ನವದೆಹಲಿ:ಕೇಂದ್ರದ ಯೋಜನೆಗಳ ಮಂಜೂರಾತಿಯಲ್ಲಿ ತಮಿಳುನಾಡನ್ನು ನಿರ್ಲಕ್ಷಿಸಲಾಗಿದೆ ಎಂಬ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರ ಆರೋಪವನ್ನು ನರೇಂದ್ರ ಮೋದಿ ಸರ್ಕಾರ ಶುಕ್ರವಾರ ತಿರಸ್ಕರಿಸಿದೆ.
ಇದನ್ನೂ ಓದಿ:ದೇಶಾದ್ಯಂತ ಎಚ್​ಎಂಟಿ ಭೂಮಿ ಒತ್ತುವರಿ ತೆರವಿಗೆ ಕ್ರಮ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ
“ತಮಿಳುನಾಡು ಸಿಎಂ ಎಂಕೆ. ಸ್ಟಾಲಿನ್​ ಅವರ ಹೇಳಿಕೆ ಸತ್ಯಕ್ಕೆ ದೂರವಾಗಿದೆ. ಅಸಲಿ ಸಂಗತಿ ಏನೆಂದರೆ ಕಳೆದ ಹತ್ತು ವರ್ಷಗಳ ಎನ್‌ಡಿಎ ಸರ್ಕಾರ ರೈಲ್ವೆ, ಹೆದ್ದಾರಿಗಳು, ವಿಮಾನ ನಿಲ್ದಾಣಗಳು ಮತ್ತು ತಮಿಳುನಾಡಿನ ಸಾಮಾಜಿಕ ಮತ್ತು ಗ್ರಾಮೀಣ ಕ್ಷೇತ್ರಗಳಲ್ಲಿನ ಯೋಜನೆಗಳಿಗೆ ಧನಸಹಾಯವನ್ನು ಗಣನೀಯವಾಗಿ ಹೆಚ್ಚಿಸಿದೆ ಎಂದು ಸರ್ಕಾರದ ಮೂಲಗಳು ಹೇಳಿರುವುದಾಗಿ ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.
ಸರ್ಕಾರದ ಪ್ರಕಾರ, 2009 ರಿಂದ 2014ರ ನಡುವೆ ರೈಲ್ವೆ ಅಭಿವೃದ್ಧಿಗಾಗಿ ತಮಿಳುನಾಡಿಗೆ ಮೀಸಲಿಟ್ಟ ಬಜೆಟ್ ಸರಾಸರಿ 879 ಕೋಟಿ ರೂಪಾಯಿ. ಈಗ ಕೇಂದ್ರವು 2024-25ರಲ್ಲಿ ರಾಜ್ಯಕ್ಕೆ ರೈಲ್ವೆಗಾಗಿ 6,331 ಕೋಟಿಗಳ ದಾಖಲೆಯ ಬಜೆಟ್ ಅನ್ನು ನಿಗದಿಪಡಿಸಿದೆ.
ತಮಿಳುನಾಡಿನಲ್ಲಿ ಮೊದಲ ವಂದೇ ಭಾರತ್ ರೈಲನ್ನು ನವೆಂಬರ್ 11, 2022 ರಂದು ಫ್ಲ್ಯಾಗ್ ಆಫ್ ಮಾಡಲಾಗಿದೆ ಎಂದು ಸರ್ಕಾರ ಹೇಳಿದೆ. ಪ್ರಸ್ತುತ, ರಾಜ್ಯದಲ್ಲಿ 8 ವಂದೇ ಭಾರತ್ ರೈಲುಗಳು ಕಾರ್ಯನಿರ್ವಹಿಸುತ್ತಿವೆ. 2014ರಲ್ಲಿ ರಾಜ್ಯದ ಒಟ್ಟು ರಾಷ್ಟ್ರೀಯ ಹೆದ್ದಾರಿಗಳ ಉದ್ದ 4,985 ಕಿಲೋಮೀಟರ್‌ಗಳಾಗಿದ್ದು, ಈಗ ಶೇ.40ರಷ್ಟು ಏರಿಕೆಯಾಗಿ 6,806 ಕಿಲೋಮೀಟರ್‌ಗಳಿಗೆ ತಲುಪಿದೆ ಎಂದು ಕೇಂದ್ರ ಹೇಳಿದೆ.
