ನವದೆಹಲಿ:ಲಾಕ್​​ಡೌನ್​ನಿಂದ ಸಂಕಷ್ಟಕ್ಕೀಡಾಗಿರುವ ವಲಸೆ ಕಾರ್ಮಿಕರ ಸಹಾಯಕ್ಕೆ ಸಿಬಿಐ ಅಧಿಕಾರಿಗಳು ನಿಂತಿದ್ದಾರೆ.
ಚೆನ್ನೈ, ಬೆಂಗಳೂರು, ಹೈದರಾಬಾದ್​ ಸೇರಿ ಎಲ್ಲ ಶಾಖೆಗಳ ಅಧಿಕಾರಿಗಳೂ ದಿನಗೂಲಿ ಕೆಲಸಗಾರರಿಗೆ, ವಲಸೆ ಕಾರ್ಮಿಕರಿಗೆ ಅಕ್ಕಿ-ಬೇಳೆ, ಮತ್ತಿತರ ಆಹಾರಗಳನ್ನು ಒದಗಿಸುತ್ತಿದ್ದಾರೆ. ಕೆಲಸಗಳಿಲ್ಲದೆ ಕಷ್ಟಪಡುತ್ತಿರುವ ಅನೇಕ ವಲಸೆ ಕಾರ್ಮಿಕರು, ದಿನಗೂಲಿ ಕೆಲಸಗಾರರಿಗೆ ದೇಶದ ಹಲವೆಡೆ ತಾತ್ಕಾಲಿಕ ಆಶ್ರಯ ಕಲ್ಪಿಸಲಾಗಿದೆ. ಅಧಿಕಾರಿಗಳು ಅಂತಹ ಆಶ್ರಯ ತಾಣಗಳಿಗೆ ಹೋಗಿ ನೆರವು ನೀಡುತ್ತಿದ್ದಾರೆ ಎಂದು ಸಿಬಿಐ ವಕ್ತಾರ ಆರ್​.ಕೆ.ಗೌರ್​ ತಿಳಿಸಿದ್ದಾರೆ.
ಲಾಕ್​ಡೌನ್​ ಘೋಷಣೆಯಾಗಿದ್ದರಿಂದ ವಲಸೆ ಕಾರ್ಮಿಕರು, ದಿನಗೂಲಿ ಕೆಲಸಗಾರರು ಅಕ್ಷರಶಃ ನಿರುದ್ಯೋಗಿಗಳಾಗಿದ್ದಾರೆ. ತಮ್ಮ ಸ್ವಂತ ಊರಿಗೆ ಹೋಗಲಾಗದೆ, ಕೆಲಸ ಮಾಡುವಲ್ಲೂ ಇರಲಾರದೆ ಪರಿತಪಿಸುತ್ತಿದ್ದ ಅಂಥವರಿಗಾಗಿ ದೇಶಾದ್ಯಂತ ಒಟ್ಟು 23,000 ಆಶ್ರಯ ತಾಣಗಳು, ಪರಿಹಾರ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಇಂಥ ಬಡ ಕಾರ್ಮಿಕರಿಗೆ ಅನೇಕರು ಸಹಾಯ ಹಸ್ತ ಚಾಚುತ್ತಿದ್ದಾರೆ. (ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 4 =
Remember me
