ನವದೆಹಲಿ:ದೀಪಾವಳಿ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಿನ್ನೆ (ನ.11) ನಡೆದ ದೀಪೋತ್ಸವವನ್ನು ಅದ್ಭುತ, ದೈವಿಕ ಮತ್ತು ಅವಿಸ್ಮರಣೀಯ ಎಂದು ಕರೆದ ಪ್ರಧಾನಿ ಮೋದಿ, ದೀಪೋತ್ಸವ ಆಚರಣೆಯ ಕೆಲವು ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
अद्भुत, अलौकिक और अविस्मरणीय!
लाखों दीयों से जगमग अयोध्या नगरी के भव्य दीपोत्सव से सारा देश प्रकाशमान हो रहा है। इससे निकली ऊर्जा संपूर्ण भारतवर्ष में नई उमंग और नए उत्साह का संचार कर रही है। मेरी कामना है कि भगवान श्री राम समस्त देशवासियों का कल्याण करें और मेरे सभी…pic.twitter.com/3dehLH45Tp
— Narendra Modi (@narendramodi)November 12, 2023

ಎಕ್ಸ್​ (ಈ ಹಿಂದೆ ಟ್ವಿಟರ್​) ಖಾತೆಯಲ್ಲಿ ಪೋಸ್ಟ್​ ಮಾಡಿರುವ ಪ್ರಧಾನಿ ಮೋದಿ, ಅಯೋಧ್ಯೆಯಲ್ಲಿ ಹಚ್ಚಲಾದ ಲಕ್ಷಾಂತರ ದೀಪಗಳ ಬೆಳಕಿನಲ್ಲಿ ಇಡೀ ಭಾರತ ಪ್ರಕಾಶಿಸಿದೆ ಎಂದು ವರ್ಣಿಸಿದ್ದಾರೆ.

ಲಕ್ಷಾಂತರ ದೀಪಗಳಿಂದ ಬೆಳಗುತ್ತಿರುವ ಅಯೋಧ್ಯಾ ನಗರದ ದೀಪಗಳ ಮಹಾ ಉತ್ಸವದಿಂದ ಇಡೀ ದೇಶವು ಪ್ರಕಾಶಿಸುತ್ತಿದೆ. ಇದರಿಂದ ಹೊರಹೊಮ್ಮುವ ಶಕ್ತಿ ಭಾರತದಾದ್ಯಂತ ಹೊಸ ಹುಮ್ಮಸ್ಸು ಮತ್ತು ಉತ್ಸಾಹವನ್ನು ಪಸರಿಸುತ್ತಿದೆ. ಭಗವಾನ್ ಶ್ರೀರಾಮನು ಎಲ್ಲ ದೇಶವಾಸಿಗಳಿಗೆ ಒಳ್ಳೆಯದನ್ನು ಮಾಡಲಿ ಮತ್ತು ನನ್ನ ಎಲ್ಲಾ ಕುಟುಂಬ ಸದಸ್ಯರಿಗೆ ಸ್ಫೂರ್ತಿಯಾಗಲಿ ಎಂದು ನಾನು ಬಯಸುತ್ತೇನೆ ಎಂದು ಪ್ರಧಾನಿ ಶುಭಕೋರಿದ್ದಾರೆ.

ಉತ್ತರ ಪ್ರದೇಶ ಸರ್ಕಾರವು ದೀಪಾವಳಿ ಆಚರಣೆಯ ಅಂಗವಾಗಿ ಅಯೋಧ್ಯೆಯ 51 ಘಾಟ್​ಗಳಲ್ಲಿ ಏಕಕಾಲದಲ್ಲಿ ಅಂದಾಜು 22.23 ಲಕ್ಷ ಮಣ್ಣಿನ ದೀಪಗಳನ್ನು ಬೆಳಗಿಸುವ ಮೂಲಕ ಶನಿವಾರ (ನ.11) ಹೊಸ ಗಿನ್ನೆಸ್ ದಾಖಲೆ ನಿರ್ವಿುಸಿದೆ.

ಗಿನ್ನೆಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ತಂಡವು ಡ್ರೋನ್ ಕ್ಯಾಮೆರಾ ಸಹಾಯದಿಂದ ದೀಪಗಳನ್ನು ಎಣಿಸಿತು. ಅವಧ್ ವಿಶ್ವ ವಿದ್ಯಾಲಯ ಮತ್ತು ಅಯೋಧ್ಯೆ ಜಿಲ್ಲಾಡಳಿತದಿಂದ 25,000ಕ್ಕೂ ಹೆಚ್ಚು ಸ್ವಯಂಸೇವಕರು ಒಂದೇ ಸಮಯದಲ್ಲಿ ದೀಪಗಳನ್ನು ಬೆಳಗಿಸಿದರು. ರಾಜ್ಯಪಾಲ ಆನಂದಿಬೆನ್ ಪಟೇಲ್, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಉಪಮುಖ್ಯಮಂತ್ರಿ, ಕ್ಯಾಬಿನೆಟ್ ಸಚಿವರು ಮತ್ತು 52 ದೇಶಗಳ ರಾಯಭಾರಿಗಳು ಈ ಸಮಾರಂಭದಲ್ಲಿ ಉಪಸ್ಥಿತರಿದ್ದರು. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿರುವ ಹಿನ್ನೆಲೆಯಲ್ಲಿ ಈ ವರ್ಷದ ಕಾರ್ಯಕ್ರಮಕ್ಕೆ ಹೆಚ್ಚಿನ ಮೆರುಗು ಬಂದಿದೆ.

