ಕಲ್ಕತ್ತ:ಪಶ್ಚಿಮ ಬಂಗಾಳದ ಕೂಚ್ ಬೆಹರ್ ಜಿಲ್ಲೆಯ ಸೀತಾಲಕುಚಿ ವಿಧಾನಸಭಾ ಕ್ಷೇತ್ರದಲ್ಲಿ ಇಂದು ನಡೆದ ಚುನಾವಣಾ ಹಿಂಸಾಚಾರಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೇ ಹೊಣೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.
ಮತಗಟ್ಟೆಯೊಂದರಲ್ಲಿ ಹಿಂಸಾಚಾರಕ್ಕೆ ಯತ್ನಿಸಿದವರ ಮೇಲೆ ಭದ್ರತೆಯಲ್ಲಿದ್ದ ಸಿಐಎಸ್​ಎಫ್​ ಯೋಧರು ಹಾರಿಸಿದ ಗುಂಡಿನಿಂದ ಐವರು ಮತದಾರರು ಮೃತಪಟ್ಟಿದ್ದಾರೆ. ಇದಕ್ಕೆ ಅಮಿತ್ ಶಾ ಅವರೇ ಕಾರಣ ಎಂದು ದೀದಿ ಶನಿವಾರ ಹೇಳಿದ್ದಾರೆ.
ಮತದಾನಕ್ಕೆ ಸರತಿ ಸಾಲಿನಲ್ಲಿ ನಿಂತಿದ್ದವರ ಮೇಲೆ ಕೇಂದ್ರಿಯ ಭದ್ರತಾ ಪಡೆಗಳು ಗುಂಡು ಹಾರಿಸಿವೆ. ಕೇಂದ್ರದ ಅಧಿಕಾರಿಗಳ ನೆರಳಿನಲ್ಲೇ ಈ ಘಟನೆ ಆಗಿದೆ. ಇದಕ್ಕೆ ಅಮಿತ್ ಶಾ ವಿವರಣೆ ನೀಡಬೇಕು. ಬಿಜೆಪಿಗೆ ಸೋಲುವ ಭಯ ಕಾಡುತ್ತಿದೆ. ಅದಕ್ಕೆ ಹೀಗೆಲ್ಲ ಮಾಡುತ್ತಿದೆ ಎಂದು ಮಮತಾ ಆರೋಪಿಸಿದ್ದಾರೆ.
ಇನ್ನು ಈ ಘಟನೆ ಬಗ್ಗೆ ತನಿಖೆ ನಡೆಸಲು ಸಿಐಡಿಗೆ ಮಮತಾ ಬ್ಯಾನರ್ಜಿ ಆದೇಶಿಸಿದ್ದಾರೆ. ಚುನಾವಣಾ ಆಯೋಗ ಸೀತಾಲಕುಚಿಯ ಮತಗಟ್ಟೆಯಲ್ಲಿ ಮತದಾನವನ್ನು ರದ್ದು ಮಾಡಿದೆ. ನಾಳೆ ಹಿಂಸಾಚಾರ ನಡೆದ ಸ್ಥಳಕ್ಕೆ ಭೇಟಿ ನೀಡುವುದಾಗಿ ಮಮತಾ ಬ್ಯಾನರ್ಜಿ ಹೇಳಿದ್ಧಾರೆ.
ತೆಲಂಗಾಣದಲ್ಲಿ ರಾಜಕೀಯ ಬಿರುಗಾಳಿ ಎಬ್ಬಿಸಿದ ವೈಎಸ್ ಶರ್ಮಿಳಾ!

ಪಶ್ಚಿಮ ಬಂಗಾಳದಲ್ಲಿ ಮತದಾನದ ನಡುವೆಯೇ ಗುಂಡಿನ ದಾಳಿ: ಐವರು ಸಾವು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − sixteen =
Remember me
