ಬೆಂಗಳೂರು:ತಮಿಳುನಾಡಿಗೆ ಕಾವೇರಿ ನೀರು ಹರಿಸಿರುವುದನ್ನು ಖಂಡಿಸಿ ಇಂದು ವಿವಿಧ ಸಂಘಟನೆಗಳು ಕರ್ನಾಟಕ ಬಂದ್​ ಆಚರಿಸುತ್ತಿರುವುದರ ನಡುವೆಯೇ ಕನ್ನಡಿಗರಿಗೆ ಮತ್ತೊಂದು ಶಾಕ್ ಎದುರಾಗಿದೆ.
ತಮಿಳುನಾಡಿಗೆ ಪ್ರತಿನಿತ್ಯ ಮೂರು ಸಾವಿರ ಕ್ಯೂಸೆಕ್ ನೀರನ್ನು ಹರಿಸಲು ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಸೆಪ್ಟೆಂಬರ್ 26ರಂದು ನಡೆದ ಸಭೆಯಲ್ಲಿ CWRC ಶಿಫಾರಸು ಮಾಡಿತ್ತು. ಇದೀಗ CWMA ಅಕ್ಟೋಬರ್ 15 ರವರೆಗೂ ಪ್ರತಿನಿತ್ಯ 3 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಆದೇಶ ಹೊರಡಿಸಿದೆ.
25.09.2023 ರವರೆಗೆ ಕರ್ನಾಟಕದ ನಾಲ್ಕು ಜಲಾಶಯಗಳಿಗೆ ಸಂಚಿತ ಒಳಹರಿವಿನ ಕೊರತೆಯು 53.04% ಆಗಿದೆ. ಕರ್ನಾಟಕವು ತನ್ನ ಜಲಾಶಯಗಳಿಂದ ಯಾವುದೇ ನೀರನ್ನು ಬಿಡುಗಡೆ ಮಾಡುವ ಸ್ಥಿತಿಯಲ್ಲಿಲ್ಲ ಅಥವಾ ಅದರ ಜಲಾಶಯಗಳಿಂದ ಯಾವುದೇ ಹರಿವನ್ನು ಅಂತಾರಾಜ್ಯ ಗಡಿಯಾದ ಬಿಳಿಗುಂಡ್ಲುನಲ್ಲಿ ನಿರ್ವಹಿಸಬೇಕಾದ ಹರಿವುಗಳಿಗೆ ಕೊಡುಗೆ ನೀಡುವುದಿಲ್ಲ. ಈ ಅಂಶವು ಅತ್ಯಂತ ಮನ್ನಣೆಯ ಅಗತ್ಯವಿದೆ ಮತ್ತು ಸಮಿತಿಯಿಂದ ವಿಮರ್ಶಾತ್ಮಕ ಪರಿಗಣನೆಯನ್ನು ಆಹ್ವಾನಿಸುತ್ತದೆ.
ಕರ್ನಾಟಕವೂ ಸಹ ಸಂಕಷ್ಟದ ಅನುಪಾತದ ಆಧಾರದ ಮೇಲೆ ನೀರಾವರಿ ಪೂರೈಕೆಯನ್ನು ಕಡಿಮೆ ಮಾಡಬೇಕು. ಕರ್ನಾಟಕವು ತಕ್ಷಣವೇ ಕೊರತೆಯ ಪ್ರಮಾಣವನ್ನು ಬಿಡುಗಡೆ ಮಾಡಬೇಕು ಮತ್ತು ಸಂಕಷ್ಟದ ಅನುಪಾತಕ್ಕೆ ಅನುಗುಣವಾಗಿ ಮತ್ತಷ್ಟು ಹರಿವುಗಳನ್ನು ಬಿಡುಗಡೆ ಮಾಡಬೇಕು ಎಂದು ಹಠ ಹಿಡಿದಿದೆ.
ಕರ್ನಾಟಕದಿಂದ ತಮಿಳುನಾಡಿಗೆ 15 ದಿನಗಳವರೆಗೆ ಪ್ರತಿದಿನ 5 ಸಾವಿರ ಕ್ಯೂಸೆಕ್​​ ನೀರನ್ನು ಹರಿಸಬೇಕೆಂಬ ಸೆ.12ರ ಕಾವೇರಿ ನೀರು ನಿಯಂತ್ರಣ ಸಮಿತಿ (CWRC)ಯ ಆದೇಶವನ್ನು ಪಾಲಿಸುವಂತೆ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಸೆ.18ರಂದು ಆದೇಶ ಹೊರಡಿಸಿತ್ತು. ಇದರ ವಿರುದ್ಧ ಸುಪ್ರೀಂಕೋರ್ಟ್​ಗೆ ಕರ್ನಾಟಕ ಮೇಲ್ಮನವಿ ಸಲ್ಲಿಸಿತ್ತು. ಸೆ.21ರಂದು ತೀರ್ಪು ಪ್ರಕಟಿಸಿದ ನ್ಯಾಯಾಲಯ,CWMA ಆದೇಶವನ್ನು ಎತ್ತಿಹಿಡಿದಿತ್ತು. ಇದೀಗ ಮತ್ತೆ 3000 ಸಾವಿರ ಕ್ಯೂಸೆಕ್​ ನೀರು ಹರಿಸಲು CWMA ಆದೇಶ ಮಾಡಿರುವುದರಿಂದ ಕಾವೇರಿ ಹೋರಾಟ ಮತ್ತಷ್ಟು ತೀವ್ರತೆ ಪಡೆದುಕೊಳ್ಳುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ.
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:sixteen − 15 =
Remember me
