ಆಂಧ್ರಪ್ರದೇಶ:ಮಾಜಿ ಮುಖ್ಯಮಂತ್ರಿ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ಅಧ್ಯಕ್ಷ ಎನ್ ಚಂದ್ರಬಾಬು ನಾಯ್ಡು ಅವರ ಬಂಧನ ರಾಜಕೀಯ ಕೋಲಾಹಲ ಸೃಷ್ಟಿಸಿದೆ. ಟಿಡಿಪಿ ಕಾರ್ಯಕರ್ತರು ಬೀದಿಗಿಳಿದು ತೀವ್ರ ಪ್ರತಿಭಟನೆ ನಡೆಸುತ್ತಿದ್ದಾರೆ. 350 ಕೋಟಿ ರೂ. ರಾಜ್ಯ ಕೌಶಲ್ಯ ಅಭಿವೃದ್ಧಿ ನಿಗಮ (APSSDC) ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿಯನ್ನು ಬಂಧಿಸಲಾಗಿದೆ. ಅನೇಕ ಟಿಡಿಪಿ ನಾಯಕರನ್ನು ಸಹ ಗೃಹಬಂಧನದಲ್ಲಿ ಇರಿಸಲಾಗಿದೆ.
ಬಂಧನ120ಬಿ (ಕ್ರಿಮಿನಲ್ ಪಿತೂರಿ), 420 (ವಂಚನೆ ಮತ್ತು ಅಪ್ರಾಮಾಣಿಕವಾಗಿ ಆಸ್ತಿ ವಿತರಣೆಗೆ ಪ್ರೇರೇಪಿಸುವುದು) ಮತ್ತು 465 (ನಕಲಿ) ಸೇರಿದಂತೆ ಐಪಿಸಿಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ನಾಯ್ಡು ಅವರನ್ನು ಬಂಧಿಸಲಾಗಿದೆ. ಇದಲ್ಲದೆ ಭ್ರಷ್ಟಾಚಾರ ತಡೆ ಕಾಯ್ದೆಯನ್ನೂ ವಿಧಿಸಿದೆ.
ಕೌಶಲ್ಯ ಅಭಿವೃದ್ಧಿ ನಿಗಮದ ಹಗರಣ ಎಂದರೇನು?ಆಂಧ್ರಪ್ರದೇಶದ ಟಿಡಿಪಿ ಸರ್ಕಾರದ ಅವಧಿಯಲ್ಲಿ 2016 ರಲ್ಲಿ ರಾಜ್ಯ ಕೌಶಲ್ಯ ಅಭಿವೃದ್ಧಿ ನಿಗಮವನ್ನು (APSSDC) ಸ್ಥಾಪಿಸಲಾಯಿತು . ಈ ಯೋಜನೆಯು ನಿರುದ್ಯೋಗಿ ಯುವಕರಿಗೆ ಕೌಶಲ್ಯ ತರಬೇತಿಯನ್ನು ನೀಡುವ ಮೂಲಕ ಅವರನ್ನು ಸಬಲೀಕರಣಗೊಳಿಸಲು ಕೇಂದ್ರೀಕರಿಸಿದೆ. ಇದರಲ್ಲಿ 3,300 ಕೋಟಿ ರೂ.ಗಳ ಹಗರಣ ನಡೆದಿದೆ. ಈ ಬಗ್ಗೆ ಎಪಿ ಸಿಐಡಿ ಮಾರ್ಚ್‌ನಲ್ಲಿ 3,300 ಕೋಟಿ ರೂ.ಗಳ ಹಗರಣದ ತನಿಖೆಯನ್ನು ಪ್ರಾರಂಭಿಸಿತು.ಭಾರತೀಯ ರೈಲ್ವೆ ಸಂಚಾರ ಸೇವೆ (IRTS) ಮಾಜಿ ಅಧಿಕಾರಿ ಅರ್ಜಾ ಶ್ರೀಕಾಂತ್ ಅವರಿಗೆ ನೋಟಿಸ್ ನೀಡಿದ ನಂತರ ತನಿಖೆಯನ್ನು ಪ್ರಾರಂಭಿಸಲಾಯಿತು. ಅರ್ಜಾ ಶ್ರೀಕಾಂತ್ ಅವರು 2016 ರಲ್ಲಿ APSSDC ಯ CEO ಆಗಿದ್ದರು. ಈ ಯೋಜನೆಯಡಿ ಯುವಕರಿಗೆ ಕೈಗಾರಿಕೆಗಳಲ್ಲಿ ಕೆಲಸ ಮಾಡಲು ಅಗತ್ಯವಾದ ಕೌಶಲ್ಯಾಭಿವೃದ್ಧಿ ತರಬೇತಿಯನ್ನು ನೀಡಬೇಕಿತ್ತು . ಇದರ ಜವಾಬ್ದಾರಿಯನ್ನು ಸೀಮೆನ್ಸ್ ಎಂಬ ಕಂಪನಿಗೆ ಹಸ್ತಾಂತರಿಸಲಾಯಿತು. ಈ ಯೋಜನೆಗೆ ಒಟ್ಟು 3300 ಕೋಟಿ ರೂ.ಗಳನ್ನು ಖರ್ಚು ಮಾಡಬೇಕಾಗಿತ್ತು ಮತ್ತು ಆಗಿನ ನಾಯ್ಡು ಸರ್ಕಾರವು 10 ಪ್ರತಿಶತ ಅಂದರೆ ಒಟ್ಟು 370 ಕೋಟಿ ರೂ. ಉಳಿದ 90 ಪ್ರತಿಶತ ವೆಚ್ಚವನ್ನು ಕೌಶಲ್ಯ ಅಭಿವೃದ್ಧಿ ತರಬೇತಿ ಕಂಪನಿ ಸೀಮೆನ್ಸ್ ಭರಿಸಲಿದೆ. ನಾಯ್ಡು ಸರ್ಕಾರ 371 ಕೋಟಿ ರೂ.ಗಳನ್ನು ಶೆಲ್ ಕಂಪನಿಗಳಿಗೆ ವರ್ಗಾಯಿಸಿದೆ ಎಂದು ಆರೋಪಿಸಲಾಗಿದೆ. ಜತೆಗೆ ಹಣ ವರ್ಗಾವಣೆಗೆ ಸಂಬಂಧಿಸಿದ ಎಲ್ಲ ದಾಖಲೆಗಳನ್ನು ನಾಶಪಡಿಸಲಾಗಿದೆ.
