ನವದೆಹಲಿ: ಕೋವಿಡ್​ 19 ದೃಷ್ಟಿಯಲ್ಲಿ ಇರಿಸಿಕೊಂಡು ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳೊಂದಿಗೆ ಪರೀಕ್ಷೆ ನಡೆಸುವ ತಮ್ಮ ನಿರ್ಧಾರದಿಂದ ಹಿಂದೆ ಸರಿಯುವುದಿಲ್ಲ ಎಂದು ದ ಸೆಂಟ್ರಲ್​ ಬೋರ್ಡ್ ಆಫ್​ ಸೆಕೆಂಡರಿ ಎಜುಕೇಶನ್ (ಸಿಬಿಎಸ್​ಇ) ಶುಕ್ರವಾರ ಸುಪ್ರೀಂ ಕೋರ್ಟ್​ಗೆ ತಿಳಿಸಿದೆ. ಅಲ್ಲದೆ, ಪರೀಕ್ಷೆ ಮುಂದೂಡುವಂತೆ ಕೋರಿ ಸಲ್ಲಿಕೆಯಾದ ಅರ್ಜಿಗಳ ಬಗ್ಗೆ ವಿರೋಧ ವ್ಯಕ್ತಪಡಿಸಿದೆ.
ನ್ಯಾಯಮೂರ್ತಿಗಳಾದ ಎ.ಎಂ.ಖಾನ್ವಿಲ್ಕರ್, ದಿನೇಶ್ ಮಹೇಶ್ವರಿ, ಸಂಜೀವ್​ ಖನ್ನಾ ಅವರನ್ನು ಒಳಗೊಂಡ ನ್ಯಾಯಪೀಠ ಅನಿಕಾ ಸಂವೇದಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಸಂದರ್ಭದಲ್ಲಿ ಸಿಬಿಎಸ್​ಇ ತನ್ನ ಪ್ರತಿಕ್ರಿಯೆಯನ್ನು ಸಲ್ಲಿಸಿದೆ. ಇದೇ ವೇಳೆ ನ್ಯಾಯಪೀಠವು, ಪರೀಕ್ಷೆ ಮುಂದೂಡುವುದರಿಂದ ನಿಜವಾಗಿಯೂ ವಿದ್ಯಾರ್ಥಿಗಳಿಗೆ ಅನುಕೂಲವಾಗುತ್ತದೆಯೇ ಎಂದು ಅರ್ಜಿದಾರರ ಪರ ವಕೀಲರನ್ನು ಪ್ರಶ್ನಿಸಿದೆ. ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಯಿತು.
ಇದನ್ನೂ ಓದಿ:ವಿದ್ಯುತ್​ ಬಲ್ಬ್​ ಕಂಡು ಹಿಡಿದದ್ದು ಥಾಮಸ್​ ಆಲ್ವ ಎಡಿಸನ್​ ಅಲ್ಲ…! ಇತಿಹಾಸಕ್ಕೆ ಹೊಸ ವ್ಯಾಖ್ಯಾನ ನೀಡಿದ ಜಾಯ್​ ಬಿಡೆನ್​
ಸಿಬಿಎಸ್​ಇ ಪರ ವಕೀಲರು ಪರೀಕ್ಷಾ ಸಿದ್ಧತೆಯ ವಿವರವನ್ನು ನೀಡಿದ್ದು, ಇದುವರೆಗೆ 575 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗುತ್ತಿತ್ತು. ಈಗ ಕೋವಿಡ್ ಇರುವ ಕಾರಣ 1,278 ಪರೀಕ್ಷಾ ಕೇಂದ್ರಗಳನ್ನು ಗುರುತಿಸಿದ್ದು, ಕೋವಿಡ್ ನಿಯಮ ಪಾಲಿಸುತ್ತ ಪರೀಕ್ಷೆ ನಡೆಸಲು ಸಾಧ್ಯವಿದೆ ಎಂದು ಪ್ರತಿಪಾದಿಸಿದರು. 40 ಜನ ಕುಳಿತುಕೊಳ್ಳುವ ತರಗತಿಯಲ್ಲಿ ಈ ಬಾರಿ 12 ವಿದ್ಯಾರ್ಥಿಗಳಷ್ಟೇ ಕುಳಿತುಕೊಳ್ಳಲಿದ್ದಾರೆ ಎಂಬ ವಿವರ ನೀಡಿದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಚಿಕ್ಕದೊಂದು ಅಫಿಡವಿಟನ್ನು ಸಲ್ಲಿಸಿದರೆ ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 10ಕ್ಕೆ ನಿಗದಿ ಮಾಡುವುದಾಗಿ ತಿಳಿಸಿತು. (ಏಜೆನ್ಸೀಸ್)
ವಿವಾದಕ್ಕೀಡಾಯಿತು ಪೀರನವಾಡಿ ವೃತ್ತದ ಬೃಹತ್​ ನಾಮಫಲಕ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen + five =
Remember me
