ಈಶಾನ್ಯ ದೆಹಲಿ ಹಿಂಸಾಚಾರ ಸಿಬಿಎಸ್​ಇ ಪರೀಕ್ಷೆಗಳ ಮೇಲೆ ಕೂಡ ಪರಿಣಾಮ ಬೀರುತ್ತಿದೆ. ಫೆ.27 (ನಾಳೆ) ನಡೆಯಬೇಕಿದ್ದ ಸಿಬಿಎಸ್​ಇ 12ನೇ ತರಗತಿಯ ಇಂಗ್ಲಿಷ್ ಪರೀಕ್ಷೆಗಳನ್ನು ದೆಹಲಿಯ 80 ಕೇಂದ್ರಗಳಲ್ಲಿ ಮುಂದೂಡಲಾಗಿದೆ.
ಕಳೆದ ಮೂರು ದಿನಗಳಿಂದಲೂ ಈಶಾನ್ಯ ದೆಹಲಿ ಹಾಗೂ ಪೂರ್ವ ದೆಹಲಿಯ ಕೆಲವು ಭಾಗಗಳಲ್ಲಿ ಸಿಎಎ ಸಂಬಂಧ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು ಪ್ರಕ್ಷುಬ್ದ ವಾತಾವರಣ ಉಂಟಾಗಿದೆ. ಯಾರೂ ಹೊರಬೀಳದಂತ ಪರಿಸ್ಥಿತಿ ಎದುರಾಗಿದೆ.
ಇಂದು ಕೂಡ ಪರೀಕ್ಷೆಯಿತ್ತು. ಆದರೆ ಫೆ.25ರಂದು ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ ಅದನ್ನು ಮುಂದೂಡಿ ನೋಟಿಸ್ ಹೊರಡಿಸಿತ್ತು. ಪರಿಸ್ಥಿತಿ ನಿಯಂತ್ರಣಕ್ಕೆ ಬಾರದ ಕಾರಣ ಫೆ.27ರಂದು ನಡೆಯಬೇಕಿದ್ದ ಇಂಗ್ಲಿಷ್​ ಪರೀಕ್ಷೆಯನ್ನು ಈಶಾನ್ಯ ದೆಹಲಿಯ 73 ಹಾಗೂ ಪೂರ್ವ ದೆಹಲಿಯ 7 ಕೇಂದ್ರಗಳಲ್ಲಿ ಮುಂದೂಡಿದೆ.
ವಿದ್ಯಾರ್ಥಿಗಳಿಗೆ, ಪರೀಕ್ಷಾ ಸಿಬ್ಬಂದಿಗೆ, ಪಾಲಕರಿಗೆ ಯಾವುದೇ ತೊಂದರೆಯಾಗಬಾರದು ಎಂಬ ಕಾರಣಕ್ಕೆ ದೆಹಲಿ ಸರ್ಕಾರ ಪರೀಕ್ಷೆ ಮುಂದೂಡುವಂತೆ ಮನವಿ ಮಾಡಿತ್ತು. ಹಾಗಾಗಿ ಕೇಂದ್ರೀಯ ಪೌಢ ಶಿಕ್ಷಣ ಮಂಡಳಿ ಈ ನಿರ್ಧಾರ ತೆಗೆದುಕೊಂಡಿದೆ ಎಂದು ಸಿಬಿಎಸ್ಇ ಕಾರ್ಯದರ್ಶಿ ಅನುರಾಗ್​ ತ್ರಿಪಾಠಿ ತಿಳಿಸಿದ್ದಾರೆ. (ಏಜೆನ್ಸೀಸ್​)
#CBSEBoardExam2020#examtime@PIB_India@HRDMinistry@DDNewslive@AkashvaniAIR@OfficeOfSDhotre@DrRPNishank@PIBHindipic.twitter.com/bIr1hBofNB
— CBSE HQ (@cbseindia29)February 26, 2020

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − ten =
Remember me
