ನವದೆಹಲಿ:ತಮ್ಮ ಅಧಿಕಾರಾವಧಿ ಮುಗಿಯುವ ಮೊದಲೇ ಬಿಜೆಡಿ ನಾಯಕಿ ಮಮತಾ ಮೊಹಾಂತ ತಮ್ಮ ಇಂದು ರಾಜ್ಯಸಭಾ ಸದಸ್ಯೆ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಪತ್ರ ಸ್ವೀಕರಿಸಿರುವುದಾಗಿ ರಾಜ್ಯಸಭಾ ಸಭಾಧ್ಯಕ್ಷ ಜಗದೀಪ್ ಧನಕರ್ ತಿಳಿಸಿದ್ದಾರೆ.
ಇದನ್ನೂ ಓದಿ:ಮಂಡ್ಯ ಜಿಲ್ಲೆಯ ಪ್ರವಾಸಿ ಸ್ಥಳಗಳಿಗೆ ನಿರ್ಬಂಧ: ಜಿಲ್ಲಾಧಿಕಾರಿ ಆದೇಶ!
ಮಮತಾ ಮೊಹಾಂತ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಮತ್ತು ವೈಯಕ್ತಿಕವಾಗಿ ನನಗೆ ಹಸ್ತಾಂತರಿಸಿದ್ದಾರೆ. ಅದು ಸಾಂವಿಧಾನಿಕವಾಗಿ ಕ್ರಮಬದ್ಧವಾಗಿದೆ ಎಂದು ನಾನು ಕಂಡುಕೊಂಡಿದ್ದೇನೆ. ಒಡಿಶಾ ರಾಜ್ಯವನ್ನು ಪ್ರತಿನಿಧಿಸುವ ರಾಜ್ಯಸಭಾ ಸದಸ್ಯೆ ಮಮತಾ ಮೊಹಾಂತ ಅವರ ರಾಜೀನಾಮೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಂಗೀಕರಿಸಿದ್ದೇನೆ” ಎಂದು ಜಗದೀಪ್ ಧಂಖರ್ ಹೇಳಿದ್ದಾರೆ.
ರಾಜ್ಯಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿರುವ ಮಮತಾ ಮೊಹಾಂತಾ ಬಿಜೆಪಿ ಸೇರುವ ಸಾಧ್ಯತೆ ಇದೆ ಎಂದು ಮೂಲಗಳು ಇಂದು ತಿಳಿಸಿವೆ. ಒಡಿಶಾ ವಿಧಾನಸಭೆಯಲ್ಲಿ ಬಿಜೆಪಿ ಬಹುಮತ ಹೊಂದಿದ್ದು, ಮಮತಾ ಮೊಹಾಂತಾ ರಾಜೀನಾಮೆಯ ನಂತರ ನಡೆಯಲಿರುವ ಉಪಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಆಯ್ಕೆಯಾಗುವುದು ಖಚಿತವಾಗಿದೆ ಎನ್ನಲಾಗಿದೆ.
ಮಮತಾ ಮೊಹಾಂತ ರಾಜೀನಾಮೆ ಪತ್ರ:ರಾಜ್ಯಸಭಾ ಅಧ್ಯಕ್ಷರಿಗೆ ನೀಡಿದ ರಾಜೀನಾಮೆ ಪತ್ರದಲ್ಲಿ ಮಮತಾ ಮೊಹಾಂತಾ ಅವರು, “ರಾಜ್ಯಸಭೆಯ ಸದಸ್ಯತ್ವಕ್ಕೆ ನಾನು ಇಂದು, ಅಂದರೆ ಜುಲೈ 31ರಂದು ರಾಜೀನಾಮೆ ನೀಡುತ್ತೇನೆ. ನಾನು ಈ ನಿರ್ಧಾರವನ್ನು ಪ್ರಜ್ಞಾಪೂರ್ವಕವಾಗಿ ತೆಗೆದುಕೊಂಡಿದ್ದೇನೆ” ಎಂದು ಬರೆದಿದ್ದಾರೆ.
ಮಮತಾ ಮೊಹಾಂತಾ ಅವರು ತಮ್ಮ ಅಧಿಕೃತ ಎಕ್ಸ್ ಹ್ಯಾಂಡಲ್‌ನಲ್ಲಿ ತಮ್ಮ ರಾಜೀನಾಮೆಯ ಬಗ್ಗೆ ಪೋಸ್ಟ್ ಮಾಡಿದ್ದಾರೆ. ಇಂದು ನಾನು ರಾಜ್ಯಸಭಾ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ಬಿಜು ಜನತಾದಳ ಪಕ್ಷದ ಅಧ್ಯಕ್ಷರು ಜಿಲ್ಲಾ ಪರಿಷತ್ ಸದಸ್ಯೆ ಹಾಗೂ ರಾಜ್ಯಸಭಾ ಸದಸ್ಯೆಯಾಗಿ ಆಯ್ಕೆ ಮಾಡಿ ಜಿಲ್ಲೆಯ ಸೇವೆ ಮಾಡುವ ಅವಕಾಶ ಕಲ್ಪಿಸಿಕೊಟ್ಟಿದ್ದಾರೆ” ಎಂದು ಹೇಳಿದ್ದಾರೆ.
ಪಕ್ಷದ ಸದಸ್ಯತ್ವ ಸ್ಥಾನಕ್ಕೂ ರಾಜೀನಾಮೆ:ನವೀನ್ ಪಟ್ನಾಯಕ್ ಅವರಿಗೆ ಸಲ್ಲಿಸಿದ ರಾಜೀನಾಮೆ ಪತ್ರದಲ್ಲಿ ಮಮತಾ ಮೊಹಾಂತಾ ಅವರು, “ನಾನು ಇಂದು ಬಿಜು ಜನತಾ ದಳದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತೇನೆ. ತನ್ನನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡುವ ಮೂಲಕ ರಾಜ್ಯ ಮತ್ತು ಮಯೂರ್‌ಭಂಜ್ ಜಿಲ್ಲೆಗೆ ಸೇವೆ ಸಲ್ಲಿಸಲು ಅವಕಾಶ ನೀಡಿದ ನಿಮಗೆ ನಾನು ಪ್ರಾಮಾಣಿಕವಾಗಿ ಕೃತಜ್ಞತೆ ಸಲ್ಲಿಸುತ್ತೇನೆ. ಬಿಜು ಜನತಾ ದಳದಲ್ಲಿ ನನ್ನ ಮತ್ತು ನನ್ನ ಸಮುದಾಯದ ಸೇವೆಗಳ ಅಗತ್ಯವಿಲ್ಲ ಎಂದು ನಾನು ಭಾವಿಸುತ್ತೇನೆ. ಆದ್ದರಿಂದ, ನಾನು ಸಾರ್ವಜನಿಕ ಹಿತಾಸಕ್ತಿಯಿಂದ ಈ ಕಠಿಣ ನಿರ್ಧಾರವನ್ನು ತೆಗೆದುಕೊಂಡಿದ್ದೇನೆ” ಎಂದು ಮಮತಾ ಮೊಹಾಂತಾ ಪೋಸ್ಟ್ ಮಾಡಿದ್ದಾರೆ.
ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಆರೋಪ: ಪ್ರತಾಪ್ ಸಿಂಹ, ಪುನೀತ್ ಕೆರೆಹಳ್ಳಿ ವಿರುದ್ಧ ಎಫ್‌ಐಆರ್‌ ದಾಖಲು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × five =
Remember me