ಶನಿವಾರದ ಏಳನೇ ದೀಪೋತ್ಸವದ ಮೊದಲು ಆಕರ್ಷಕ ಮೆರವಣಿಗೆ ನಡೆಯಿತು. ಜಾನಪದ ಕಲಾತಂಡಗಳು ಮತ್ತು ಆರತಿಗಳಿಂದ ಕೂಡಿದ ಮೆರವ ಣಿಗೆಯು ಉದಯ ಚೌಕದಿಂದ ಹೊರಟು ನಗರದ ವಿವಿಧ ಭಾಗಗಳ ಮೂಲಕ ರಾಮ ಕಥಾ ಉದ್ಯಾನವನವನ್ನು ತಲುಪಿತು. ಉತ್ತರ ಪ್ರದೇಶದ ಪ್ರವಾಸೋದ್ಯಮ ಮತ್ತು ಸಂಸ್ಕೃತಿ ಸಚಿವ ಜೈವೀರ್ ಸಿಂಗ್ ಅವರು ಧ್ವಜಾರೋಹಣ ಮಾಡುವ ಮೂಲಕ ಇದಕ್ಕೆ ಚಾಲನೆ ನೀಡಿದರು. ನಂತರ ನಡೆದ ರಾಮನ ಪಟ್ಟಾಭಿಷೇಕ ಮಹೋತ್ಸವದಲ್ಲಿ 50 ಪ್ರಮುಖ ದೇಶಗಳ ರಾಜತಾಂತ್ರಿಕರು ಉಪಸ್ಥಿತರಿದ್ದರು.

2017ರಲ್ಲಿ ಆರಂಭಅಯೋಧ್ಯೆಯಲ್ಲಿ ದೀಪೋತ್ಸವ ಸಂಪ್ರದಾಯವು 2017 ರಲ್ಲಿ ಯೋಗಿ ಆದಿತ್ಯನಾಥ್ ಸರ್ಕಾರ ರಚನೆಯೊಂದಿಗೆ ಪ್ರಾರಂಭವಾಯಿತು. 2017ರಲ್ಲಿ 51,000 ದೀಪಗಳೊಂದಿಗೆ ಪ್ರಾರಂಭವಾಗಿ ಈ ಸಂಖ್ಯೆ 2019 ರಲ್ಲಿ 4.10 ಲಕ್ಷಕ್ಕೆ ಏರಿತು. 2020ರಲ್ಲಿ 6 ಲಕ್ಷಕ್ಕೂ ಹೆಚ್ಚು ಮತ್ತು 2021ರಲ್ಲಿ 9ಲಕ್ಷಕ್ಕೂ ಹೆಚ್ಚು ದೀಪಗಳನ್ನು ಬೆಳಗಿ ಗಿನ್ನೆಸ್ ವಿಶ್ವ ದಾಖಲೆಯನ್ನು ಸೃಷ್ಟಿಸಲಾಯಿತು. 2022 ರಲ್ಲಿ, ರಾಮ್ ಕಿ ಪೈರಿಯ ಘಾಟ್​ಗಳಾದ್ಯಂತ 17 ಲಕ್ಷಕ್ಕೂ ಹೆಚ್ಚು ದೀಪಗಳನ್ನು ಬೆಳಗಿಸಲಾಯಿತು. ಆದರೆ, ಗಿನ್ನೆಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ಕೇವಲ ಐದು ನಿಮಿಷ ಅಥವಾ ಅದಕ್ಕಿಂತ ಹೆಚ್ಚು ಕಾಲ ಬೆಳಗಿದ ಆ ದೀಪಗಳನ್ನು ಪರಿಗಣನೆಗೆ ತೆಗೆದುಕೊಂಡಿತು. ಇದರಿಂದಾಗಿ ದಾಖಲೆಯು ದೀಪಗಳ 15.76 ಲಕ್ಷಕ್ಕೆ ಸೀಮಿತವಾಯಿತು. ಕಳೆದ ಅಕ್ಟೋಬರ್​ನಲ್ಲಿ ನಡೆದ ಈ ಕೊನೆಯ ದೀಪೋತ್ಸವದಲ್ಲಿ ಪ್ರಧಾನಿ ನರೇಂದ್ರ ಮೋದಿ ಮುಖ್ಯ ಅತಿಥಿಯಾಗಿದ್ದರು.(ಏಜೆನ್ಸೀಸ್​)

ಅಯೋಧ್ಯೆ ದೀಪೋತ್ಸವ ವಿಶ್ವ ದಾಖಲೆ: ಏಕಕಾಲಕ್ಕೆ 22 ಲಕ್ಷಕ್ಕೂ ಅಧಿಕ ಹಣತೆ ಬೆಳಗಿಸಿದ 25 ಸಾವಿರ ಸ್ವಯಂಸೇವಕರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × four =
Remember me
