ಚೆನ್ನೈ:ತಮಿಳುನಾಡಿನಲ್ಲಿ ಬಿಜೆಪಿ ಮತಗಳಿಕೆ ಹಿಂದೆಂದಿಗಿಂತಲೂ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಹೆಚ್ಚಾಗಿದೆ. ಇದರ ಹಿಂದಿನ ಶಕ್ತಿ ಪಕ್ಷದ ರಾಜ್ಯಾಧ್ಯಕ್ಷ ಅಣ್ಣಾಮಲೈ ಎಂಬುದು ತಿಳಿದ ಸಂಗತಿಯೇ. ಅಣ್ಣಾ ಮಲೈ ಚುನಾವಣೆಯಲ್ಲಿ ಸೋತಿದ್ದರೂ, ಪಕ್ಷದ ವರ್ಚಸ್ಸು ಹೆಚ್ಚಾಗಲು ಅವರೇ ಕಾರಣ ಎಂಬುದು ಕೇಂದ್ರ ನಾಯಕತ್ವಕ್ಕೂ ಮನವರಿಕೆಯಾಗಿದ್ದು, ಮೋದಿ ಅವರ ಸಂಪುಟ ಸೇರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಇದನ್ನೂ ಓದಿ:ಮೋದಿ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ರಜನಿಕಾಂತ್‌ಗೆ ಆಹ್ವಾನ
ಇನ್ನು ಅಣ್ಣಾಮಲೈ ಈ ಕುರಿತು ಈಗಾಗಲೇ ಬಿಜೆಪಿ ರಾಷ್ಟ್ರೀಯ ನಾಯಕರ ಜೊತೆ ಚರ್ಚೆ ನಡೆಸಿದ್ದಾರೆ. ಈ ಹಿಂದೆ ಪಕ್ಷದ ರಾಜ್ಯಾಧ್ಯಕ್ಷರಾಗಿ ಸೇವೆ ಸಲ್ಲಿಸಿದವರಿಗೆ ಸಚಿವ ಸ್ಥಾನ, ರಾಜ್ಯಪಾಲರ ಸ್ಥಾನ ನೀಡಿದಂತೆಯೇ ಈ ಬಾರಿಯೂ ಪಕ್ಷದ ನಾಯಕತ್ವ ಖಂಡಿತಾ ಸಚಿವ ಸ್ಥಾನ ನೀಡಲಿದೆ ಎಂಬ ನಿರೀಕ್ಷೆಯಿದೆ ಎನ್ನಲಾಗುತ್ತಿದೆ.
ಈ ಹಿಂದೆ ಪಕ್ಷದ ರಾಜ್ಯಾಧ್ಯಕ್ಷರಾಗಿದ್ದ ಇಳಾ ಗಣೇಶನ್, ಸಿ.ಪಿ.ರಾಧಾಕೃಷ್ಣನ್ ಮತ್ತು ತಮಿಳಿಸೈ ಅವರನ್ನು ರಾಜ್ಯಪಾಲರನ್ನಾಗಿ ನೇಮಕ ಮಾಡಲಾಗಿದ್ದು, ತನಗಿಂತ ಮೊದಲು ಪಕ್ಷದ ರಾಜ್ಯಾಧ್ಯಕ್ಷರಾಗಿದ್ದ ಎಲ್.ಮುರುಗನ್ ಅವರಿಗೆ ಕೇಂದ್ರ ಸಚಿವ ಸ್ಥಾನ ನೀಡಲಾಗಿತ್ತು. ಹೀಗಾಗಿ ಅವರಿಗೆ ಕೇಂದ್ರ ಸಚಿವ ಸ್ಥಾನ ಸಿಗುವುದು ಖಚಿತ ಎಂದು ಪಕ್ಷದ ಉನ್ನತ ಮೂಲಗಳು ಹೇಳುತ್ತಿವೆ.
ಅಣ್ಣಾಮಲೈ ಬಿಜೆಪಿಯ ರಾಜ್ಯಾಧ್ಯಕ್ಷರಾಗಿ ಸಾರಥ್ಯವನ್ನು ವಹಿಸಿಕೊಂಡಾಗಿನಿಂದ ಪಕ್ಷದ ವರ್ಚಸ್ಸು ನಿರಂತರವಾಗಿ ಹೆಚ್ಚುತ್ತಿದೆ ಮತ್ತು ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಮತಬ್ಯಾಂಕ್ ಶೇಕಡಾ 11.5 ಕ್ಕೆ ಏರಿದೆ ಎಂದು ಅವರು ಹೇಳುತ್ತಾರೆ.
ದೇಶಾದ್ಯಂತ ಬಿಜೆಪಿಯಿಂದ ಸ್ಪರ್ಧಿಸಿರುವ ಅಭ್ಯರ್ಥಿಗಳ ಎಲ್ಲ ವಿವರಗಳು ಮೋದಿ ಅವರ ಬಳಿ ಇದ್ದು, ಅವುಗಳನ್ನು ಪರಿಶೀಲಿಸಿದ ನಂತರ ಯಾರಿಗೆ ಯಾವ ಸಚಿವ ಸ್ಥಾನ ನೀಡಬೇಕೆಂಬುದರ ಕುರಿತು ನಿರ್ಧಾರ ಕೈಗೊಳ್ಳುತ್ತಾರೆ ಎಂದು ಸ್ಥಳೀಯ ಮುಖಂಡರು ಹೇಳುತ್ತಾರೆ.
ಅದೇನೇ ಇರಲಿ, ತಮಿಳುನಾಡಿನಲ್ಲಿ ಪಕ್ಷ ಇನ್ನಷ್ಟು ಎತ್ತರಕ್ಕೆ ಬೆಳೆಯಬೇಕಾದರೆ ಅಣ್ಣಾಮಲೈ ಸಚಿವ ಸಂಪುಟಕ್ಕೆ ಸೇರ್ಪಡೆಯಾಗಬೇಕು ಎಂಬುದು ಕಾರ್ಯಕರ್ತರ ಒತ್ತಾಸೆಯಾಗಿದೆ. ಇದಕ್ಕೆ ಒಂದೆರೆಡು ದಿನಗಳ ನಂತರವಷ್ಟೇ ಉತ್ತರ ತಿಳಿಯಲಿದೆ.
ಈ ಕಾರಣಕ್ಕಾಗಿಯೇ ಮೋದಿ ಗೆಲುವಿಗೆ ಅಭಿನಂದನೆ ಹೇಳಲಾಗ್ತಿಲ್ಲವೆಂದ ಪಾಕ್ : ಆ ಕಾರಣ ಏನು ಗೊತ್ತಾ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 + 16 =
Remember me
