ಕೊಲ್ಕತಾ:ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಯ ಬಿಸಿ ಏರುತ್ತಿರುವಂತೆ, ಪಕ್ಷಗಳ ನಡುವಿನ ಸಂಘರ್ಷವು ಹಿಂಸಾತ್ಮಕ ತಿರುವು ಪಡೆಯುತ್ತಿದೆ. ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯಲ್ಲಿ ಆರು ಬಿಜೆಪಿ ಕಾರ್ಯಕರ್ತರ ಮೇಲೆ ಕ್ರೂಡ್​ ಬಾಂಬ್‌ಗಳಿಂದ ಹಲ್ಲೆ ನಡೆದಿದೆ. ತೀವ್ರವಾಗಿ ಗಾಯಗೊಂಡಿರುವ ಕಾರ್ಯಕರ್ತರು, ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾರ್ಯಕರ್ತರು ತಮ್ಮ ಮೇಲೆ ಈ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ.
ಶುಕ್ರವಾರ ರಾತ್ರಿ, ಆರು ಬಿಜೆಪಿ ಕಾರ್ಯಕರ್ತರು ವಿವಾಹ ಸಮಾರಂಭವೊಂದನ್ನು ಮುಗಿಸಿ ವಾಪಸಾಗುತ್ತಿದ್ದಾಗ, ದುಷ್ಕರ್ಮಿಗಳು ಅವರ ಮೇಲೆ ಕ್ರೂಡ್ ಬಾಂಬ್​ಗಳನ್ನು ಎಸೆದಿದ್ದಾರೆ. ಈ ಹಲ್ಲೆಯಿಂದಾಗಿ ಗಂಭೀರವಾಗಿ ಗಾಯಗೊಂಡ ಕಾರ್ಯಕರ್ತರನ್ನು ತಕ್ಷಣ ಕಾನ್ನಿಂಗ್ ಉಪವಿಭಾಗೀಯ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಅವರಲ್ಲಿ ಇಬ್ಬರು ಗಂಭೀರ ಸ್ಥಿತಿಯಲ್ಲಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ:ಕೋ-ವಿನ್ ಸರ್ಟಿಫಿಕೇಟ್​ : ಟಿಎಂಸಿ ಕಣ್ಣು ಕುಕ್ಕಿದ ಪ್ರಧಾನಿ ಮೋದಿ ಫೋಟೋ !
ಶೋವನ್ ದೇಬನಾಥ್, ವಿಕ್ರಮ್ ಶಿಲ್, ಅರ್ಪಣ್ ದೇಬನಾಥ್, ಸ್ವಪನ್ ಕುರಳಿ, ಮಹಾದೇವ್ ನಾಯಕ್ ಮತ್ತು ಮತ್ತೊಬ್ಬರು ಗಾಯಗೊಂಡಿರುವ ಕಾರ್ಯಕರ್ತರು. ತಮ್ಮೆಡೆಗೆ ಬಾಂಬ್ ಎಸೆದದ್ದು ಟಿಎಂಸಿ ಕಾರ್ಯಕರ್ತರು ಎಂದು ಅವರು ಆರೋಪಿಸಿದ್ದಾರೆ. ಪೊಲೀಸರು ಈ ಬಗ್ಗೆ ತನಿಖೆ ಆರಂಭಿಸಿದ್ದಾರೆ.
ಮತ್ತೊಂದೆಡೆ, ಗೊಸಬ ವಿಧಾನಸಭೆಯ ಟಿಎಂಸಿ ಚುನಾವಣಾ ಅಭ್ಯರ್ಥಿ ಜಯಂತ್ ನಸ್ಕರ್, ಬಿಜೆಪಿ ನಾಯಕ ವರುಣ್ ಪ್ರಮಾಣಿಕ್ ಅವರು ದುಷ್ಕರ್ಮಿಗಳೊಂದಿಗೆ ಬಾಂಬ್ ಇಡಲು ಪ್ರಯತ್ನಿಸಿದಾಗ, ಆರು ಜನರು ಗಾಯಗೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.(ಏಜೆನ್ಸೀಸ್)
ಕ್ಷಣಕ್ಷಣದ ಮಾಹಿತಿಗಾಗಿ ವಿಜಯವಾಣಿ ಫೇಸ್​ಬುಕ್​ ಪೇಜ್​ ಲೈಕ್​ ಮಾಡಿ

ಕರೊನಾ ಲಸಿಕಾ ಪ್ರಮಾಣಪತ್ರದಿಂದ ಪ್ರಧಾನಿ ಫೋಟೋ ತೆಗೆಯಿರಿ: ಕೇಂದ್ರಕ್ಕೆ ಚುನಾವಣಾ ಆಯೋಗ ಸೂಚನೆ
‘ಜಿಂದಗಿ ನಾ ಮಿಲೇಗಿ ದೋಬಾರಾ 2’ ಚಿತ್ರಕ್ಕೆ ಆಲಿಯಾ ಭಟ್ ನಾಯಕಿ


ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:sixteen − three =
Remember me
