ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ, ನಾಗರಿಕರ ನೋಂದಣಿ ಹಾಗೂ ಆರ್ಥಿಕ ಕುಸಿತ ವಿಷಯಗಳ ಮೇಲೆ ಆಡಳಿತರೂಢ ಬಿಜೆಪಿ ವಿರುದ್ಧ ಬೃಹತ್​ ಹೋರಾಟ ರೂಪಿಸುವ ನಿಟ್ಟಿನಲ್ಲಿ ಕಾಂಗ್ರೆಸ್​ ಕರೆದಿದ್ದ ವಿಪಕ್ಷಗಳ ಸಭೆಗೆ ಹಲವು ಪಕ್ಷಗಳ ನಾಯಕರು ಗೈರಾಗಿದ್ದರು.
ಬಿಜೆಪಿ ವಿರುದ್ಧ ಹೋರಾಟ ರೂಪಿಸಲು ಕಾಂಗ್ರೆಸ್​ ಹಂಗಾಮಿ ಅಧ್ಯಕ್ಷೆ ಸೋನಿಯಾಗಾಂಧಿ ನೇತೃತ್ವದಲ್ಲಿ ಸೋಮವಾರ ಸಭೆ ನಡೆಸಲಾಯಿತು. ಮೊದಲ ಸಭೆಗೆ ಹಲವು ಮಂದಿ ನಾಯಕರು ಗೈರಾದ ಪರಿಣಾಮ ಹೋರಾಟಕ್ಕೆ ಹಿನ್ನಡೆಯಾಗಿದೆ.
ಬಹುಜನ ಸಮಾಜವಾದಿ ಪಕ್ಷದ ಮಾಯಾವತಿ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಎಂಕೆ ನಾಯಕ ಸ್ಟ್ಯಾಲಿನ್​, ದೆಹಲಿ ಮುಖ್ಯಮಂತ್ರಿ ಅರವಿಂದ್​ ಕೇಜ್ರಿವಾಲ್​ ಸಭೆಯಿಂದ ದೂರ ಉಳಿದವರು.
ಸಭೆಗೆ ಹಾಜರಾಗುವುದಾಗಿ ತಿಳಿಸಿದ್ದ ತೃಣಮೂಲ ಕಾಂಗ್ರೆಸ್​ ನಾಯಕಿ ಮಮತಾ ಬ್ಯಾನರ್ಜಿ ಕೊನೆ ಗಳಿಗೆಯಲ್ಲಿ ಸಭೆಗೆ ಬಾರದಿರಲು ನಿರ್ಧರಿಸಿದರು. ಡಿಎಂಕೆ ನಾಯಕ ಸ್ಟ್ಯಾಲಿನ್​ ಸಭೆ ಆಗಮಿಸುತ್ತಾರೆ ಎಂದು ನಿರೀಕ್ಷಿಸಿದ್ದರೂ ಕೊನೆಗೆ ಅವರೂ ಗೈರು ಹಾಜರಾಗಿದ್ದು ಎಲ್ಲರಲ್ಲೂ ನಿರಾಸೆ ಮೂಡಿಸಿತು.
ಕಾಂಗ್ರೆಸ್​ನ ಹೊಸ ಮೈತ್ರಿದಾರ ಶಿವಸೇನೆ ಕೂಡ ಸಭೆಯಲ್ಲಿ ಪಾಲ್ಗೊಳ್ಳಲಿಲ್ಲ ಎಂದು ತಿಳಿದು ಬಂದಿದೆ. (ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − eleven =
Remember me
