ನವದೆಹಲಿ:ಲೋಕಸಭಾ ಚುನಾವಣಾ ಮುನ್ನ ಕಾಂಗ್ರೆಸ್​ಗೆ ದಿನಕ್ಕೊಂದು ಶಾಕ್​ ಎದುರಾಗುತ್ತಿದೆ. ಇಂದು ( ಬುಧವಾರ) ಬಾಕ್ಸರ್ ವಿಜೇಂದರ್ ಸಿಂಗ್ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.ಬುಧವಾರ ಪಕ್ಷದ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು.
ಇದನ್ನೂ ಓದಿ:Virat Kohli: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ವಿಶೇಷ ದಾಖಲೆ ಬರೆದ ಕಿಂಗ್ ಕೊಹ್ಲಿ!
ಈ ಸಂದರ್ಭದಲ್ಲಿ ಮಾತನಾಡಿದ ಅವರು, ನಾನು ರಾಷ್ಟ್ರದ ಹಿತಾಸಕ್ತಿ ಮತ್ತು ಜನರ ಸೇವೆಗಾಗಿ ಬಿಜೆಪಿಗೆ ಸೇರಿದ್ದೇನೆ. ನಾನು ಈ ಮೂಲಕ ಹೆಚ್ಚು ಹೆಚ್ಚು ಜನರಿಗೆ ಸಹಾಯ ಮಾಡಲು ಬಯಸುತ್ತೇನೆ. ಈ ಹಿಂದೆ ಕಾಂಗ್ರೆಸ್‌ನಲ್ಲಿದ್ದ ಸಿಂಗ್, 2019 ರ ಲೋಕಸಭಾ ಚುನಾವಣೆಯಲ್ಲಿ ದಕ್ಷಿಣ ದೆಹಲಿಯಿಂದ ಸ್ಪರ್ಧಿಸಿದ್ದರು ಆದರೆ ಬಿಜೆಪಿಯ ರಮೇಶ್ ಬಿಧುರಿ ವಿರುದ್ಧ ಸೋತರು, ನಂತರ ಆಮ್ ಆದ್ಮಿ ಪಕ್ಷದ (ಎಎಪಿ) ರಾಘವ್ ಚಡ್ಡಾ ವಿರುದ್ಧ ಗೆದ್ದರು.
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸಂಸದೆ ಮತ್ತು ನಟಿ ಹೇಮಾ ಮಾಲಿನಿ ಅವರು ಮಥುರಾದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ. ಇಲ್ಲಿ ವಿಜೇಂದರ್ ಸಿಂಗ್ ಸ್ಪರ್ಧಿಸಲಿದ್ದಾರೆ ಎಂದು ವರದಿಯಾಗಿದೆ.
ಬಾಕ್ಸರ್​ ವಿಜೇಂದರ್ ಸಿಂಗ್ ಜಾಟ್ ಸಮುದಾಯದವರಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಸ್ಥಾನ ಪಡೆಯುವ ನಿಟ್ಟಿನಲ್ಲಿ ಹಾಗೂ ಹರಿಯಾಣದಲ್ಲಿ ಬಿಜೆಪಿ ಪ್ರಭಾವವನ್ನು ಹೆಚ್ಚಿಸಲು ಇವರ ಸೇರ್ಪಡೆ ಬಿಜೆಪಿಗೆ ಬಲ ತಂದಿದೆ. 2008ರ ಬೀಜಿಂಗ್ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ಗೆದ್ದ ಮೊದಲ ಭಾರತೀಯ ಬಾಕ್ಸರ್ ಸಿಂಗ್. ಅವರು 2006 ಮತ್ತು 2014 ರ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಬೆಳ್ಳಿ ಪದಕಗಳನ್ನು ಮತ್ತು 2010 ರ ಕ್ರೀಡಾಕೂಟದಲ್ಲಿ ಕಂಚಿನ ಪದಕಗಳನ್ನು ಮತ್ತು 2009 ರ ವಿಶ್ವ ಚಾಂಪಿಯನ್‌ಶಿಪ್‌ಗಳನ್ನು ಗೆದ್ದಿದ್ದಾರೆ.
ಕ್ರೀಡಾಪಟುಗಳಿಗೆ ಈ ಸರ್ಕಾರದ ಅಡಿಯಲ್ಲಿ ಸಿಗುವ ಗೌರವಕ್ಕಾಗಿ ನಾನು ಪ್ರಧಾನಿ ಮೋದಿ ಮತ್ತು ಬಿಜೆಪಿಗೆ ಧನ್ಯವಾದ ಹೇಳಲು ಬಯಸುತ್ತೇನೆ. ನಾನು ಈ ಸರ್ಕಾರದ ಭಾಗವಾಗಿ, ಜನರಿಗೆ ಸಹಾಯ ಮಾಡಲು ಮತ್ತು ಅವರಿಗೆ ಸರಿಯಾದ ಮಾರ್ಗವನ್ನು ತೋರಿಸಲು ಬಯಸುತ್ತೇನೆ ಎಂದರು.
Viral News: 12 ವರ್ಷದ ಬಾಲಕಿಯನ್ನು ಮದುವೆಯಾದ 63ರ ಧರ್ಮಗುರು! ಕಾರಣ ಹೀಗಿದೆ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen + one =
Remember me
