ದಿಸ್ಪುರ್:ಅಸ್ಸಾಂನಲ್ಲಿ ಭೀಕರ ಪ್ರವಾಹ ಉಂಟಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಅಸ್ಸಾಂನ ಕಾಜಿರಂಗ ರಾಷ್ಟ್ರೀಯ ಉದ್ಯಾನವನದಲ್ಲಿ ಪ್ರವಾಹ ಪರಿಸ್ಥಿತಿ ಇನ್ನೂ ಘೋರವಾಗಿದೆ. ಇಲ್ಲಿನ ಕಾಜಿರಂಗ ರಾಷ್ಟ್ರೀಯ ಉದ್ಯಾನವನದಲ್ಲಿ ಸುಮಾರು 131 ಪ್ರಾಣಿಗಳು ಸಾವಿಗೀಡಾಗಿದ್ದು, 97 ಪ್ರಾಣಿಗಳನ್ನು ರಕ್ಷಿಸಲಾಗಿದೆ ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ:ಆನೆ ಹಾವಳಿಗೆ ಶಾಶ್ವತ ಪರಿಹಾರ ಶೋಧಕ್ಕೆ ಅಂತಾರಾಷ್ಟ್ರೀಯ ಸಮ್ಮೇಳನ: ಸಚಿವ ಈಶ್ವರ ಖಂಡ್ರೆ
85 ಹಂದಿ, ಜಿಂಕೆ, ಎರಡು ಖಡ್ಗಮೃಗ, ಗೂಬೆ, ಮೊಲ, ಆನೆ ಮತ್ತು ಕಾಡು ಬೆಕ್ಕುಗಳನ್ನು ಅಧಿಕಾರಿಗಳು ರಕ್ಷಿಸಿದ್ದಾರೆ. ಸತ್ತ ಪ್ರಾಣಿಗಳಲ್ಲಿ ಆರು ಘೇಂಡಾಮೃಗಗಳು, 117 ಹಾಗ್​ ಜಿಂಕೆಗಳು ಸೇರಿವೆ, ಇದರಲ್ಲಿ 98 ನೀರಿನಲ್ಲಿ ಮುಳುಗಿ, ಚಿಕಿತ್ಸೆಯ ಸಮಯದಲ್ಲಿ 25 ವನ್ಯಜೀವಿಗಳು ಸಾವನ್ನಪ್ಪಿವೆ.ಪ್ರಸ್ತುತ, 25 ಪ್ರಾಣಿಗಳು ವೈದ್ಯಕೀಯ ಆರೈಕೆಯಲ್ಲಿದ್ದು, 52 ಪ್ರಾಣಿಗಳನ್ನು ಚಿಕಿತ್ಸೆಯ ನಂತರ ಬಿಡುಗಡೆ ಮಾಡಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಭದ್ರತಾ ಸಿಬ್ಬಂದಿ ಹಾಗೂ ಅರಣ್ಯ ಇಲಾಖೆಯ ನೌಕರರು ವನ್ಯಜೀವಿಗಳ ರಕ್ಷಣೆಗಾಗಿ ಗಸ್ತು ಬೋಟ್‍ಗಳ ಮೂಲಕ ಹುಡುಕಾಟ ನಡೆಸುತ್ತಿದ್ದಾರೆ. ಈ ಮೂಲಕ ವನ್ಯಜೀವಿಗಳ ರಕ್ಷಣೆಗಾಗಿ ಅರಣ್ಯ ಇಲಾಖೆ ಸೂಕ್ತ ಕ್ರಮಕೈಗೊಂಡಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಏತನ್ಮಧ್ಯೆ, ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಸೋಮವಾರ ಮಾತನಾಡಿ, ಅಸ್ಸಾಂನಲ್ಲಿ ಭೀಕರ ಪ್ರವಾಹ ಉಂಟಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಇದರ ಜೊತೆಯಲ್ಲಿ ಪ್ರಾಣಿಗಳ ಮೇಲೆ ಸಮಾನವಾಗಿ ಪರಿಣಾಮ ಬೀರಿದೆ. ‘ಅಸ್ಸಾಂ ತಂಡವು ಎಲ್ಲರಿಗೂ ಸಹಾಯ ಮಾಡಲು ಹಗಲಿರುಳು ಶ್ರಮಿಸುತ್ತಿದೆ’ ಎಂದು ಹೇಳಿದ್ದಾರೆ.  ಈ ವರ್ಷ ಮಾರ್ಚ್ 8 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕಾಜಿರಂಗ ಪಾರ್ಕ್‍ನಲ್ಲಿ ಸಫಾರಿಗೆ ತೆರಳಿದ್ದರು.
ಅಯೋಧ್ಯೆಯಂತೆ ಗುಜರಾತ್‌ನಲ್ಲೂ ಬಿಜೆಪಿಯನ್ನು ಸೋಲಿಸುತ್ತೇವೆ: ರಾಹುಲ್ ಗಾಂಧಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × three =
Remember me
