ಲಖನೌ: ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರಕ್ಕೆ ಭೂಮಿ ಪೂಜೆ, ಶಿಲಾನ್ಯಾಸ ಕಾರ್ಯಕ್ರಮಗಳಿಗೆ ಸಿದ್ಧತೆ ನಡೆದಿರುವ ಈ ಸಂದರ್ಭದಲ್ಲಿ ಅಯೋಧ್ಯೆಯ ರೈಲ್ವೆ ನಿಲ್ದಾಣದ ಉನ್ನತೀಕರಣದ ಯೋಜನೆಯೂ ಸಿದ್ಧವಾಗಿದೆ. ಆರಂಭಿಕವಾಗಿ ಈ ಉನ್ನತೀಕರಣ ಯೋಜನೆಗೆ ಉತ್ತರ ಪ್ರದೇಶ ಸರ್ಕಾರ 80 ಕೋಟಿ ರೂಪಾಯಿ ಮೀಸಲಿಟ್ಟಿತ್ತು. ಅದೀಗ ಪರಿಷ್ಕರಣೆಗೊಂಡು 104 ಕೋಟಿ ರೂಪಾಯಿಗೆ ಏರಿಕೆಯಾಗಿದೆ.
ರಾಮ ಮಂದಿರ ಮಾದರಿಯಲ್ಲೇ ನಿರ್ಮಾಣವಾಗಲಿದೆ ಹೊಸ ರೈಲ್ವೆ ನಿಲ್ದಾಣ. ಭಾನುವಾರ ಈ ಬಗ್ಗೆ ಟ್ವೀಟ್ ಮಾಡಿರುವ ರೈಲ್ವೆ ಸಚಿವ ಪಿಯೂಷ್ ಗೋಯೆಲ್​, ಪ್ರಧಾನ ಮಂತ್ರಿ ನರೇಂದ್ರಮೋದಿಯವರ ನೇತೃತ್ವದಲ್ಲಿ ರೈಲ್ವೆ ಇಲಾಖೆ ಅಯೋಧ್ಯೆ ರೈಲ್ವೆ ನಿಲ್ದಾಣದ ಉನ್ನತೀಕರಣ ಯೋಜನೆಯನ್ನು ಕೈಗೆತ್ತಿಕೊಂಡಿದೆ ಎಂದು ಹೇಳಿದ್ದು, ಅದರ ಜತೆಗೆ ಪ್ರಸ್ತಾವಿತ ಮಾದರಿಯ ಚಿತ್ರಗಳನ್ನು ಪೋಸ್ಟ್ ಮಾಡಿದ್ದಾರೆ.
ಇದನ್ನೂ ಓದಿ:ಅಯೋಧ್ಯೆಯಲ್ಲಿ ಎರಡು ಗಂಟೆ ಕಾಲ ಇರಲಿದ್ದಾರೆ ಪ್ರಧಾನಿ ಮೋದಿ
ಪ್ರಸ್ತಾವಿತ ರೈಲ್ವೆ ನಿಲ್ದಾಣದ ಮಾದರಿಯನ್ನು ಆರ್​ಐಟಿಇಎಸ್​ ಲಿಮಿಟೆಡ್​ ಮರುಅಭಿವೃದ್ಧಿಗೊಳಿಸಲಿದ್ದು, ಎರಡು ಹಂತದಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ. ಮೊದಲ ಹಂತ 2021ರ ಜೂನ್​ ತಿಂಗಳಲ್ಲಿ ಮುಗಿಯಲಿದೆ. ಇದರಲ್ಲಿ, ಮಾಡರ್ನ್​ ಆರ್ಟ್​ ಗ್ಯಾಲರಿ, ಪುರುಷ, ಮಹಿಳೆಯರಿಗೆ ಪ್ರತ್ಯೇಕ ಡೋರ್ಮೆಟ್ರಿಗಳು, ಹೆಚ್ಚಿನ ಸಂಖ್ಯೆಯ ಟಿಕೆಟ್ ಕೌಂಟರ್​ಗಳು, ಫುಡ್ ಪ್ಲಾಜಾ, ಮೇಲ್ಸೇತುವೆ, ಪ್ರವಾಸಿ ಕೇಂದ್ರ, ಟ್ಯಾಕ್ಸಿ ಬೂತ್, ವಿಐಪಿ ಲಾಂಜ್​, ಅತಿಥಿ ಗೃಹ, ಆಡಿಟೋರಿಯಂಗಳು ಇರಲಿವೆ. (ಏಜೆನ್ಸೀಸ್)
देश के करोड़ो लोगो की आस्था के प्रतीक श्री रामजन्मभूमि मंदिर के दर्शन करने आने वाले श्रद्धालुओं के लिये प्रधानमंत्री@NarendraModiजी के नेतृत्व में रेलवे कर रहा है अयोध्या स्टेशन का पुनर्विकास।pic.twitter.com/MNgzKR7PY6
— Piyush Goyal (@PiyushGoyal)August 2, 2020

ರಾಮಲಲ್ಲಾಗೆ ಸಜ್ಜಾಗಿವೆ ವಿಶೇಷ ಉಡುಪುಗಳು; ಚಿನ್ನದ ದಾರದಲ್ಲಿ ಒಂಬತ್ತು ರತ್ನ ಪೋಣಿಸಿದ ಮಖ್ಮಲ್ ವಸ್ತ್ರ, ಹಸಿರು- ಕಿತ್ತಳೆ ಬಣ್ಣದ ಬಟ್ಟೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 4 =
Remember me
