ನವದೆಹಲಿ:ನಮ್ಮನ್ನು ಬೀದಿಯಲ್ಲಿ ಎಳೆದಾಡಿದಾಗ ಬಿಜೆಪಿ ಹೊರತುಪಡಿಸಿ ಎಲ್ಲಾ ಪಕ್ಷಗಳು ನಮ್ಮ ಜೊತೆಗಿದ್ದವು ಎಂದು ಕುಸ್ತಿಪಟು ವಿನೇಶ್​ ಫೋಗೇಟ್ ವಾಗ್ದಾಳಿ ನಡೆಸಿದರು.
ಇದನ್ನೂ ಓದಿ:ಮೈಸೂರು: ವರದಕ್ಷಿಣೆ ಕಿರುಕುಳ ತಾಳಲಾರದೆ ಎಂಟು ತಿಂಗಳ ಗರ್ಭಿಣಿ ಆತ್ಮಹತ್ಯೆಗೆ ಶರಣು
ಲೈಂಗಿಕ ದೌರ್ಜನ್ಯದ ಆರೋಪದ ಮೇಲೆ ಕುಸ್ತಿ ಫೆಡರೇಷನ್‌ ಅಧ್ಯಕ್ಷ ಬ್ರಿಜ್‌ಭೂಷಣ್‌ ಸಿಂಗ್‌ ವಿರುದ್ಧ ಬೀದಿಗಿಳಿದಿದ್ದ ಒಲಿಂಪಿಕ್‌ ಪದಕ ವಿಜೇತ ಕುಸ್ತಿಪಟುಗಳಾದ ಬಜರಂಗ್‌ ಪೂನಿಯಾ ಹಾಗೂ ವಿನೇಶ್‌ ಫೋಗಟ್‌ ಅಧಿಕೃತವಾಗಿ ಕಾಂಗ್ರೆಸ್‌ ಪಕ್ಷ ಸೇರಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದರು.
ಕಷ್ಟದ ಸಮಯದಲ್ಲಿ ನಿಮ್ಮ ಜೊತೆ ಯಾರು ಇರುತ್ತಾರೆ ಎಂಬುದು ಅರಿವಾಗುತ್ತದೆ. ನಮ್ಮನ್ನು ಬೀದಿಯಲ್ಲಿ ಎಳೆದಾಡಿದಾಗ, ಬಿಜೆಪಿ ಹೊರತುಪಡಿಸಿ ಎಲ್ಲಾ ಪಕ್ಷಗಳು ನಮ್ಮ ಜೊತೆಗಿದ್ದವು. ಅಂತಹ ಸಮಯದಲ್ಲಿ ನಮ್ಮ ಜೊತೆಗಿದ್ದ ಕಾಂಗ್ರೆಸ್ ಪಕ್ಷಕ್ಕೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ ಎಂದು ಹೇಳಿದರು.
ಕಾಂಗ್ರೆಸ್​ ಪಕ್ಷ ಸೇರಿದ್ದಕ್ಕೆ ನನಗೆ ಹೆಮ್ಮೆ ಎನಿಸುತ್ತದೆ. ಮಹಿಳೆಯರೊಂದಿಗೆ ನಿಂತಿರುವ ಮತ್ತು ಹಳ್ಳಿಯಿಂದ ದಿಲ್ಲಿಯವರಿಗೆ ಹೋರಾಡಲು ಸಿದ್ಧವಾಗಿರುವ ಪಕ್ಷ, “ಎಂದು ಅವರು ಬಣ್ಣಿಸಿದರು.
ಪ್ರತಿಭಟನೆ ವೇಳೆ ಬಿಜೆಪಿ ಐಟಿ ಸೆಲ್ ನಮ್ಮ ವಿರುದ್ಧ ಅಪಪ್ರಚಾರ ಮಾಡಿತ್ತು. ಆಗಲೇ ನಾವು ಕುಸ್ತಿಯಿಂದ ದೂರ ಸರಿಯಬೇಕಿತ್ತು. ನಾವು ರಾಜಕೀಯ ಮಾಡುತ್ತಿದ್ದೇವೆ ಎಂದು ಅವರು ಹೇಳಿದರು, ರಾಷ್ಟ್ರೀಯ ಮಟ್ಟದಲ್ಲಿ ಆಡಲು ನನಗೆ ಇಷ್ಟವಿಲ್ಲ ಎಂದು ಹೇಳಿದ್ದರು. ನಾನು ಆಡಿದೆ. ಟ್ರಯಲ್ಸ್​ನಲ್ಲಿ ಆಡಲು ನನಗೆ ಇಷ್ಟವಿಲ್ಲ ಎಂದಿದ್ದರು. ನಾನು ಭಾಗವಹಿಸಿದೆ. ನಾನು ಒಲಿಂಪಿಕ್ಸ್‌ಗೆ ಹೋಗುವುದಿಲ್ಲ ಎಂದು ಹೇಳಿದರು, ಆದರೆ ನಾನು ಹೋಗಿ ಫೈನಲ್‌ಗೆ ತಲುಪಿದೆ ಎಂದು ಬಿಜೆಪಿ ವಿರುದ್ಧ ವಿನೇಶ್ ಆಕ್ರೋಶ ವ್ಯಕ್ತಪಡಿಸಿದರು.
