ನವದೆಹಲಿ:ಮೊಸಳೆಯೊಂದಿಗೆ ಹೋರಾಡಿ ತಮ್ಮನನ್ನು ಕಾಪಾಡಿದ ಬಾಲಕನ ಶೌರ್ಯಕ್ಕೆ ಮೆಚ್ಚಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ನೀಡಲಾಗಿದೆ.
ಎರಡು ವರ್ಷಗಳ ಹಿಂದೆ ಬಿಹಾರದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿತ್ತು. ಚೌಮುಖ ಗ್ರಾಮದ ನೀರಜ್ ಮತ್ತು ಆತನ ಸಹೋದರ ಧೀರಜ್ ತಮ್ಮ ಎಮ್ಮೆಗಳನ್ನು ತೊಳೆಯಲು ಗಂಡಕ್ ನದಿಗೆ ತೆರಳಿದ್ದರು. ಸ್ವಲ್ಪ ದೂರದಲ್ಲಿ ಇಬ್ಬರೂ ಬೇರೆ ಬೇರೆ ಎಮ್ಮೆಗಳನ್ನು ತೊಳೆಯುತ್ತಿದ್ದರು. ಈ ವೇಳೆ ಮೊಸಳೆಯೊಂದು ದಾಳಿ ಮಾಡಿತ್ತು. ಧೀರಜ್ ಹಿಂದು- ಮುಂದು ಯೋಚಿಸದೇ ನೀರಿಗೆ ಹಾರಿ ಮೊಸಳೆಯೊಂದಿಗೆ ಹೊರಾಡಿ ತನ್ನ ಸಹೋದರ ಪ್ರಾಣವನ್ನು ಕಾಪಾಡಿದ್ದನು. ಈ ವೇಳೆ ಸಹೋದರರಿಬ್ಬರು ಗಂಭೀರವಾಗಿ ಗಾಯ ಗೊಂಡಿದ್ದರು. ನಂತರ ಚಿಕಿತ್ಸೆ ಪಡೆದುಕೊಂಡು ಗುಣಮುಖರಾಗಿದ್ದಾರೆ.
ಇದನ್ನೂ ಓದಿ:ಶಾಲಾ ಪ್ರಾಂಶುಪಾಲರ ಕೊಠಡಿಯಲ್ಲಿ ಮದ್ಯದ ಬಾಟಲಿಗಳು, ಕಾಂಡೋಮ್ ಪ್ಯಾಕೆಟ್‌ಗಳು ಪತ್ತೆ!
ತನ್ನ ಸಾಹಸದಿಂದ ತಮ್ಮನನ್ನು ಕಾಪಾಡಿದ ಧೀರಜ್ ಪ್ರಯತ್ನಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಗೌರವಿಸಿದೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಯೋಗಪಟ್ಟಿ ಬ್ಲಾಕ್‌ನ ಚೌಮುಖ ಗ್ರಾಮದ 16 ವರ್ಷದ ಧೀರಜ್‌ಗೆ ಪಾಟ್ನಾದ ಗಾಂಧಿ ಮೈದಾನದಲ್ಲಿ ಸನ್ಮಾನ ಮಾಡಿ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಬಾಲ ಪ್ರಶಸ್ತಿಯನ್ನು ನೀಡಿ ಗೌರವಿಸಿದರು. ಆತನ ವಿದ್ಯಾಭ್ಯಾಸಕ್ಕಾಗಿ ಲ್ಯಾಪ್‌ಟಾಪ್, ಮೊಬೈಲ್,​ ಬ್ಯಾಗ್ ಮತ್ತು ಸ್ಮಾರ್ಟ್ ವಾಚ್ ಕೂಡ ನೀಡಲಾಗಿದೆ.
ಸರಿಯಾದ ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ 60 ಲಕ್ಷ ರೂ. ಬೆಲೆಬಾಳುವ ಇಸ್ತ್ರಿ ಪೆಟ್ಟಿಗೆಗಳು ಪೊಲೀಸ್​ ವಶಕ್ಕೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − sixteen =
Remember me
