ನವದೆಹಲಿ:ಮದ್ಯ ನೀತಿ ಭ್ರಷ್ಟಾಚಾರ ಪ್ರಕರಣದಲ್ಲಿ ಬಂಧಿತರಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್​ ಅವರನ್ನು ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಟೀಕಿಸಿದ್ದಾರೆ .
ಕೇಜ್ರಿವಾಲ್ ತೆಗೆದುಕೊಂಡ ಕ್ರಮಗಳು ಅವರ ಬಂಧನಕ್ಕೆ ಕಾರಣವಾಗಿದೆ ಎಂದು ಅಣ್ಣಾ ಹಜಾರೆ ಹೇಳಿದ್ದಾರೆ.
ಇದನ್ನೂ ಓದಿ:ಭಾರತದ ಸಾರ್ವಭೌಮತ್ವಕ್ಕೆ ನಿಷ್ಠೆ ತೋರಿದ ಕಾಶ್ಮೀರ ಪ್ರತ್ಯೇಕವಾದಿ ನಾಯಕ ಗಿಲಾನಿ ಮೊಮ್ಮಗಳು, ಶಬೀರ್ ಪುತ್ರಿ..!
‘ನನ್ನೊಂದಿಗೆ ಕೆಲಸ ಮಾಡುವಾಗ ಮದ್ಯದ ವಿರುದ್ಧ ಧ್ವನಿ ಎತ್ತುತ್ತಿದ್ದ ಕೇಜ್ರಿವಾಲ್ ಈಗ ಮದ್ಯಪಾನ ನೀತಿ ಮಾಡುತ್ತಿದ್ದಾರೆ. ಇದು ತುಂಬಾ ದುಃಖಕರವಾಗಿದೆ. ಆತನ ನಡೆ ಆತನ ಬಂಧನಕ್ಕೆ ಕಾರಣವಾಗಿದೆ. ಈಗ ಕಾನೂನು ತನ್ನ ಕ್ರಮ ತೆಗೆದುಕೊಳ್ಳುತ್ತದೆ’ ಎಂದು ಹೇಳಿದರು.
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಪ್ರತಿಕ್ರಿಯಿಸಿದ್ದಾರೆ. ಹಜಾರೆ, “ಅವರ ಬಂಧನ (ಕೇಜ್ರಿವಾಲ್) ಅವರ ಸ್ವಂತ ಕೃತ್ಯಗಳಿಂದಾಗಿ…” ಎಂದು ಹೇಳಿದರು. ನನ್ನೊಂದಿಗೆ ಕೆಲಸ ಮಾಡುತ್ತಿದ್ದ, ಮದ್ಯದ ವಿರುದ್ಧ ಧ್ವನಿ ಎತ್ತುತ್ತಿದ್ದ ಅರವಿಂದ್ ಕೇಜ್ರಿವಾಲ್ ಈಗ ಮದ್ಯ ನೀತಿಗಳನ್ನು ಮಾಡುತ್ತಿರುವುದಕ್ಕೆ ನನಗೆ ತುಂಬಾ ಬೇಸರವಾಗಿದೆ ಎಂದು ಹಜಾರೆ ಹೇಳಿದರು.
ಐಆರ್‌ಎಸ್ ಅಧಿಕಾರಿಯಾಗಿದ್ದ ಕೇಜ್ರಿವಾಲ್ ದಶಕದ ಹಿಂದೆ ಅಣ್ಣಾ ಹಜಾರೆ ಅವರೊಂದಿಗೆ ಭ್ರಷ್ಟಾಚಾರ ವಿರೋಧಿ ಆಂದೋಲನದ ಭಾಗವಾಗಿದ್ದಾಗ ಖ್ಯಾತಿಯನ್ನು ಗಳಿಸಿದರು. ಬಳಿಕ ಅವರು ರಾಜಕಾರಣಕ್ಕೆ ಪ್ರವೇಶಿಸಿದರು.
ಕಂಬಿ ಹಿಂದೆ ಭ್ರಷ್ಟಾಚಾರ ವಿರೋಧಿ ಹೋರಾಟಗಾರ:ಕೇಜ್ರಿವಾಲ್ 2012 ರಲ್ಲಿ ತಮ್ಮದೇ ಆದ ಆಮ್ ಆದ್ಮಿ ಪಕ್ಷವನ್ನು ಸ್ಥಾಪಿಸಿದರು. ಸಮಾಜದ ಕಲ್ಯಾಣಕ್ಕಾಗಿ ಕೆಲಸ ಮಾಡುವ “ಭ್ರಷ್ಟಾಚಾರ ಮುಕ್ತ ಸರ್ಕಾರ”ದ ಭರವಸೆ ನೀಡಿದರು. ಎಎಪಿ ರಚನೆಯ ನಂತರ, ಅಣ್ಣಾಹಜಾರೆ ಮತ್ತು ಕೇಜ್ರಿವಾಲ್ ನಡುವಿನ ಸಂಬಂಧ ದೂರವಾಯಿತು.
ಅಂದಿನಿಂದ ಕೇಜ್ರಿವಾಲ್ ಅವರನ್ನು ಹಲವಾರು ಸಂದರ್ಭಗಳಲ್ಲಿ ಅಣ್ಣಾ ಹಜಾರೆ ಕಟುವಾಗಿ ಟೀಕಿಸಿದ್ದಾರೆ.
ಇಸ್ರೋದ ಮರುಬಳಕೆಯ ‘ಪುಷ್ಪಕ್’ ಲ್ಯಾಂಡಿಂಗ್ ಪ್ರಯೋಗ ಯಶಸ್ವಿ- ಬಾಹ್ಯಾಕಾಶದಿಂದ ಹಿಂದಿರುಗುವ ಆರ್​ಎಲ್​ವಿ ವಾಹನದ ವಿಶೇಷತೆ ಏನು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − one =
Remember me
