ತಿರುವನಂತಪುರ: ಲಾಟರಿಯಲ್ಲಿ ಬಹುಮಾನವಾಗಿ 80 ಲಕ್ಷ ರೂ. ಬಂದ ಮಾರನೇ ದಿನವೇ ಯುವಕ ನಿಗೂಢವಾಗಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆತನ ಸ್ನೇಹಿತನನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ.
ಮೃತ ಯುವಕನನ್ನು ಪಂಗೋಡೆ ಮೂಲದ ಸಜೀವ್​ (35) ಎಂದು ಗುರುತಿಸಲಾಗಿದೆ. ಸ್ನೇಹಿತರ ಜತೆ ಸೇರಿ ಮದ್ಯದ ಪಾರ್ಟಿ ನಡೆಸುತ್ತಿದ್ದಾಗ ಮಣ್ಣಿನ ದಿಬ್ಬದಿಂದ ಕೆಳಗೆ ಬಿದ್ದು ಮೃತಪಟ್ಟಿದ್ದು, ಸಾಕಷ್ಟು ಅನುಮಾನಗಳಿಗೆ ಎಡೆಮಾಡಿಕೊಟ್ಟಿತ್ತು.
ಕಳೆದ ವಾರ ಕೇರಳ ಸರ್ಕಾರ ವಿತರಿಸಿದ ಲಾಟರಿಯಿಂದ ಟೈಲ್ಸ್ ಕೆಲಸಗಾರ ಸಜೀವನ್ ಅವರಿಗೆ 80 ಲಕ್ಷ ರೂಪಾಯಿ ಜಾಕ್‌ಪಾಟ್ ಸಿಕ್ಕಿತ್ತು. ತೆರಿಗೆ ಕಡಿತದ ನಂತರ ಸಜೀವನ್ ಅವರ ಖಾತೆಗೆ 49. 75 ಲಕ್ಷ ರೂ. ಜಮಾ ಆಗಿದ್ದು, ಅವರ ಕುಟುಂಬದಲ್ಲಿ ಭರವಸೆ ಮತ್ತು ಸಂತಸ ಮೂಡಿಸಿತು. ಬಹುಮಾನ ಗೆದ್ದ ಖುಷಿಯಲ್ಲಿ ಸಜೀವನ್ ಆತ್ಮೀಯರಿಗೆ ಪಾರ್ಟಿಯನ್ನು ಏರ್ಪಡಿಸಿದ್ದರು.
ಇದನ್ನೂ ಓದಿ:ತಲೆಮರೆಸಿಕೊಂಡಿದ್ದ ಪುನೀತ್​ ಕೆರೆಹಳ್ಳಿ; ರಾಜಸ್ಥಾನದಲ್ಲಿ ಬಂಧನ
ಪಾರ್ಟಿಯ ನಡುವೆ ಮದ್ಯದ ಅಮಲಿನಲ್ಲಿ ಆತನ ಆತ್ಮೀಯ ಗೆಳೆಯ ‘ಮಾಯಾವಿ’ ಸಂತೋಷ್ ಎಂಬಾತ ಸಜೀವನ್ ಜೊತೆ ಜಗಳ ಮಾಡಿಕೊಂಡಿದ್ದ. ಇಬ್ಬರ ನಡುವಿನ ವಾಗ್ವಾದ ತಾರಕಕ್ಕೇರಿ ತಾಳ್ಮೆ ಕಳೆದುಕೊಂಡ ಮಾಯಾವಿ, ಸಜೀವನ್​ನನ್ನು ಮಣ್ಣಿನ ದಿಬ್ಬದಿಂದ ಕೆಳಗೆ ನೂಕಿದ್ದ. ಕೆಳಗೆ ಬಿದ್ದು ಗಾಯಗೊಂಡು ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಆತನನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ, ಗಂಭೀರ ಸ್ಥಿತಿಯಲ್ಲಿದ್ದ ಸಜೀವನ್​ 10 ಗಂಟೆಗಳ ನಂತರ ನಿಧನರಾದರು.
ಸಜೀವನ್​ ಸಾವಿಗೆ ಮಾಯಾವಿ ಕಾರಣ ಎಂದು ಆತನ ಕುಟುಂಬದವರು ಆರೋಪಿಸಿದ್ದು, ದೂರು ದಾಖಲಿಸಿದ ಪೊಲೀಸರು ಶೀಘ್ರವೇ ಬಂಧಿಸಿದ್ದಾರೆ.(ಏಜೆನ್ಸೀಸ್​)
80 ಲಕ್ಷ ರೂ. ಲಾಟರಿ ಬಹುಮಾನ ಗೆದ್ದ ಮಾರನೇ ದಿನವೇ ಯುವಕನ ಬದುಕು ದುರಂತ ಅಂತ್ಯ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 2 =
Remember me
