ರಾಜಸ್ಥಾನ:ಮಹದೇವ ಬೆಟ್ಟಿಂಗ್ ಆ್ಯಪ್ ಪ್ರಕರಣದ ಸುಳಿಯಲ್ಲಿ ಛತ್ತೀಸ್​ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಸಿಲುಕಿಕೊಂಡಿದ್ದು, ಜಾರಿ ನಿರ್ದೇಶನಾಲಯದ ದಾಳಿಯಲ್ಲಿ ಸಿಕ್ಕಿಬಿದ್ದ ಆರೋಪಿ ನೀಡಿದ್ದ ಹೇಳಿಕೆ ಅವರಿಗೆ ಉರುಳಾಗಿ ಪರಿಣಮಿಸಿದೆ.
ಅದಾದ ಬಳಿಕ ಈ ಪ್ರಕರಣದಲ್ಲಿ ನಾನಾ ಬೆಳವಣಿಗೆಗಳು ಆಗುತ್ತಿದ್ದು, ಇಂದು ಮಹದೇವ ಬೆಟ್ಟಿಂಗ್ ಆ್ಯಪ್ ಸೇರಿದಂತೆ 22 ಆ್ಯಪ್​ಗಳನ್ನು ಕೇಂದ್ರ ಸರ್ಕಾರ ನಿಷೇಧಿಸಿದೆ. ಆ ಬಳಿಕ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಘೇಲ ಪ್ರತಿಕ್ರಿಯೆ ನೀಡಿದ್ದು, ಇದೀಗ ಅವರ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ ನಡೆಸಿದ್ದಾರೆ.
ಮಹದೇವ ಬೆಟ್ಟಿಂಗ್ ಆ್ಯಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಸಂಪುಟ ಸಹೋದ್ಯೋಗಿ ಸ್ಮೃತಿ ಇರಾನಿ ನಿನ್ನೆ ವಿವರವಾದ ಹೇಳಿಕೆ ನೀಡಿದ್ದಾರೆ ಎಂದಿರುವ ಜೋಶಿ, ಅದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ:ರಾಜಸ್ಥಾನ ವಿಧಾನಸಭಾ ಚುನಾವಣೆ: ಪ್ರಲ್ಹಾದ ಜೋಶಿ ದೆಹಲಿ ನಿವಾಸ ಈಗ ಬಿಜೆಪಿ ಚಟುವಟಿಕೆಯ ಕೇಂದ್ರ
ಜಾರಿ ನಿರ್ದೇಶನಾಲಯದ ದಾಳಿಯಲ್ಲಿ ಹಣ ಸಹಿತ ಸಿಕ್ಕಿಬಿದ್ದಿರುವ ಆರೋಪಿ, ಛತ್ತೀಸ್​ಗಢ ಮುಖ್ಯಮಂತ್ರಿಗೆ 5 ಕೋಟಿ ರೂ. ಕೊಟ್ಟಿದ್ದಾಗಿ ಹೇಳಿಕೆ ನೀಡಿದ್ದಾನೆ. ಆ್ಯಪ್ ಪ್ರಮೋಟರ್ಸ್ ಸಿಎಂಗೆ ಮೊದಲಿಗೆ 5 ಕೋಟಿ ರೂ. ಕೊಟ್ಟಿದ್ದಾರೆ ಎಂದು ಆತ ಹೇಳಿದ್ದು, ಸಿಎಂ ವಿರುದ್ಧ 500 ಕೋಟಿ ರೂ. ಆರೋಪವಿದೆ ಎಂದು ಜೋಶಿ ಹೇಳಿದ್ದಾರೆ.
ಇದನ್ನೂ ಓದಿ:34 ವರ್ಷದ ಡಾಕ್ಟರ್ ಕುಸಿದು ಬಿದ್ದು ಸಾವು; ಆಸ್ಪತ್ರೆಯಲ್ಲಿ ರೋಗಿಗಳನ್ನು ಪರೀಕ್ಷಿಸಿ ಮೆಟ್ಟಿಲೇರುತ್ತಿದ್ದಂತೆ ಹೃದಯಾಘಾತ!
ಈ ಪ್ರಕರಣದಲ್ಲಿ ಅಲ್ಲಿ ತನಿಖೆ ನಡೆಯಲಿದೆಯೋ ಇಲ್ಲವೋ ಎಂಬುದನ್ನು ನಾನು ಕೇಳಬಯಸುತ್ತೇನೆ ಎಂದಿರುವ ಜೋಶಿ, ಜಾರಿ ನಿರ್ದೇಶನಾಲಯದ ಹೇಳಿಕೆ ಏನು? ಕಾಂಗ್ರೆಸ್​ನವರು ಚುನಾವಣಾ ಆಯೋಗದ ಮುಂದೆ ಯಾವ ಬೇಡಿಕೆ ಇಡಲು ಹೋಗಲಿದ್ದಾರೆ? ಎಂದು ಪ್ರಶ್ನಿಸಿದ್ದಾರೆ. ಅಲ್ಲದೆ, ಭ್ರಷ್ಟಾಚಾರ-ಹಗರಣ ಏನೇ ಇರಲಿ, ನಾವು ತನಿಖೆಗೆ ಆಗ್ರಹಿಸುವುದು ತಪ್ಪೇ ಎಂದೂ ಪ್ರಶ್ನಿಸಿದ್ದಾರೆ.
ಅವರು ಚುನಾವಣಾ ಆಯೋಗದ ಮುಂದೆ ಏನನ್ನು ಪ್ರಸ್ತಾಪಿಸಲು ಹೋಗುತ್ತಿದ್ದಾರೋ ಗೊತ್ತಿಲ್ಲ. ಜನಸಾಮಾನ್ಯರಿಗೂ ಈ ವಿಷಯ ಅರ್ಥವಾಗುತ್ತಿಲ್ಲ. ಆರೋಪಿಯೇ ಸಿಎಂಗೆ ಹಣ ತಲುಪಿಸಿದ್ದೇನೆ ಎಂದು ಹೇಳಿರುವಾಗ ತನಿಖೆ ಆಗಬೇಕೋ ಬೇಡವೋ ಎಂದು ನಾನು ಭೂಪೇಶ್ ಬಘೇಲ್ ಅವರನ್ನು ಕೇಳುತ್ತಿದ್ದೇನೆ ಎಂದು ಜೋಶಿ ಹೇಳಿದ್ದಾರೆ.
ನಿಮ್ಮಂಥ ನಾಯಕರಿರುವ ದೇಶದಲ್ಲಿ ನಾನು ಸುರಕ್ಷಿತ: ನಟಿ ರಶ್ಮಿಕಾ ಮಂದಣ್ಣ

ಮಾಮೂಲಿಗಿಂತ ಅರ್ಧಕ್ಕೂ ಅಧಿಕ ಕಡಿಮೆ ಖರ್ಚಲ್ಲಿ ಈಗ ಎಕ್ಸ್ ಸಬ್​ಸ್ಕ್ರಿಪ್ಷನ್ ಲಭ್ಯ; ಏನಿದು ಎಲಾನ್ ಮಸ್ಕ್ ಕಮರ್ಷಿಯಲ್ ಪ್ಲ್ಯಾನ್?

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:four × two =
Remember me
