ ಸಂಖ್ಯೆ IX-1344 ಆಗಿದ್ದು, ಸಾರ್ವಜನಿಕವಾಗಿ ಲಭ್ಯವಾದ ಘಟನಾವಳಿಯ ಮೊದಲ ದೃಶ್ಯಗಳಲ್ಲಿ ವಿಮಾನವು ಎರಡು ತುಂಡುಗಳಾಗಿ ಒಡೆದಿದ್ದು, ಅದರ ಅವಶೇಷಗಳು ರನ್​ವೇ ಮತ್ತು ಅದರಾಚೆಗೆ ಹರಡಿಕೊಂಡಿವೆ.
ಘಟನಾ ಸ್ಥಳದಲ್ಲಿ ರಕ್ಷಣಾ ಸಿಬ್ಬಂದಿ, ಪೊಲೀಸರು ಹಾಗೂ ಆಂಬುಲೆನ್ಸ್​ಗಳು ಬೀಡುಬಿಟ್ಟಿವೆ. ಇನ್ನು ವಿಮಾನಕ್ಕೆ ಬೆಂಕಿ ತಗುಲಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. 11 ಮೃತದೇಹಗಳನ್ನು ಕೋಳಿಕ್ಕೊಡ್​ ಮೆಡಿಕಲ್​ ಕಾಲೇಜಿನಲ್ಲಿ ಇಡಲಾಗಿದೆ. 6 ಮೃತದೇಹಗಳು ಮಲಪ್ಪುರಂನ ಆಸ್ಪತ್ರೆಯಲ್ಲಿವೆ. ಗಾಯಗೊಂಡಿರುವ 35 ಮಂದಿಯನ್ನು ಕೊಂಡಾಟಿ ರಿಲೀಫ್ ಆಸ್ಪತ್ರೆಗೆ ರವಾನಿಸಲಾಗಿದೆ. ವಿಮಾನದಲ್ಲಿ 174 ಪ್ರಯಾಣಿಕರು, 10 ಶಿಶುಗಳು, ಇಬ್ಬರು ಪೈಲಟ್ಸ್​ ಮತ್ತು 5 ಕ್ಯಾಬಿನ್​ ಸಿಬ್ಬಂದಿ ಇದ್ದರು.
ಮೃತ ಪೈಲಟ್​ ಅನ್ನು ಕ್ಯಾಪ್ಟನ್​ ದೀಪಕ್​ ವಸಂತ್​ ಸಾಠೆ ಎಂದು ಗುರುತಿಸಲಾಗಿದೆ. ಅವಗಢದಲ್ಲಿ ಕೋ ಪೈಲಟ್ ಕೂಡ ಮೃತಪಟ್ಟಿದ್ದಾರೆ ಎನ್ನಲಾಗಿದೆ. ವಿಮಾನ 7.38ಕ್ಕೆ ಲ್ಯಾಂಡಿಂಗ್ ಆಗಿತ್ತು. ಆದರೆ, ನಿಯಂತ್ರಣ ತಪ್ಪಿ 30 ಅಡಿ ಕೆಳಗೆ ಬಿದ್ದಿದೆ. ಇದರಿಂದಾಗಿ ವಿಮಾನ ಎರಡು ಭಾಗಗಳಾಗಿವೆ. ಪೈಲಟ್​ಗೆ ರನ್ ವೇ ಸ್ಪಷ್ಟವಾಗಿ ಕಾಣದೆ ಅಪಫಾತ ಸಂಭವಿಸಿದೆ ಎಂದು ತಿಳಿದುಬಂದಿದೆ.
ಘಟನೆ ಬೆನ್ನಲ್ಲೇ ಕೇರಳ ಸಿಎಂ ಪಿಣರಾಯ್​ ವಿಜಯನ್​ ಟ್ವೀಟ್​ ಮಾಡಿದ್ದು, ಕರೀಪುರದಲ್ಲಿ ಕೋಳಿಕ್ಕೋಡ್​ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಂಭವಿಸಿರುವ ವಿಮಾನ ಪತನ ಬಗ್ಗೆ ಅಗ್ನಿಶಾಮಕದಳ ತಕ್ಷಣ ಕಾರ್ಯಪ್ರವೃತ್ತರಾಗುವಂತೆ ಸೂಚಿಸಲಾಗಿದೆ. ರಕ್ಷಣೆಗೆ ಹಾಗೂ ವೈದ್ಯಕೀಯ ನೆರವಿಗೆ ಬೇಕಾದ ಅಗತ್ಯ ಸೇವೆಗಳನ್ನು ಹೊಂದಿಸಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಹೇಳಿದ್ದಾರೆ.
Have instructed Police and Fire Force to take urgent action in the wake of the plane crash at the Kozhikode International airport (CCJ) in Karipur. Have also directed the officials to make necessary arrangements for rescue and medical support.
— Pinarayi Vijayan (@pinarayivijayan)August 7, 2020

ಗೃಹಸಚಿವ ಅಮಿತ್​ ಶಾ ಸಹ ಟ್ವೀಟ್​ ಮಾಡಿ, ಕೋಳಿಕ್ಕೊಡ್​ನಲ್ಲಿ ಏರ್​ ಇಂಡಿಯಾ ವಿಮಾನದ ದುರಂತದ ಬಗ್ಗೆ ಕೇಳಿ ದುಃಖವಾಯಿತು. ಸ್ಥಳಕ್ಕೆ ಬೇಗ ತಲುಪಿ ರಕ್ಷಣಾ ಕಾರ್ಯದಲ್ಲಿ ಭಾಗಿಯಾಗುವಂತೆ ರಾಷ್ಟ್ರೀಯ ವಿಪತ್ತು ನಿರ್ವಹಣ ತಂಡಕ್ಕೆ ಸೂಚಿಸಿದ್ದೇನೆ ಎಂದು ಹೇಳಿದ್ದಾರೆ.
Distressed to learn about the tragic accident of Air India Express aircraft in Kozhikode, Kerala.
Have instructed NDRF to reach the site at the earliest and assist with the rescue operations.
— Amit Shah (@AmitShah)August 7, 2020

ಕೇರಳಕ್ಕೆ ಈ ದಿನ ಕರಾಳ ಶುಕ್ರವಾರವಾಗಿದೆ. ಭಾರಿ ಮಳೆಯಿಂದ ಇಂದು ಹಲವೆಡೆ ಸಂಭವಿಸಿದ ಭೂಕುಸಿತದಿಂದಾಗಿ ಸುಮಾರು 15 ಮಂದಿ ಬಲಿಯಾಗಿದ್ದಾರೆ. ಇದರ ಬೆನ್ನಲ್ಲೇ ವಿಮಾನ ದುರಂತ ನಡೆದಿರುವುದು ಆತಂಕಕ್ಕೆ ದೂಡಿದೆ.
Kerala: An Air India Express plane skidded during landing at Karipur Airport, Kozhikode. More details awaited.pic.twitter.com/TxrQEzxPDV
— ANI (@ANI)August 7, 2020

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − two =
Remember me
