ಕಲ್ಕತ್ತ:ಪಶ್ಚಿಮ ಬಂಗಾಳದ ಕೂಚ್ ಬೆಹಾರ್ ಜಿಲ್ಲೆಯಲ್ಲಿ ನಿನ್ನೆ ಸಂಭವಿಸಿದ ಹಿಂಸಾಚಾರವನ್ನು ಮಮತಾ ಬ್ಯಾನರ್ಜಿ ರಾಜಕೀಯಗೊಳಿಸಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಆರೋಪಿಸಿದ್ದಾರೆ.
ನಾಲ್ಕನೇ ಹಂತದ ಮತದಾನದ ವೇಳೆ ಕೂಚ್ ಬೆಹಾರ್ ಜಿಲ್ಲೆಯ ಸಿತಾಲಕುಚಿಯಲ್ಲಿ ಭದ್ರತಾ ಸಿಬ್ಬಂದಿ ಹಾರಿಸಿದ ಗುಂಡಿಗೆ ನಾಲ್ವರು ಮೃತಪಟ್ಟು ಏಳು ಜನ ಗಾಯಗೊಂಡಿದ್ದರು.
ಈ ಕುರಿತು ಇಂದು ಮಾತನಾಡಿರುವ ಅಮಿತ ಶಾ ಅವರು, ನಿನ್ನೆಯ ಘಟನೆ ಸಂಭವಿಸಬಾರದಿತ್ತು. ಆದರೆ, ಕೆಲ ದುಷ್ಕರ್ಮಿಗಳು ಮತದಾನದ ವೇಳೆ ನಿಯೋಜಿಸಿದ್ದ ಭದ್ರತಾ ಸಿಬ್ಬಂದಿಯ ಶಸ್ತ್ರಗಳನ್ನು ಹೊತ್ತೊಯ್ಯಲು ನೋಡಿದ್ದಾರೆ. ಇದರಿಂದ ಅನಿವಾರ್ಯವಾಗಿ ಗುಂಡು ಹಾರಿದೆ. ಆದರೆ ಇದಕ್ಕಿಂತ ಕೆಟ್ಟ ಸಂಗತಿ ಎಂದರೆ ಈ ಘಟನೆಯನ್ನು ಮಮತಾ ಬ್ಯಾನರ್ಜಿ ರಾಜಕೀಯಗೊಳಿಸುತ್ತಿರುವುದು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಮತಾ ನೀಡಿದ ಪ್ರಚೋಧನೆಯಿಂದಲೇ ಈ ಘಟನೆ ಸಂಭವಿಸಿದೆ ಎಂದು ಶಾ ಗಂಭೀರ ಆರೋಪ ಮಾಡಿದ್ದಾರೆ.
ಪಶ್ಚಿಮ ಬಂಗಾಳದ ಕೂಚ್ ಬೆಹರ್ ಜಿಲ್ಲೆಯ ಸೀತಾಲಕುಚಿ ವಿಧಾನಸಭಾ ಕ್ಷೇತ್ರದಲ್ಲಿ ಇಂದು ನಡೆದ ಚುನಾವಣಾ ಹಿಂಸಾಚಾರಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೇ ಹೊಣೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ. ಮತಗಟ್ಟೆಯೊಂದರಲ್ಲಿ ಹಿಂಸಾಚಾರಕ್ಕೆ ಯತ್ನಿಸಿದವರ ಮೇಲೆ ಭದ್ರತೆಯಲ್ಲಿದ್ದ ಸಿಐಎಸ್​ಎಫ್​ ಯೋಧರು ಹಾರಿಸಿದ ಗುಂಡಿನಿಂದ ಐವರು ಮತದಾರರು ಮೃತಪಟ್ಟಿದ್ದಾರೆ. ಇದಕ್ಕೆ ಅಮಿತ್ ಶಾ ಅವರೇ ಕಾರಣ ಎಂದು ದೀದಿ ಶನಿವಾರ ಹೇಳಿದ್ದಾರೆ.
‘ಮಾದರಿ ನೀತಿ ಸಂಹಿತೆ ಅಲ್ಲ, ಮೋದಿ ನೀತಿ ಸಂಹಿತೆ’ ಎಂದು ಚುನಾವಣಾ ಆಯೋಗವನ್ನು ಲೇವಡಿ ಮಾಡಿದ ದೀದಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven − three =
Remember me
