ನವದೆಹಲಿ:ಬಿಲ್ಕಿಸ್ ಬಾನು ಪ್ರಕರಣದ ಅಪರಾಧಿಗಳು ಜೈಲು ಅಧಿಕಾರಿಗಳ ಮುಂದೆ ಶರಣಾಗಲು ಸಮಯ ವಿಸ್ತರಣೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ಶರಣಾಗತಿ ಅವಧಿಯನ್ನು ವಿಸ್ತರಿಸುವಂತೆ ಅಪರಾಧಿಗಳ ಮನವಿಯನ್ನು ತಿರಸ್ಕರಿಸಿದ ಸುಪ್ರೀಂ ಕೋರ್ಟ್, ಶರಣಾಗತಿಯನ್ನು ಮುಂದೂಡಲು ಅವರು ನೀಡಿದ ಕಾರಣಗಳು ಯಾವುದೇ ಅರ್ಹತೆಯನ್ನು ಹೊಂದಿಲ್ಲ ಎಂದು ಹೇಳಿದೆ. ಜನವರಿ 21ರೊಳಗೆ ಆರೋಪಿಗಳು ಶರಣಾಗುವಂತೆ ನ್ಯಾಯಾಲಯ ಆದೇಶಿಸಿದೆ.
ಬಿಲ್ಕಿಸ್ ಬಾನು ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿ, ಆಕೆಯ ಕುಟುಂಬದ ಸದಸ್ಯರನ್ನು ಹತ್ಯೆಗೈದ ಅಪರಾಧಿಗಳು ಶರಣಾಗಲು ಸಮಯ ವಿಸ್ತರಣೆ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.
ಅಪರಾಧಿಗಳಾದ ಗೋವಿಂದಭಾಯ್ ನಾಯ್, ರಮೇಶ್ ರೂಪಭಾಯ್ ಚಂದನಾ ಮತ್ತು ಮಿತೇಶ್ ಚಿಮನ್‌ಲಾಲ್ ಭಟ್ ಅರ್ಜಿಯಲ್ಲಿ ತಮ್ಮ ಆರೋಗ್ಯ ಮತ್ತು ಕುಟುಂಬದ ಜವಾಬ್ದಾರಿಗಳನ್ನು ಉಲ್ಲೇಖಿಸಿ ವಿನಾಯಿತಿ ಕೋರಿದ್ದರು.
ಬಿಲ್ಕಿಸ್ ಬಾನೊ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಮತ್ತು ಆಕೆಯ ಮೂರು ವರ್ಷದ ಮಗಳು ಸೇರಿದಂತೆ ಆಕೆಯ ಕುಟುಂಬದ ಏಳು ಸದಸ್ಯರನ್ನು ಹತ್ಯೆ ಮಾಡಿದ 11 ಜನರಿಗೆ ವಿನಾಯಿತಿ ನೀಡಿದ ಗುಜರಾತ್ ಸರ್ಕಾರದ ನಿರ್ಧಾರವನ್ನು ಜನವರಿ 8 ರಂದು ಸುಪ್ರೀಂ ಕೋರ್ಟ್ ರದ್ದುಗೊಳಿಸಿತ್ತು.ನ್ಯಾಯಮೂರ್ತಿಗಳಾದ ಬಿ.ವಿ.ನಾಗರತ್ನ ಮತ್ತು ಉಜ್ವಲ್ ಭುಯಾನ್ ಅವರ ದ್ವಿ ಪೀಠವು 2022 ರ ಸ್ವಾತಂತ್ರ್ಯ ದಿನದಂದು ಬಿಡುಗಡೆಯಾದ ಅಪರಾಧಿಗಳು ಜನವರಿ 22 ರೊಳಗೆ ಎರಡು ವಾರಗಳಲ್ಲಿ ಶರಣಾಗುವಂತೆ ಸೂಚಿಸಿತ್ತು.
ಬಿಲ್ಕಿಸ್ ಬಾನೊ ಪ್ರಕರಣದಲ್ಲಿ ಮಹತ್ವದ ತೀರ್ಪು; ಅಪರಾಧಿಗಳ ಬಿಡುಗಡೆ ಆದೇಶ ರದ್ದುಗೊಳಿಸಿದ ಸುಪ್ರೀಂ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:19 − twelve =
Remember me
