ನವದೆಹಲಿ:ಕರೊನಾ ವಿರುದ್ಧ ಹೋರಾಟಕ್ಕೆ ಹತ್ತು ಹಲವು ಕ್ರಮಗಳನ್ನು ಕೈಗೊಂಡಿರುವ ರಾಷ್ಟ್ರ ರಾಜಧಾನಿಯಲ್ಲಿ ಸೋಂಕಿನಿಂದ ಗುಣಮುಖರಾಗುತ್ತಿರುವವರ ದರ ಹೆಚ್ಚಿದೆ.
ಜೂನ್​​ಗಿಂತಲೂ ಮೊದಲು ತುಂಬ ಕಡಿಮೆ ಇದ್ದ ಚೇತರಿಕೆಯ ಪ್ರಮಾಣ ಜೂ.20ರಂದು ಶೇ.50ರಷ್ಟಾಗಿತ್ತು. ಇದೀಗ ಶೇ.66.03ಕ್ಕೆ ಏರಿದೆ. ಇಡೀ ದೇಶದಲ್ಲಿ ಕರೊನಾ ಸೋಂಕಿನಿಂದ ಗುಣಮುಖರಾಗುತ್ತಿರುವವರ ಪ್ರಮಾಣ ಶೇ.58.67ರಷ್ಟಿದ್ದು, ದೆಹಲಿಯ ರಿಕವರಿ ರೇಟ್​ ಅಧಿಕವಾದಂತಾಗಿದೆ.
ದೆಹಲಿಯಲ್ಲಿ ಪ್ರತಿದಿನ 3000ದ ಆಸುಪಾಸಿನಲ್ಲಿ ಹೊಸ ಕೊವಿಡ್​-19 ಪ್ರಕರಣಗಳು ಪತ್ತೆಯಾಗುತ್ತಿವೆ. ಜೂ.23ರಂದು ಬರೋಬ್ಬರಿ 3947 ಜನಲ್ಲಿ ಸೋಂಕು ದೃಢಪಟ್ಟಿತ್ತು. ಆ ಸಮಯದಲ್ಲಿ ಅಲ್ಲಿನ ಚೇತರಿಕೆ ಪ್ರಮಾಣ ಶೇ.59.02ರಷ್ಟಿತ್ತು.
ರಾಷ್ಟ್ರ ರಾಜಧಾನಿಯಲ್ಲಿ ಕೇಂದ್ರ ಸರ್ಕಾರದ ಸಹಕಾರದೊಂದಿಗೆ ಮುಖ್ಯಮಂತ್ರಿ ಅರವಿಂದ್​ ಕೇಜ್ರಿವಾಲ್​ ಅವರು ಕರೊನಾ ವಿರುದ್ಧ ಹೋರಾಡಲು ಹಲವು ಕ್ರಮಗಳನ್ನು ಕೈಗೊಂಡಿದ್ದಾರೆ. ತಪಾಸಣೆ, ಚಿಕಿತ್ಸೆಗಳಲ್ಲಿ ಹೊಸ ವಿಧಾನಗಳನ್ನು ಅಳವಡಿಸಿಕೊಳ್ಳಲಾಗಿದೆ. ಮನೆಮನೆಗೆ ಹೋಗಿ ಟೆಸ್ಟ್​ ಮಾಡುವುದು, ಸೋಂಕಿತರ ಪ್ರಾಥಮಿಕ ಸಂಪರ್ಕಿತರನ್ನು ತ್ವರಿತಗತಿಯಲ್ಲಿ ಟ್ರೇಸ್​ ಮಾಡುವ ಕೆಲಸ ಭರದಿಂದ ಸಾಗುತ್ತಿದೆ. (ಏಜೆನ್ಸೀಸ್​)
ಪೊಲೀಸ್​ ಠಾಣೆಯಿಂದ ಮನೆಗೆ ಬಂದ ಕೂಡಲೇ ಯುವಕ ಆತ್ಮಹತ್ಯೆಗೆ ಶರಣಾಗಿದ್ದೇಕೆ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 + ten =
Remember me
