ನವದೆಹಲಿ: ಐಎಂಎ ಕಂಪನಿಯ ಬಹುಕೋಟಿ ರೂಪಾಯಿ ವಂಚನೆ ಪ್ರಕರಣ ಸಂಬಂಧ ತನಿಖೆಗಿಳಿದಿರುವ ಸಿಬಿಐ ಅಧಿಕಾರಿಗಳು ಮತ್ತಷ್ಟು ಚುರುಕು ಮುಟ್ಟಿಸಿದ್ದು, 28 ಮಂದಿ ವಿರುದ್ಧ ಪೂರಕ ಚಾರ್ಜ್​​ಶೀಟ್​ ದಾಖಲಿಸಿದ್ದಾರೆ.
ಸುಮಾರು 4 ಸಾವಿರ ಕೋಟಿ ರೂಪಾಯಿನ ಈ ಹಗರಣ ಸಂಬಂಧ ಕಂಪನಿಯ ಎಂಡಿ ಹಾಗೂ ಸಿಇಒ ಮೊಹಮದ್​ ಮನ್ಸೂರ್ ಖಾನ್​ ಸೇರಿ ಅನೇಕ ಹಿರಿಯ ಅಧಿಕಾರಿಗಳೂ ಆರೋಪಿಗಳಾಗಿದ್ದಾರೆ. ಈ ಸಂಬಂಧ ಬೆಂಗಳೂರಿನ ಸಂಬಂಧಿತ ನ್ಯಾಯಾಲಯದಲ್ಲಿ ಪೂರಕ ದೋಷಾರೋಪ ಪಟ್ಟಿ ಸಲ್ಲಿಕೆ ಆಗಿದೆ.
ಐಜಿಪಿ ಹೇಮಂತ್ ನಿಂಬಾಳ್ಕರ್​, ಎಸ್​ಪಿ ಅಜಯ್​ ಹಿಲೊರಿ, ಡಿವೈಎಸ್​ಪಿ ಇ.ಬಿ. ಶ್ರೀಧರ, ಇನ್​ಸ್ಪೆಕ್ಟರ್ ಎಂ. ರಮೇಶ್​, ಎಸ್​ಐ ಪಿ.ಗೌರಿಶಂಕರ್​ ಹಾಗೂ ಆಗ ಅಸಿಸ್ಟೆಂಟ್ ಕಮಿಷನರ್ ಆಗಿದ್ದ ಎಲ್​.ಸಿ.ನಾಗರಾಜ್​ ಅವರ ಹೆಸರನ್ನು ಸಿಬಿಐ ಅಧಿಕಾರಿಗಳು ದೋಷಾರೋಪ ಪಟ್ಟಿಯಲ್ಲಿ ಉಲ್ಲೇಖಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಐಎಂಎ ಕಂಪನಿಯ ನಿರ್ದೇಶಕರಾದ ನಿಜಾಮುದ್ದೀನ್​, ನಸೀರ್ ಹುಸೇನ್​, ನವೀದ್​ ಅಹಮದ್ ನಟ್ಟಂಕರ್, ವಸೀಂ, ಅರ್ಷದ್​ ಖಾನ್​ ಹಾಗೂ ಅಫ್ಸರ್​ ಪಾಷಾ ಅವರ ಹೆಸರುಗಳೂ ಜಾರ್ಜ್​ಶೀಟ್​ನಲ್ಲಿವೆ ಎನ್ನಲಾಗಿದೆ. ​ಐಎಂಎ ಪ್ರಕರಣ 2018ರಲ್ಲಿ ಬೆಳಕಿಗೆ ಬಂದಿತ್ತು, ಬಳಿಕ ಮನ್ಸೂರ್ ಅಲಿಖಾನ್​ ಬಂಧನ ಕೂಡ ನಡೆದಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − 12 =
Remember me
