ಪಾಟ್ನಾ:ಕ್ಷುಲ್ಲಕ ಕಾರಣಕ್ಕಾಗಿ 12 ವರ್ಷದ ಬಾಲಕನನ್ನು ದಾರುಣವಾಗಿ ಥಳಿಸಿ ನೀರಿನ ಹೊಂಡಕ್ಕೆ ಎಸೆದಿರುವ ಘಟನೆ ಬಿಹಾರದ ಪಾಟ್ನಾ ಸಮೀಪದ ನಡೆದಿದೆ. ಘಟನೆಯ ಪರಿಣಾಮ ಬಾಲಕ ಮೃತಪಟ್ಟಿದ್ದು, ಆತನನ್ನು ದೀಪಕ್​ ಎಂದು ಗುರುತಿಸಲಾಗಿದೆ.
ದೀಪಕ್​ ಹಾಗೂ ಆತನ ಸ್ನೇಹಿತರು ಸಾಯಂಕಾಲ ಬಯಲಿನಲ್ಲಿ ಆಟವಾಡುತ್ತಿದ್ದ ವೇಳೆ, ಅಲ್ಲಿಯೇ ಸಮೀಪದ ಮನೆಯೊಂದರ ಮರದಲ್ಲಿ ಲೀಚಿ ಹಣ್ಣು ನೋಡಿ ಕೂಡಲೇ ಮರವನ್ನು ಏರಲು ಯತ್ನಿಸಿದ್ದಾರೆ. ಇದೇ ವೇಳೆ ದೀಪಕ್ ಮತ್ತು ಅವನ ಸ್ನೇಹಿತ ಮನೆಯ ಮಾಲೀಕನಾದ ಮಕ್ಬುಲ್ ಬೈತಾ ಕೈಗೆ ಸಿಕ್ಕಿಬಿದ್ದಿದ್ದಾರೆ.
ಇದನ್ನೂ ಓದಿ:ಏನೇ ಆದ್ರೂ ಆರ್​ಸಿಬಿ ನನ್ನ ಫೇವರಿಟ್… ಕಪ್ ಗೆಲ್ಲುವ ಸಮಯ ಬಂದೇ ಬರುತ್ತದೆ: ಡಿಕೆಶಿ
ನಂತರ ನಡೆದದ್ದು ನಾಚಿಕೆಗೇಡಿನ ಸಂಗತಿಯಾಗಿದ್ದು, ಮನೆಯ ಮಾಲೀಕ ಈ ಹುಡುಗರನ್ನು ದಾರುಣವಾಗಿ ಥಳಿಸಿ ನೀರಿನ ಹೊಂಡಕ್ಕೆ ಎಸೆದಿದ್ದಾನೆ. ಭೀಕರವಾಗಿ ಗಾಯಗೊಂಡಿದ್ದ ಬಾಲಕರಿಬ್ಬರನ್ನು ಸಮೀಪದ ಆಸ್ಪತ್ರೆಗೆ ಸೇರಿಸಲಾಯಿತು. ನಂತರ ದೀಪಕ್​ ಎಂಬ ಬಾಲಕ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದು, ಇನ್ನೊಬ್ಬ ಬಾಲಕ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾನೆ.
ಮನೆ ಮಾಲೀಕ ಬೈತಾ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ತನಿಖೆ ನಡೆಸಿ ಕ್ರಮ ಕೈಗೊಳ್ಳಲಾಗುವುದು. ಸದ್ಯ ಆರೋಪಿ ತಲೆಮರೆಸಿಕೊಂಡಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 4 =
Remember me
