ನವದೆಹಲಿ:ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್​ಡಿಎ ಸರ್ಕಾರದ ಮೂರನೇ ಅವಧಿಯ ಚೊಚ್ಚಲ ಬಜೆಟ್​ನಲ್ಲಿ ಭರಪೂರ ಘೋಷಣೆಗಳನ್ನು ಮಾಡಲಾಗಿದ್ದು, ವಿತ್ತ ಸಚಿವರು ಕ್ಷೇತ್ರ ವಲಯಕ್ಕೆ ಅನುಗುಣವಾಗಿ ಬಜೆಟ್​​​ ಮಂಡನೆ ಮಾಡಿದ್ದು, ಶಿಕ್ಷಣ, ಉದ್ಯೋಗ, ಕೈಗಾರಿಕೆ, ಮಹಿಳೆ, ಕೃಷಿ, ಸೇರಿದಂತೆ ಅನೇಕ ಕ್ಷೇತ್ರಗಳಿಗೆ ನಿರ್ಣಾಯಲ ಘೋಷಣೆಗಳನ್ನು ಮಾಡಿದ್ದಾರೆ. ಈ ಕುರಿತು ಮಾತನಾಡಿರುವ ಚಿಕ್ಕಬಳ್ಳಾಪುರ ಕ್ಷೇತ್ರದ ಸಂಸದ ಡಾ. ಕೆ. ಸುಧಾಕರ್​ ಆರ್ಥಿಕವಾಗಿ ದಿವಾಳಿ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರಗಳಿಗೆ ಒಂದು ಒಳ್ಳೆಯ ಪಾಠವಾಗಿದೆ ಎಂದು ಹೇಳಿದ್ದಾರೆ.
ನವದೆಹಲಿಯಲ್ಲಿ ಈ ಕುರಿತು ಮಾತನಾಡಿದ ಸಂಸದ ಸುಧಾಕರ್, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ರಾಜಕೀಯ ಬಜೆಟ್‌ ಮಂಡಿಸದೆ, ರಾಷ್ಟ್ರೀಯ ಬಜೆಟ್‌ ಮಂಡಿಸಿದೆ. ವೋಟ್‌ ಬ್ಯಾಂಕ್‌ ಬಜೆಟ್‌ ಮಂಡಿಸದೆ ವಿಕಸಿತ ಭಾರತದ ಬಜೆಟ್‌ ನೀಡಿದೆ. ಆರ್ಥಿಕ ಅಭಿವೃದ್ಧಿ ಮತ್ತು ಜನಕಲ್ಯಾಣದ ಸಮತೋಲನ ಸಾಧಿಸಿರುವ ಕೇಂದ್ರ ಬಜೆಟ್, ತನ್ನ ಆಡಳಿತದ ರಾಜ್ಯಗಳನ್ನ ಆರ್ಥಿಕವಾಗಿ ದಿವಾಳಿ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರಗಳಿಗೆ ಒಂದು ಒಳ್ಳೆಯ ಪಾಠವಾಗಿದೆ.
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌, ಅಭಿವೃದ್ಧಿ ಗುರಿಯ ಹಾಗೂ ತೆರಿಗೆ ಹೊರೆ ಇಲ್ಲದ, ಸಮತೋಲಿತ ಬಜೆಟ್‌ ನೀಡಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿಗೆ ಕಡಿಮೆ ಸ್ಥಾನಗಳು ಬಂದಿದ್ದರಿಂದ ಬಜೆಟ್‌ನಲ್ಲೂ ತಾರತಮ್ಯ ಮಾಡಬಹುದು ಎಂಬ ವಿರೋಧ ಪಕ್ಷಗಳ ಸುಳ್ಳಿನ ಊಹೆಗಳಿಗೆ ಈ ಬಜೆಟ್‌ ತಣ್ಣೀರು ಎರಚಿದೆ. ಈ ಬಜೆಟ್‌ ಯುವಜನರು, ಮಹಿಳೆಯರು, ರೈತರು ಸೇರಿದಂತೆ ಎಲ್ಲ ವರ್ಗದ ಆಶೋತ್ತರಗಳಿಗೆ ಸ್ಪಂದಿಸಿದೆ. ಇದು ಚುನಾವಣಾ ದೃಷ್ಟಿಯ ಬಜೆಟ್‌ ಆಗಿರದೆ ದೂರದೃಷ್ಟಿಯಿಂದ ದೇಶದ ಭವಿಷ್ಯವನ್ನು ಊಹಿಸಿ ಮಾಡಿದ ಬಜೆಟ್‌ ಇದಾಗಿದೆ.
