ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್​ ಷಾ ಹಾಗೂ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್​ ದೋವಲ್​ ಅವರು ಈಶಾನ್ಯ ದೆಹಲಿಯ ಗಲಭೆ ಪೀಡಿತ ಪ್ರದೇಶದ ಪರಿಸ್ಥಿತಿ ಬಗ್ಗೆ 2 ತಾಸಿಗೂ ಅಧಿಕ ಕಾಲ ಚರ್ಚೆ ನಡೆಸಿದರು.
ಗಲಭೆ ಪೀಡಿತ ಪ್ರದೇಶಗಳಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಹಿಂಸಾಚಾರ ಪೀಡಿತ ಪ್ರದೇಶಗಳಲ್ಲಿ ಶಾಂತಿ ಕಾಪಾಡಲು ಎಲ್ಲ ರೀತಿಯ ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದು ಸಭೆ ನಂತರ ಅಜಿತ್​ ದೋವಲ್​ ತಿಳಿಸಿದರು.
ಅಜಿತ್​ ದೋವಲ್ 24 ತಾಸುಗಳಲ್ಲಿ ಎರಡು ಬಾರಿಗೆ ಗಲಭೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ್ದಾರೆ. ಮಂಗಳವಾರ ತಡರಾತ್ರಿ ಅವರು ಗಲಭೆ ಪೀಡಿತ ಪ್ರದೇಶಗಳಿಗೆ ತೆರಳಿ ಪರಿಶೀಲನೆ ನಡೆಸಿದ್ದರು. ನಂತರ ಗುರುವಾರ ಕೂಡ ಅವರು ಪರಿಶೀಲನೆ ನಡೆಸಿದರು.
ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ವಿರೋಧಿಸಿ ಪ್ರತಿಭಟನೆ ನಡೆಯುತ್ತಿದ್ದ ಈಶಾನ್ಯ ದೆಹಲಿ ಪ್ರದೇಶದಲ್ಲಿ ಹಿಂಸಾಚಾರ ಸಂಭವಿಸಿ ಇಬ್ಬರು ಪೊಲೀಸರು ಸೇರಿ 32 ಮಂದಿ ಮೃತಪಟ್ಟಿದ್ದಾರೆ. ಗಲಭೆಯಲ್ಲಿ 330 ಮಂದಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗಲಭೆ ನಿಯಂತ್ರಣಕ್ಕೆ ಸೇನಾ ತುಕಡಿ ನಿಯೋಜಿಸಲಾಗಿದೆ. (ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × four =
Remember me
