ನವದೆಹಲಿ:ಭಾರತದ ಒಟ್ಟಾರೆ ಕರೊನಾ ಸೋಂಕಿತರ ಪೈಕಿ ಗರಿಷ್ಠ ಸೋಂಕಿತರನ್ನು ಹೊಂದಿರುವ ಗುಜರಾತ್​ ಮತ್ತು ಮಹಾರಾಷ್ಟ್ರ ರಾಜ್ಯಗಲ್ಲದೆ ಕರ್ನಾಟಕ ಕೂಡ ನೈಸರ್ಗಿಕ ವಿಕೋಪಕ್ಕೂ ತುತ್ತಾಗುವುದು ಬಹುತೇಕ ಖಚಿತವಾಗಿದೆ.
ಅರಬ್ಬಿ ಸಮುದ್ರ ಮತ್ತು ಲಕ್ಷದ್ವೀಪ್​ನ ಆಗ್ನೇಯ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಸೋಮವಾರದಂದು ಅದು ಗರಿಷ್ಠ ಪ್ರಮಾಣಕ್ಕೆ ಕುಸಿಯುವ ಸಾಧ್ಯತೆ ಇದೆ. ಮಂಗಳವಾರ ಅದು ಅದು ಚಂಡಮಾರುತವಾಗಿ ರೂಪಾಂತರಗೊಂಡು ಕರ್ನಾಟಕ, ಮಹಾರಾಷ್ಟ್ರದ ಉತ್ತರ ಕರಾವಳಿ ಮತ್ತು ಗುಜರಾತ್​ ಕರಾವಳಿ ಪ್ರದೇಶಗಳಿಗೆ ಜೂನ್​ 3ರಂದು ಅಪ್ಪಳಿಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಈ ಚಂಡಮಾರುತಕ್ಕೆ ನಿಸರ್ಗ ಚಂಡಮಾರುತ ಎಂದು ಹೆಸರಿಡಲಾಗಿದೆ.
ಚಂಡಮಾರುತವು ಉತ್ತರ ದಿಕ್ಕಿನಲ್ಲಿ ಚಲಿಸುತ್ತಿದೆ ಇದು ಈಶಾನ್ಯ ದಿಕ್ಕಿಗೆ ತಿರುಗಿಕೊಳ್ಳುವ ಸಾಧ್ಯತೆ ಇದ್ದು, ಜೂನ್​ 3ರ ಬೆಳಗ್ಗೆ ಗುಜರಾತ್​ ಮತ್ತು ಮಹಾರಾಷ್ಟ್ರದ ಉತ್ತರ ಕರಾವಳಿ ಪ್ರದೇಶವನ್ನು ತಲುಪುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯ ಪ್ರಧಾನ ಮಹಾನಿರ್ದೇಶಕ ಮೃತ್ಯುಂಜಯ ಮಹಾಪಾತ್ರ ತಿಳಿಸಿದ್ದಾರೆ.
ಇದನ್ನೂ ಓದಿ:PHOTO GALLERY| ಡಾಕ್ಟರ್​ ಜೋಡಿಯ ಪ್ರೀತಿಗೆ ಕರೊನಾವೇ ಸಾಕ್ಷಿ: ನೀವು ನೋಡಿರದ ಫೋಟೋಶೂಟ್​ ಇದು!
ಇದರ ಪರಿಣಾಮ ಭಾನುವಾರ ಸಂಜೆಯಿಂದ ಆರಂಭವಾಗಿ ಕರ್ನಾಟಕದ ಕರಾವಳಿ ಪ್ರದೇಶದಲ್ಲಿ ಸೋಮವಾರದವರೆಗೆ ಭಾರಿ ಮಳೆಯಾಗಲಿದೆ. ಮುಂಬೈ ಮತ್ತು ಥಾಣೆಯಲ್ಲಿ ಭಾರಿ ಮಳೆಯಾಗುವ ಸಂಭವ ಇರುವುದರಿಂದ ಕೆಂಪು ಸೂಚನೆ ರವಾನಿಸಲಾಗಿದೆ. ಜೂನ್​ 3 ಮತ್ತು 4ರಂದು ಪಾಲ್ಗಾರ್​ನಲ್ಲಿ ಕೂಡ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.
ಮೇ 20ರಂದು ಅಂಫಾನ್​ ಚಂಡಮಾರುತ ಭಾರತದ ಪೂರ್ವ ಕರಾವಳಿ ಪ್ರದೇಶಗಳಾದ ಪಶ್ಚಿಮ ಬಂಗಾಳ ಮತ್ತು ಒಡಿಶಾಕ್ಕೆ ಅಪ್ಪಳಿಸಿತ್ತು. ಅಂದಾಜು 100ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದರು. ಇದರ ಬೆನ್ನಲ್ಲೇ ಈಗ ಪಶ್ಚಿಮ ಕರಾವಳಿ ಪ್ರದೇಶಕ್ಕೆ ಚಂಡಮಾರುತ ಅಪ್ಪಳಿಸಲಿದೆ.
ಬಾಲಿವುಡ್​ ನಟ ಅರ್ಷದ್​ ವಾರ್ಸಿ ಚಾಲಕರಾಗಿ ಕೆಲಸ ಮಾಡಿದ್ದ ಬಿಗ್​ ಬಿ ಪುತ್ರ ಅಭಿಷೇಕ್​ ಬಚ್ಚನ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven − 8 =
Remember me
