ನವದೆಹಲಿ:ಕೇಂದ್ರ ಸರ್ಕಾರವು ಪ್ರತಿ ವರ್ಷ ಜೂನ್​​ 25 ಅನ್ನು ‘ಸಂವಿಧಾನ ಹತ್ಯೆ ದಿನ’ ಎಂದು ಆಚರಿಸಲು ಘೋಷಿಸಿದೆ. ಈ ಸಂಬಂಧ ಕೇಂದ್ರ ಸರ್ಕಾರ ತನ್ನ ಗೆಜೆಟ್​​ ಅಧಿಸೂಚನೆಯನ್ನು ಶುಕ್ರವಾರ(ಜುಲೈ 12) ಹೊರಡಿಸಿದ್ದು, ಗೃಹ ಸಚಿವ ಅಮಿತ್ ಷಾ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡುವ ಮೂಲಕ ಈ ಮಾಹಿತಿ ನೀಡಿದ್ದಾರೆ.
ಇದನ್ನು ಓದಿ:ಆಂಧ್ರ ಮಾಜಿ ಸಿಎಂ ಜಗನ್​ ಮೋಹನ್​ ರೆಡ್ಡಿ ವಿರುದ್ಧ ಹತ್ಯೆ ಪ್ರಕರಣ ದಾಖಲು
ಇಂದಿರಾ ಗಾಂಧಿ ಅವರ ನೇತೃತ್ವದ ಕಾಂಗ್ರೆಸ್​​​ ಸರ್ಕಾರವು 1975 ಜೂನ್​ 25ರಂದು ತುರ್ತು ಪರಿಸ್ಥಿತಿಯನ್ನು ಹೇರಿತು. ಇದು ಎರಡು ವರ್ಷಗಳ ಕಾಲ ನಾಗರಿಕ ಹಕ್ಕುಗಳನ್ನು ಅಮಾನತುಗೊಳಿಸಿತು. ಇಂದಿರಾ ಗಾಂಧಿ ಅವರು ತಮ್ಮ ಸರ್ವಾಧಿಕಾರಿ ಮನಸ್ಥಿತಿಯನ್ನು ಪ್ರದರ್ಶಿಸಿ ದೇಶದಲ್ಲಿ ತುರ್ತು ಪರಿಸ್ಥಿತಿ ಹೇರುವ ಮೂಲಕ ಭಾರತೀಯ ಪ್ರಜಾಪ್ರಭುತ್ವದ ಆತ್ಮವನ್ನು ಕತ್ತು ಹಿಸುಕಿದರು. ಲಕ್ಷಾಂತರ ಜನರನ್ನು ಅವರ ತಪ್ಪಿಲ್ಲದೆ ವಿನಾಕಾರಣ ಜೈಲಿಗೆ ಹಾಕಲಾಯಿತು ಮತ್ತು ಮಾಧ್ಯಮಗಳ ಧ್ವನಿಯನ್ನು ಹತ್ತಿಕ್ಕಲಾಯಿತು ಎಂದು ಕೇಂದ್ರ ಗೃಹ ಸಚಿವರು ಹೇಳಿದರು.
ಈ ಘಟನೆಯು ಭಾರತದ ಜನರು ಸಂವಿಧಾನ ಮತ್ತು ಅದರ ಚೇತರಿಸಿಕೊಳ್ಳುವ ಪ್ರಜಾಪ್ರಭುತ್ವದ ಶಕ್ತಿಯಲ್ಲಿ ಅಚಲವಾದ ನಂಬಿಕೆ ಹೊಂದಿದ್ದಾರೆ ಎಂಬುದನ್ನು ತಿಳಿಸುತ್ತದೆ. ಭಾರತ ಸರ್ಕಾರವು ಪ್ರತಿ ವರ್ಷ ಜೂನ್​​ 25 ಅನ್ನು ಸಂವಿಧಾನ ಹತ್ಯೆ ದಿನ ಎಂದು ಆಚರಿಸಲು ನಿರ್ಧರಿಸಿದೆ. ಈ ದಿನವು 1975ರ ತುರ್ತು ಪರಿಸ್ಥಿತಿಯ ಅಮಾನವೀಯ ನೋವುಗಳನ್ನು ಸಹಿಸಿಕೊಂಡ ಎಲ್ಲರ ಅಪಾರ ಕೊಡುಗೆಗಳನ್ನು ಸ್ಮರಿಸುತ್ತದೆ ಎಂದು ಅವರು ಹೇಳಿದರು.

ಕೇಂದ್ರ ಸರ್ಕಾರದ ಈ ನಿರ್ಧಾರ ತುರ್ತು ಪರಿಸ್ಥಿತಿಯಲ್ಲಿ ಜನರ ಹೋರಾಟವನ್ನು ನೆನಪಿಸುತ್ತದೆ ಮತ್ತು ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಜನರಲ್ಲಿ ಜಾಗೃತಿ ಮೂಡಿಸುತ್ತದೆ ಎಂದು ತಿಳಿಸಿದರು. (ಏಜೆನ್ಸೀಸ್​​)
ಜಾಮೀನು ದೊರೆತರು ಸಿಎಂ ಕೇಜ್ರಿವಾಲ್​ಗಿಲ್ಲ ಬಿಡುಗಡೆ ಭಾಗ್ಯ; ನ್ಯಾಯಾಂಗ ಬಂಧನ ವಿಸ್ತರಿಸಿದ ಕೋರ್ಟ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 + 2 =
Remember me
