ನವದೆಹಲಿ:ಈ ಹಿಂದೆ ದೆಹಲಿ ಸರ್ಕಾರ ಜಾರಿಗೆ ತರಲು ಉದ್ದೇಶಿಸಿದ್ದ ಅಬಕಾರಿ ನೀತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ವಶದಲ್ಲಿರುವ ಬಿಆರ್​ಎಸ್​ ನಾಯಕಿ, ತೆಲಂಗಾಣ ಮಾಜಿ ಸಿಎಂ ಕೆಸಿಆರ್​ ಪುತ್ರಿ ಕೆ. ಕವಿತಾ ಅವರನ್ನು ಸಿಬಿಐ ಗುರುವಾರ (ಏಪ್ರಿಲ್ 11) ಬಂಧಿಸಿದೆ.
ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರಿಯಾ ತನಿಖಾ ದಳ (CBI) ಬುಧವಾರ (ಏಪ್ರಿಲ್ 10) ದೆಹಲಿಯ ತಿಹಾರ್​ ಜೈಲಿನಲ್ಲಿ ಕವಿತಾ ಅವರನ್ನು ವಿಚಾರಣೆಗೆ ಒಳಪಡಿಸಿತ್ತು. ಸುದೀರ್ಘ ವಿಚಾರಣೆ ನಡೆಸಿದ ಬಳಿಕ ನ್ಯಾಯಾಲಯದ ಅನುಮತಿ ಪಡೆದು ಸಿಬಿಐ ಕವಿತಾ ಅವರನ್ನು ವಶಕ್ಕೆ ಪಡೆದಿದೆ.
ಅಬಕಾರಿ ನೀತಿ ಜಾರಿಗೆ ಸಂಬಂಧಿಸಿದಂತೆ ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಮಾರ್ಚ್​ 15ರಂದು ಬಿಆರ್​ಎಸ್​ ನಾಯಕಿ ಕವಿತಾ ಅವರನ್ನು ವಿಚಾರಣೆ ನಡೆಸಿ ವಶಕ್ಕೆ ಪಡೆದಿತ್ತು. ದೆಹಲಿ ಅಬಕಾರಿ ನೀತಿ ಜಾರಿಗೆ ಸಂಬಂಧಿಸಿದಂತೆ ಕವಿತಾ ಅವರು 100 ಕೋಟಿ ರೂಪಾಯಿ ಕಿಕ್​ಬ್ಯಾಕ್​ ಪಡೆದಿದ್ದಾರೆ ಎಂದು ಆರೋಪಿಸಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × five =
Remember me
