ನವದೆಹಲಿ:ದೇಶಾದ್ಯಂತ ಕರೊನಾ ಎರಡನೇ ಅಲೆ ಅತ್ಯಂತ ಕ್ಷಿಪ್ರಗತಿಯಲ್ಲಿ ಏರುತ್ತಿರುವುದು ಇದೀಗ ಆತಂಕ ಸೃಷ್ಟಿಸಿದ್ದು, ನಿಯಂತ್ರಿಸುವುದೇ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಮತ್ತೊಂದೆಡೆ ಕರೊನಾ ನಿಯಂತ್ರಣಕ್ಕಾಗಿ ಲಾಕ್​ಡೌನ್​ ಮಾಡಬೇಕೇ ಬೇಡವೇ ಎಂಬ ಚರ್ಚೆಗಳು ಜಾರಿಯಲ್ಲಿ ಇರುವ ನಡುವೆಯೇ ಕಾರ್ಯಪಡೆಯೊಂದು ಅಗತ್ಯ ಕ್ರಮವೊಂದರ ಬಗ್ಗೆ ಸೂಚನೆ ನೀಡಿದೆ.
ದೇಶದಲ್ಲಿ ಕರೊನಾ ನಿಯಂತ್ರಣಕ್ಕೆ ಬರಬೇಕಾದರೆ ಇನ್ನೆರಡು ತಿಂಗಳ ಕಾಲ 10ಕ್ಕಿಂತ ಹೆಚ್ಚು ಜನರು ಸೇರುವಂಥ ಎಲ್ಲ ಒಳಾಂಗಣ ಕಾರ್ಯಕ್ರಮಗಳನ್ನು ನಿಷೇಧಿಸಬೇಕು ಎಂಬುದಾಗಿ ಲ್ಯಾನ್ಸೆಟ್ ಕೋವಿಡ್​-19 ಕಮಿಷನ್ಸ್ ಇಂಡಿಯಾ ಟಾಸ್ಕ್​ಫೋರ್ಸ್​ ತಿಳಿಸಿದೆ. ‘ಮ್ಯಾನೇಜಿಂಗ್ ಇಂಡಿಯಾಸ್​ ಕೋವಿಡ್​-19 ವೇವ್​​: ಅರ್ಜೆಂಟ್ ಸ್ಟೆಪ್ಸ್​’ ಎಂಬ ಶಿರೋನಾಮೆಯಡಿ ಈ ವರದಿಯನ್ನು ಅದು ಪ್ರಕಟಿಸಿದೆ.
ಇದನ್ನೂ ಓದಿ:ದಂಪತಿಗೆ ಸೋಂಕು; ಕ್ವಾರಂಟೈನ್ ಕೇಂದ್ರದಲ್ಲೇ ವಿವಾಹ‌ ವಾರ್ಷಿಕೋತ್ಸವ!
ಕರೊನಾ ಸೋಂಕು ಹೆಚ್ಚಲು ಕಾರಣ ಮತ್ತೆ ಹೆಚ್ಚಾದ ಸಭೆ-ಸಮಾರಂಭಗಳು ಎಂದು ಅಭಿಪ್ರಾಯಪಟ್ಟಿರುವ ಈ ಕಾರ್ಯಪಡೆ, ಏಪ್ರಿಲ್​-ಮೇ ತಿಂಗಳಲ್ಲಿ ಅಂಥ ಹಲವು ಕಾರ್ಯಕ್ರಮಗಳು ನಿಗದಿಯಾಗಿವೆ. ಈ ಹಿನ್ನೆಲೆಯಲ್ಲಿ ಇನ್ನೆರಡು ತಿಂಗಳುಗಳ ಕಾಲ ಅವುಗಳನ್ನು ಸಂಪೂರ್ಣವಾಗಿ ನಿಷೇಧಿಸುವುದು ಅನಿವಾರ್ಯ ಎಂದು ಈ ಕಾರ್ಯಪಡೆ ಅಭಿಪ್ರಾಯ ಪಟ್ಟಿದೆ. (ಏಜೆನ್ಸೀಸ್)
ಕರೊನಾ ಇಷ್ಟು ಪ್ರಮಾಣದಲ್ಲಿ ಹೆಚ್ಚಾಗಲು ಎರಡು ಪ್ರಮುಖ ಕಾರಣ ನೀಡಿದ ದೆಹಲಿ ಏಮ್ಸ್​​ ನಿರ್ದೇಶಕ

ಧಾರ್ಮಿಕ ಕಾರ್ಯಕ್ರಮಗಳಿಗೆ ಅಡ್ಡಿ ಬೇಡ, ಇದು ಜನಪ್ರಿಯ ಸರ್ಕಾರದ ಲಕ್ಷಣವಲ್ಲ; ಸಿಎಂ, ಆರೋಗ್ಯ ಸಚಿವರಿಗೆ ಶಾಸಕ ರಘುಪತಿ ಭಟ್​ ಮನವಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 1 =
Remember me
