ಚೆನ್ನೈ:ತಿರುಪತ್ತೂರಿನ ಖಾಸಗಿ ಶಾಲೆಗೆ ಶುಕ್ರವಾರ ಚಿರತೆಯೊಂದು ನುಗ್ಗಿ ಬಂದು ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಸಿಬ್ಬಂದಿಯಲ್ಲಿ ಆತಂಕ ಮೂಡಿಸಿತ್ತು.
ಇದನ್ನೂ ಓದಿ:ಬಾಕ್ಸ್ ಆಫೀಸ್​ನಲ್ಲಿ ಸದ್ದು ಮಾಡದ ಚಂದು ಚಾಂಪಿಯನ್! ಮೊದಲ ದಿನದ ಗಳಿಕೆ ಎಷ್ಟು ಗೊತ್ತಾ?
ತಿರುಪತ್ತೂರಿನ ಕಲೆಕ್ಟರೇಟ್ ಕಚೇರಿ ಬಳಿಯ ಖಾಸಗಿ ಶಾಲೆಯಲ್ಲಿ ಮಧ್ಯಾಹ್ನದ ವೇಳೆಯಲ್ಲಿ ವಿದ್ಯಾರ್ಥಿಗಳೆಲ್ಲ ತರಗತಿ ಕೊಠಡಿಯಲ್ಲಿದ್ದರು. ಆಗ ಗೋಪಾಲ್ ಎಂಬ ವ್ಯಕ್ತಿ ಶಾಲಾ ವಾಹನಗಳಿಗೆ ಬಣ್ಣ ಬಳಿಯುತ್ತಿದ್ದ. ಅಷ್ಟರಲ್ಲಿ ಚಿರತೆಯೊಂದು ಅನಿರೀಕ್ಷಿತವಾಗಿ ಶಾಲೆಯ ಆವರಣಕ್ಕೆ ನುಗ್ಗಿ ಗೋಪಾಲ್ ಮೇಲೆ ದಾಳಿ ಮಾಡಿದೆ. ಪಕ್ಕದಲ್ಲಿದ್ದವರ ಕಿರುಚಾಟದೊಂದಿಗೆ ಚಿರತೆ ಸಮೀಪದ ಕಾರ್ ಶೆಡ್‌ಗೆ ನುಗ್ಗಿದೆ. ಚಿರತೆ ಶಾಲೆಗೆ ನುಗ್ಗಿದ ವಿಷಯ ತಿಳಿದ ಪಾಲಕರು ಶಾಲೆಗೆ ಧಾವಿಸಿದ್ದಾರೆ.
ಆಗಲೇ ಕೆಲವು ಯುವಕರು ತರಗತಿಗಳಿಗೆ ತೆರಳಿ ವಿದ್ಯಾರ್ಥಿಗಳನ್ನು ಹೊರಗೆ ಕರೆತಂದಿದ್ದರು. ಮಾಹಿತಿ ಪಡೆದ ಪೊಲೀಸರು, ಅರಣ್ಯ ಮತ್ತು ಅಗ್ನಿಶಾಮಕ ಸಿಬ್ಬಂದಿ ಕೂಡಲೇ ಶಾಲೆಗೆ ಆಗಮಿಸಿದರು.
ಅಷ್ಟರಲ್ಲಿ ಶಾಲೆಯಿಂದ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಸಿಬ್ಬಂದಿ ಹೊರ ಬಂದಿದ್ದು, ಎಲ್ಲರೂ ಉಸಿರು ಬಿಗಿ ಹಿಡಿದಿದ್ದರು. ಶಾಲಾ ಆವರಣವನ್ನು ಜಿಲ್ಲಾಧಿಕಾರಿ ಪರಿಶೀಲಿಸಿದರು.
ಬಳಿಕ ಶಾಲಾ ಆವರಣದಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾ ಆಧರಿಸಿ ಚಿರತೆಯ ಚಲನವಲನವನ್ನು ಅಧಿಕಾರಿಗಳು ಪರಿಶೀಲಿಸಿದರು. ಚಿರತೆಗೆ ಅರಿವಳಿಕೆ ಚುಚ್ಚುಮದ್ದು ನೀಡಿ ಸೆರೆಹಿಡಿಯಲು ನಿರ್ಧರಿಸಿದ ಅಧಿಕಾರಿಗಳು, ಪಶುವೈದ್ಯರನ್ನು ಕರೆತಂದರು.
ಅರೆವಳಿಕೆ ಚುಚ್ಚುಮದ್ದು ನೀಡಲು ವೈದ್ಯರು ಮುಂದಾಗುತ್ತಿದ್ದಂತೆ ಚಿರತೆ ಹೊರಬಂದರೆ ಬಲೆಗೆ ಬೀಳಿಸಲು ಶಾಲೆ ಸುತ್ತ ಬಲೆಗಳನ್ನು ಹಾಕಲಾಯಿತು. ಕಡೆಗೆ ರಾತ್ರಿ ಸಮಯವಾದ್ದರಿಂದ ವಿದ್ಯುತ್‌ ಮಂಡಳಿ ಸಿಬ್ಬಂದಿ ಆ ಪ್ರದೇಶದಲ್ಲಿ ಪ್ರಖರ ದೀಪಗಳನ್ನು ಅಳವಡಿಸುವ ಕಾರ್ಯವನ್ನು ಕೈಗೆತ್ತಿಕೊಂಡರು. ಶನಿವಾರ ಬೆಳಗ್ಗೆಯೂ ಚಿರತೆ ಸೆರೆಹಿಡಿಯುವ ಕೆಲಸ ಮುಂದುವರೆದಿತ್ತು.
ಶಾರ್ವರಿ ದೃಢಹೆಜ್ಜೆ..ಮಹಿಳಾ ಪ್ರಧಾನ ಚಿತ್ರದಲ್ಲಿ ಆಲಿಯಾ ಭಟ್​ಗೆ ಸಾಥ್​!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − 6 =
Remember me
