ಶ್ರೀನಗರ: ಯೋಧನಿಗೆ ಕರೊನಾ ವೈರಸ್​ ಸೋಂಕು ಹರಡಿರುವ ಹಿನ್ನೆಲೆಯಲ್ಲಿ ಯೋಧರಿಗೆ ನೀಡಿದ್ದ ರಜೆಯನ್ನು ಭಾರತೀಯ ಸೇನೆ ಏಪ್ರಿಲ್​ 15ರವರೆಗೆ ವಿಸ್ತರಿಸಿದೆ.
ಲಡಾಖ್ ಸ್ಕೌಟ್ಸ್ ರೆಜಿಮೆಂಟ್‌ನ ಯೋಧನೊಬ್ಬನಿಗೆ ಕರೊನಾ ಸೋಂಕು ಇರುವುದು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಸೈನಿಕರಿಗೆ ರಜೆ ಘೋಷಿಸಿರುವುದರ ಜತೆಗೆ ಎಲ್ಲ ರೀತಿಯ ನೇಮಕಾತಿಯನ್ನು ಮುಂದೂಡಿದೆ.
ಯೋಧರಿಗೆ ಸೋಂಕು ಹರಡದಂತೆ ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ಜರುಗಿಸಲಾಗಿದೆ. ಸೇನಾ ವೈದ್ಯಕೀಯ ಸೇವೆ ಹೊರತಾಗಿ ಎಲ್ಲರಿಗೂ ರಜೆ ನೀಡಲಾಗಿದೆ. ಸೇನಾ ಅಧಿಕಾರಿಗಳು ವಿದೇಶಕ್ಕೆ ತೆರಳದಂತೆ ಸೂಚಿಸಲಾಗಿದೆ.
ರಾಷ್ಟ್ರದಲ್ಲಿ ಕರೊನಾ ವೈರಸ್​ ಸೋಂಕಿಗೆ 5 ಮಂದಿ ಬಲಿಯಾಗಿದ್ದು ಹಲವು ಮಂದಿಗೆ ಸೋಂಕು ಹರಡಿರುವ ಹಿನ್ನೆಲೆಯಲ್ಲಿ ಭಾರತೀಯ ಸೇನೆ ಸೋಂಕು ಹರಡುವುದನ್ನು ತಡೆಗಟ್ಟಲು ಈ ನಿರ್ಧಾರಕ್ಕೆ ಬಂದಿದೆ. (ಏಜೆನ್ಸೀಸ್​)
ಜನತಾ ಕರ್ಫ್ಯೂ ಪರಿಣಾಮಕಾರಿ ಎಂದ ವಿಶ್ವ ಆರೋಗ್ಯ ಸಂಸ್ಥೆ : ನಮ್ಮ ದೇಶದ ಪ್ರಧಾನಿಯವರ ನಡೆಯ ಬಗ್ಗೆ ಪ್ರಶಂಸೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 + nineteen =
Remember me