ನನ್ನ ದೇಶದ ಜನರ ಸೇವೆ ಮಾಡುವ ಅವಕಾಶವನ್ನು ದೇವರು ನನಗೆ ನೀಡಿದ್ದಾರೆ. ಇದಕ್ಕಿಂತ ಆರ್ಶೀವಾದದ ಕೆಲಸ ಇರಲಾರದು ಎಂದು ನಾನು ನಂಬುತ್ತೇನೆ. ಈ ಹೊಸ ಆರಂಭದ ಬಗ್ಗೆ ನನಗೆ ತುಂಬಾ ಹೆಮ್ಮೆಯಾಗುತ್ತಿದೆ. ನಾವು ಕಾಂಗ್ರೆಸ್ ಪಕ್ಷ ಮತ್ತು ರಾಷ್ಟ್ರವನ್ನು ಬಲಪಡಿಸಲು ಶ್ರಮಿಸುತ್ತೇವೆ. ವಿನೇಶ್ ಫೈನಲ್‌ಗೆ ಅರ್ಹತೆ ಪಡೆದ ದಿನ ದೇಶಕ್ಕೆ ದೇಶವೇ ಖುಷಿ ಪಟ್ಟಿತ್ತು, ಆದರೆ ಮರುದಿನ ಎಲ್ಲರೂ ದುಃಖಿತರಾಗಿದ್ದರು. ಆ ಸಮಯದಲ್ಲಿ ಒಂದು ಐಟಿ ಸೆಲ್ ಸಂಭ್ರಮಿಸುತ್ತಿತ್ತು ಎಂದು ಪುನಿಯಾ ಹೇಳಿದ್ದಾರೆ.
ಅಕ್ಟೋಬರ್ 5 ರಂದು ನಡೆಯಲಿರುವ 90 ಸದಸ್ಯ ಹರಿಯಾಣ ಅಸೆಂಬ್ಲಿಗೆ ಮತದಾನ ನಡೆಯಲಿದ್ದು, ಅಕ್ಟೋಬರ್ 8 ರಂದು ಮತ ಎಣಿಕೆ ನಡೆಯಲಿದೆ. ಕುಸ್ತಿಪಟುಗಳಾದ ವಿನೇಶ್ ಫೋಗಟ್ ಮತ್ತು ಬಜರಂಗ್ ಪುನಿಯಾ ಶುಕ್ರವಾರ ಕಾಂಗ್ರೆಸ್ ಸೇರುವ ಮೊದಲು ಭಾರತೀಯ ರೈಲ್ವೆಯಲ್ಲಿನ ತಮ್ಮ ಹುದ್ದೆಗಳಿಗೆ ರಾಜೀನಾಮೆ ಸಲ್ಲಿಸಿದ್ದರು.
ಈ ಬಾರಿಯ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ವಿನೇಶ್ ಪೋಗಟ್ 100 ಗ್ರಾಂ ಅಧಿಕ ತೂಕ ಹೊಂದಿರುವ ಕಾರಣ 50 ಕೆಜಿ ಚಿನ್ನದ ಪದಕದ ಸ್ಪರ್ಧೆಯಿಂದ ಅನರ್ಹಗೊಂಡಿದ್ದರು. ಕೋರ್ಟ್ ಆಫ್ ಆರ್ಬಿಟ್ರೇಶನ್ ಫಾರ್ ಸ್ಪೋರ್ಟ್ (ಸಿಎಎಸ್) ತನಗೆ ಬೆಳ್ಳಿ ಪದಕವನ್ನು ನೀಡಬೇಕೆಂಬ ಆಕೆಯ ಅರ್ಜಿಯನ್ನು ವಜಾಗೊಳಿಸಿತ್ತು. ತನ್ನ ಅನರ್ಹತೆಯ ಒಂದು ದಿನದ ನಂತರ ಆಗಸ್ಟ್ 8ರಂದು ಅವರು ಕುಸ್ತಿಯಿಂದ ನಿವೃತ್ತಿ ಘೋಷಿಸಿದರು.
ಡೈಮಂಡ್ ಲೀಗ್‌: ಫೈನಲ್‌ ಪ್ರವೇಶಿಸಿದ ಭಾರತದ ಚಿನ್ನ ಹುಡುಗ ನೀರಜ್ ಚೋಪ್ರಾ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − two =
Remember me