64,704 ಕೋಟಿ ರೂ. ವೆಚ್ಚದಲ್ಲಿ 2,094 ಕಿಲೋಮೀಟರ್ ಉದ್ದದ ಯೋಜನೆಗಳನ್ನು 2014 ರಿಂದ ತಮಿಳುನಾಡಿಗೆ ನೀಡಲಾಗಿದೆ ಎಂದು ಸರ್ಕಾರ ಹೇಳಿದೆ. “ಭಾರತ ಸರ್ಕಾರವು ತಮಿಳುನಾಡಿನಲ್ಲಿ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಒಟ್ಟು 2 ಲಕ್ಷ ಕೋಟಿ ಹೂಡಿಕೆ ಮಾಡುತ್ತಿದೆ ಎಂದು ಮೂಲಗಳು ತಿಳಿಸಿವೆ.ಎರಡು ವಿಮಾನ ನಿಲ್ದಾಣಗಳ ಉನ್ನತೀಕರಣ: ನಾಗರಿಕ ವಿಮಾನಯಾನ ವಲಯದಲ್ಲಿ ತಮಿಳುನಾಡಿನಲ್ಲಿ 4,000 ಕೋಟಿ ಮೌಲ್ಯದ ಐದು ಯೋಜನೆಗಳಿಗೆ ಅನುಮೋದನೆ ನೀಡಲಾಗಿದ್ದು, ಈ ಪೈಕಿ ಎರಡು ಪೂರ್ಣಗೊಂಡಿವೆ. 2,467 ಕೋಟಿ ವೆಚ್ಚದ ಚೆನ್ನೈ ವಿಮಾನ ನಿಲ್ದಾಣದ ಆಧುನೀಕರಣವು ಎರಡು ಹಂತಗಳಲ್ಲಿ ಅನುಷ್ಠಾನದಲ್ಲಿದೆ. ಮೊದಲನೆಯದನ್ನು ಏಪ್ರಿಲ್ 2023 ರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಿದರು. ಜೊತೆಗೆ 1,112 ಕೋಟಿ ಮೌಲ್ಯದ ತಿರುಚ್ಚಿ ವಿಮಾನ ನಿಲ್ದಾಣದಲ್ಲಿ ಹೊಸ ಸಮಗ್ರ ಟರ್ಮಿನಲ್ ಕಟ್ಟಡದ ನಿರ್ಮಾಣ ಜನವರಿ 2024 ರಲ್ಲಿ ಪ್ರಧಾನ ಮಂತ್ರಿಯವರು ಪೂರ್ಣಗೊಳಿಸಿದರು ಮತ್ತು ಉದ್ಘಾಟಿಸಿದರು ಎಂದು ಸರ್ಕಾರ ಹೇಳಿದೆ.
ಎಫ್‌ಐಡಿಎಫ್ ಅಭಿವೃದ್ಧಿಗೆ 1,574 ಕೋಟಿ ರೂ.:62 ಪೂರ್ಣಗೊಂಡ ಯೋಜನೆಗಳಲ್ಲಿ ಬಂದರು ಮತ್ತು ಹಡಗು ವಲಯದಲ್ಲಿ ತಮಿಳುನಾಡು ಪಡೆದ ಒಟ್ಟು ಹೂಡಿಕೆ 10,168 ಕೋಟಿಗಳಷ್ಟಿದೆ. ಮೀನುಗಾರಿಕೆ ಮತ್ತು ಜಲಕೃಷಿ ಮೂಲಸೌಕರ್ಯ ಅಭಿವೃದ್ಧಿ ನಿಧಿಯಡಿ (ಎಫ್‌ಐಡಿಎಫ್) ತಮಿಳುನಾಡಿಗೆ 1,574 ಕೋಟಿ ರೂ. ಮೌಲ್ಯದ 64 ಯೋಜನೆಗಳಿಗೆ ಕೇಂದ್ರದಿಂದ ಅನುಮೋದನೆ ನೀಡಲಾಗಿದ್ದು, ಈ ಪೈಕಿ 34 ಪೂರ್ಣಗೊಂಡಿವೆ. ಕಳೆದ 10 ವರ್ಷಗಳಲ್ಲಿ ರಾಜ್ಯದಲ್ಲಿ 15 ಲಕ್ಷಕ್ಕೂ ಹೆಚ್ಚು ಮನೆಗಳ ನಿರ್ಮಾಣಕ್ಕೆ 20,000 ಕೋಟಿ ರೂ. ಬಿಡುಗಡೆ ಮಾಡಿದೆ ಎಂದು ಕೇಂದ್ರ ಹೇಳಿದೆ.
1 ಕೋಟಿಗೂ ಹೆಚ್ಚು ಕುಟುಂಬಗಳಿಗೆ ನಲ್ಲಿ ನೀರು:5 ಲಕ್ಷಕ್ಕೂ ಹೆಚ್ಚು ಸಾಲ ಪಿಎಂ ಸ್ವನಿಧಿ ಯೋಜನೆಯಡಿ ತಮಿಳುನಾಡಿನ ಬೀದಿ ವ್ಯಾಪಾರಿಗಳಿಗೆ 670 ಕೋಟಿ ವಿತರಿಸಲಾಗಿದೆ, ಆದರೆ ತಮಿಳುನಾಡಿನ 46 ಲಕ್ಷಕ್ಕೂ ಹೆಚ್ಚು ರೈತರು ಪಿಎಂ ಕಿಸಾನ್ ಸಮ್ಮಾನ್ ನಿಧಿ ಅಡಿಯಲ್ಲಿ 11 ಲಕ್ಷ ಕೋಟಿ ರೂ. ಮೊತ್ತದ ಲಾಭ ಪಡೆದಿದ್ದಾರೆ. ತಮಿಳುನಾಡಿನಲ್ಲಿ 1 ಕೋಟಿಗೂ ಹೆಚ್ಚು ಕುಟುಂಬಗಳಿಗೆ ನಲ್ಲಿ ನೀರಿನ ಸಂಪರ್ಕವನ್ನು ಒದಗಿಸಲಾಗಿದೆ. 6,500 ಗ್ರಾಮಗಳು ಜಲ ಜೀವನ್ ಮಿಷನ್ ಅಡಿಯಲ್ಲಿ 100 ಪ್ರತಿಶತ ಮನೆಗಳಲ್ಲಿ ಟ್ಯಾಪ್ ಸಂಪರ್ಕಗಳನ್ನು ಹೊಂದಿವೆ ಎಂದು ಕೇಂದ್ರ ಸರ್ಕಾರ ಹೇಳಿದೆ.
ವಾಲ್ಮೀಕಿ, ಮೂಡಾ ಹಗರಣದಲ್ಲಿ ಸಿಎಂ ಪಾತ್ರದ ಬಗ್ಗೆ ತನಿಖೆ ಆಗಲೇಬೇಕು: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಗ್ರಹ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:seven + 17 =
Remember me
