ಅಮರಾವತಿ:ಜನಸೇನಾ ನಾಯಕ ಹಾಗೂ ಪವರ್ ಸ್ಟಾರ್ ಪವನ್ ಕಲ್ಯಾಣ್ ಆಂಧ್ರ ವಿಧಾನಸಭಾ ಚುನಾವಣೆಯಲ್ಲಿ ಪೀಠಾಪುರಂ ಕ್ಷೇತ್ರದಿಂದ ಭರ್ಜರಿ ಗೆಲುವು ಸಾಧಿಸಿದ್ದು, ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ. ಅಭಿಮಾನಿಗಳು ವಿಜಯೋತ್ಸವ ಆಚರಿಸುತ್ತಿದ್ದಾರೆ. ಮತ್ತೊಂದೆಡೆ ಮೆಗಾಸ್ಟಾರ್ ಚಿರಂಜೀವಿ ತನ್ನ ಸಹೋದರ ಪವನ್ ಕಲ್ಯಾಣ್ ಗೆ ಶುಭಕೋರಿ ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ:ಐಕಾನ್ ಸ್ಟಾರ್ ಪ್ರಚಾರ ಮಾಡಿದ್ರೂ ಸ್ನೇಹಿತೆಗೆ ಹೀನಾಯ ಸೋಲು!
“ಪ್ರೀತಿಯ ಕಲ್ಯಾಣ್ ಬಾಬು..ಏಳು-ಬೀಳು ಕಂಡಿರುವ ನೀನು ಜನರ ಉನ್ನತಿಗಾಗಿ ಹೋರಾಡಿ ಗೆಲುವು ಸಾಧಿಸಿರುವುದನ್ನು ನೋಡಿದಾಗ ಸಹೋದರನಾಗಿ ಹೆಮ್ಮೆಪಡುತ್ತೇನೆ. ನಿನ್ನ ಶ್ರಮ, ನಿನ್ನ ತ್ಯಾಗ, ನಿನ್ನ ಧ್ಯೇಯ ಮತ್ತು ನಿನ್ನ ಸತ್ಯವು ಜನರಿಗಾಗಿ ಮುಡುಪಾಗಲಿ. ಜನರು ನಿನ್ನನ್ನು ಹೊಗಳಿದಾಗ ನನ್ನ ಹೃದಯವು ಹಿಗ್ಗುತ್ತದೆ. ಈ ಅದ್ಭುತ ಸಾರ್ವಜನಿಕ ತೀರ್ಪು ರಾಜ್ಯದ ಭವಿಷ್ಯ, ಜನರ ಕಲ್ಯಾಣಕ್ಕಾಗಿ ಬಳಸು. ನಿನ್ನ ಕನಸು ಮತ್ತು ಗುರಿ ಸಾಕಾರಗೊಳಿಸುವ ದಿಕ್ಕಿನಲ್ಲಿ ದೇವರು ನಿನಗೆ ಮಾರ್ಗದರ್ಶನ ನೀಡಲಿ ಎಂದು ಹಾರೈಸುತ್ತೇನೆ, ಆಶೀರ್ವದಿಸುತ್ತೇನೆ ಮತ್ತು ಅಭಿನಂದಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.
ಅಲ್ಲದೇ ಟಿಡಿಪಿ ನಾಯಕ ಚಂದ್ರಬಾಬು ನಾಯ್ಡು ಅವರಿಗೆ ಟ್ವೀಟ್ ಮಾಡಿ ಶುಭ ಹಾರೈಸಿದ್ದಾರೆ. “ಆತ್ಮೀಯ ಚಂದ್ರಬಾಬು ನಾಯ್ಡು ಅವರೇ, ಇತಿಹಾಸದಲ್ಲಿ ಅಪರೂಪದ ಗೆಲುವಿಗಾಗಿ ನಿಮಗೆ ಮೊದಲಿಗೆ ಶುಭಾಶಯಗಳು ಮತ್ತು ಅಭಿನಂದನೆಗಳು. ಈ ಮಹಾನ್ ಗೆಲುವು ನಿಮ್ಮ ಮೇಲಿನ ಜನರ ನಂಬಿಕೆ, ನಿಮ್ಮ ನಾಯಕತ್ವ ಕೌಶಲ್ಯ ಮತ್ತು ಗತ ವೈಭವವನ್ನು ಮರಳಿ ತರುವ ನಿಮ್ಮ ಸಾಮರ್ಥ್ಯಕ್ಕೆ ಸಾಕ್ಷಿಯಾಗಿದೆ. ರಾಜ್ಯದ ಜನ, ಪವನ್ ಕಲ್ಯಾಣ್ ಮತ್ತು ನರೇಂದ್ರ ಮೋದಿಯವರು ನಿಮ್ಮ ಮೇಲೆ ಇಟ್ಟಿರುವ ನಂಬಿಕೆಯನ್ನು ಸಂಪೂರ್ಣವಾಗಿ ಎತ್ತಿ ಹಿಡಿಯುವಿರಿ ಎಂದು ನಾನು ಭಾವಿಸುತ್ತೇನೆ. ಬಂಡವಾಳವಿಲ್ಲದ ಮತ್ತು ಗಾಯಗೊಂಡ ರಾಜ್ಯವನ್ನು ಮತ್ತೆ ಹಳಿಗೆ ತಿರುಗಿಸಿ ಅದನ್ನು ನಂಬರ್ ಒನ್ ಮಾಡುತ್ತೀರಿ ಎಂದು ಅವರು ಟ್ವೀಟ್ ಮಾಡಿದ್ದಾರೆ.
ಪವನ್​ ಕಲ್ಯಾಣ್​ ಗೆಲುವಿಗೆ ಮಾಜಿ ಪತ್ನಿ ಸಂತಸ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − 14 =
Remember me