ಇದನ್ನೂ ಓದಿ:ಭಾರತ ಚಾಂಪಿಯನ್ಸ್ ಟ್ರೋಫಿಯಲ್ಲಿ ಆಡದಿದ್ದರೆ ಏನಂತೆ… ಸೊಕ್ಕಿನ ಹೇಳಿಕೆ ಕೊಟ್ಟ ಪಾಕ್ ವೇಗಿ
ಕೃಷಿ ಕ್ಷೇತ್ರದ ಸಮಗ್ರ ಪ್ರಗತಿಯ ದೃಷ್ಟಿಯಿಂದ ಹಲವು ಯೋಜನೆಗಳನ್ನು ತರಲಾಗಿದೆ. ತರಕಾರಿ ಪೂರೈಕೆಗಾಗಿ ಸಪ್ಲೈ ಚೈನ್‌ ಬಲಗೊಳಿಸುವ ಕ್ರಮದಿಂದ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ರೈತರಿಗೆ ಹೆಚ್ಚು ಲಾಭ ಸಿಗಲಿದೆ. ಈ ಭಾಗದಲ್ಲಿ ತರಕಾರಿ ಬೆಳೆಗಾರರ ಸಂಖ್ಯೆ ಹೆಚ್ಚಿರುವುದರಿಂದ ಈ ಕ್ರಮ ಶ್ಲಾಘನೀಯ. ಟಾಪ್ 500 ಕಂಪನಿಗಳಲ್ಲಿ 1 ಕೋಟಿ ಯುವಜನರಿಗೆ 12 ತಿಂಗಳ ಇಂಟರ್ನ್‌ಶಿಪ್ ಅವಕಾಶ, ಮೊದಲ ಬಾರಿಗೆ ಉದ್ಯೋಗಕ್ಕೆ ಸೇರಿದವರಿಗೆ 1 ತಿಂಗಳ ವೇತನದಂತಹ ಕ್ರಮಗಳು ಯುವಜನರಿಗೆ ಹೊಸ ಆಶಾಕಿರಣವನ್ನು ನೀಡಿದೆ.
ಹೈದರಾಬಾದ್‌-ಬೆಂಗಳೂರು ಕೈಗಾರಿಕಾ ಕಾರಿಡಾರ್‌ ಯೋಜನೆಯಿಂದ ಚಿಕ್ಕಬಳ್ಳಾಪುರ ಜಿಲ್ಲೆಯ ಹಲವು ಭಾಗಗಳ ಜನರಿಗೆ ಉದ್ಯೋಗಾವಕಾಶ ದೊರೆಯಲಿದೆ. ಇದರಿಂದಾಗಿ ಈ ಭಾಗದ ಆರ್ಥಿಕ ಸ್ಥಿತಿಯಲ್ಲಿ ಅಗಾಧ ಸುಧಾರಣೆ ಕಂಡುಬರಲಿದೆ. ಈ ಯೋಜನೆ ಕುರಿತು ಕೇಂದ್ರ ಸಚಿವ ನಿತಿನ್‌ ಗಡ್ಕರಿ ಅವರಿಗೆ ಈ ಹಿಂದೆ ಮನವಿ ಮಾಡಿದ್ದೆ. ಈ ಮನವಿಗೆ ಸ್ಪಂದಿಸಿ ಯೋಜನೆಯನ್ನು ಬಜೆಟ್‌ನಲ್ಲಿ ತಂದಿರುವುದಕ್ಕೆ ಅವರಿಗೆ ಅನಂತ ಧನ್ಯವಾದ ಸಲ್ಲಿಸುತ್ತೇನೆ.
ಮಹಿಳಾ ಉದ್ಯೋಗಿಗಳಿಗೆ ಸುಭದ್ರತೆ ಒದಗಿಸಲು ವಸತಿ ನಿಲಯಗಳನ್ನು ಆರಂಭಿಸುವುದಾಗಿ ಬಜೆಟ್‌ನಲ್ಲಿ ಹೇಳಿರುವುದು ಕೂಡ ಶ್ಲಾಘನೀಯ. ಈ ಕುರಿತು ನನಗೂ ಚಿಂತನೆಗಳಿತ್ತು. ಇದನ್ನು ಕೇಂದ್ರವೇ ಕೈಗೆತ್ತಿಕೊಂಡಿರುವುದರಿಂದ ಸ್ವಾವಲಂಬಿ ಮಹಿಳೆಯರಿಗೆ ಇನ್ನಷ್ಟು ಪ್ರೋತ್ಸಾಹ ಸಿಕ್ಕಿದಂತಾಗಿದೆ ಎಂದು ಚಿಕ್ಕಬಳ್ಳಾಪುರ ಕ್ಷೇತ್ರದ ಸಂಸದ ಡಾ.ಕೆ. ಸುಧಾಕರ್​ ಮೋದಿ ಸರ್ಕಾರದ ಬಜೆಟ್​ಅನ್ನು ಹಾಡಿ ಹೊಗಳಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − 7 =
Remember me