ಸಿಐಡಿ ಪ್ರಾಥಮಿಕ ತನಿಖೆ ಹೇಳುವುದೇನು?*ಟಿಡಿಪಿ ಸರ್ಕಾರವು 3,300 ಕೋಟಿ ರೂಗಳ ಯೋಜನೆಗೆ ತಿಳುವಳಿಕೆ ಪತ್ರಕ್ಕೆ (ಎಂಒಯು) ಸಹಿ ಹಾಕಿತ್ತು.
*ಸೀಮೆನ್ಸ್ ಇಂಡಸ್ಟ್ರಿ ಸಾಫ್ಟ್‌ವೇರ್ ಇಂಡಿಯಾ ಲಿಮಿಟೆಡ್ ಮತ್ತು ಡಿಸೈನ್ ಟೆಕ್ ಸಿಸ್ಟಮ್ಸ್ ಪ್ರೈವೇಟ್ ಲಿಮಿಟೆಡ್ ಕಂಪನಿಗಳು ಈ ಎಂಒಯುನಲ್ಲಿ ಭಾಗಿಯಾಗಿದ್ದವು.
*ಸೀಮೆನ್ಸ್ ಇಂಡಸ್ಟ್ರಿ ಸಾಫ್ಟ್‌ವೇರ್ ಇಂಡಿಯಾಗೆ ಕೌಶಲ್ಯ ಅಭಿವೃದ್ಧಿಗಾಗಿ 6 ​​ಶ್ರೇಷ್ಠತೆಯ ಕೇಂದ್ರಗಳನ್ನು ಸ್ಥಾಪಿಸುವ ಕಾರ್ಯವನ್ನು ವಹಿಸಲಾಯಿತು.
*ರಾಜ್ಯ ಸರ್ಕಾರವು ಒಟ್ಟು ಯೋಜನಾ ವೆಚ್ಚದಲ್ಲಿ ಸುಮಾರು 10% ರಷ್ಟು ಕೊಡುಗೆ ನೀಡಬೇಕಾಗಿತ್ತು, ಸೀಮೆನ್ಸ್ ಮತ್ತು ಡಿಸೈನ್ ಟೆಕ್ ಉಳಿದ ಹಣವನ್ನು ಒದಗಿಸುತ್ತದೆ.
ತನಿಖೆಯಲ್ಲಿ ಮಹತ್ವದ ಸಂಗತಿ ಬಯಲುಟೆಂಡರ್ ಪ್ರಕ್ರಿಯೆ ಕೊರತೆ:ಗುಣಮಟ್ಟದ ಟೆಂಡರ್ ಪ್ರಕ್ರಿಯೆ ಅನುಸರಿಸದೆ ಯೋಜನೆ ಆರಂಭಿಸಲಾಗಿದೆ.ಸಂಪುಟ ಅನುಮೋದನೆ ಬೈಪಾಸ್:ಈ ಯೋಜನೆಗೆ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿರಲಿಲ್ಲ.ನಿಧಿಯ ದುರ್ಬಳಕೆ:ಸೀಮೆನ್ಸ್ ಇಂಡಸ್ಟ್ರಿ ಸಾಫ್ಟ್‌ವೇರ್ ಇಂಡಿಯಾ ಈ ಯೋಜನೆಯಲ್ಲಿ ತನ್ನದೇ ಆದ ಯಾವುದೇ ಸಂಪನ್ಮೂಲಗಳನ್ನು ಹೂಡಿಕೆ ಮಾಡಲು ವಿಫಲವಾಗಿದೆ.*ರಾಜ್ಯ ಸರ್ಕಾರ ಬಿಡುಗಡೆ ಮಾಡಿದ 371 ಕೋಟಿ ರೂ.ಗಳನ್ನು ಕೆಲವು ಶೆಲ್ ಕಂಪನಿಗಳಿಗೆ ಕಳುಹಿಸಲಾಗಿದೆ.ಈ ಕಂಪನಿಗಳೆಂದರೆ:ಲೇಯ್ಡ್ ಕಂಪ್ಯೂಟರ್ಸ್, ಸ್ಕಿಲ್ಲರ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್, ನಾಲೆಡ್ಜ್ ಪೋಡಿಯಮ್, ಕ್ಯಾಡೆನ್ಸ್ ಪಾರ್ಟ್‌ನರ್ಸ್ ಮತ್ತು ಇಟಿಎ ಗ್ರೀನ್ಸ್.
G20 Summit 2023:ಜಿ 20ನಲ್ಲಿ ಕ್ಸಿ ಜಿನ್‌ಪಿಂಗ್ ಅನುಪಸ್ಥಿತಿಗೆ ಕಾರಣವನ್ನು ಚೀನಾ ವಿವರಿಸಲಿ: ಅಮೆರಿಕದ ಅಧಿಕಾರಿ

ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:3 × five =
Remember me
