ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್​ ಜಿಲ್ಲೆಯಲ್ಲಿ ಇಂದು ಭಾರತೀಯ ಭದ್ರತಾ ಪಡೆ ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದೆ. ಈ ದಾಳಿಯಲ್ಲಿ ಭಾರತೀಯ ಸೇನಾಪಡೆ ಎನ್​ಕೌಂಟರ್ ನಡೆಸಿದ್ದು, ಓರ್ವ ಉಗ್ರನನ್ನು ಹೊಡೆದುರುಳಿಸಿದೆ.
ಇದನ್ನೂ ಓದಿ:ಭಾರತ ಪ್ರವಾಸ ಕೈಗೊಂಡ ಮಾಲ್ಡೀವ್ಸ್​ ವಿದೇಶಾಂಗ ಸಚಿವ ಮೂಸಾ ಜಮೀರ್!
ನಿನ್ನೆಯಷ್ಟೇ ಅಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರನ್ನು ಕೊಲ್ಲಲಾಗಿತ್ತು. ಇಂದು ಮತ್ತೋರ್ವ ಉಗ್ರನನ್ನು ಎನ್​ಕೌಂಟರ್ ಮಾಡಲಾಗಿದೆ. ಸೋಮವಾರ ಸಂಜೆ ಆರಂಭವಾದ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಯು ಇನ್ನೂ ಮುಂದುವರೆದಿದೆ.
Operation at#Kulgamresumed, fresh firing started.#Operationin progress.@JmuKmrPolicehttps://t.co/9rRwmGkZdj
— Kashmir Zone Police (@KashmirPolice)May 8, 2024

ಕುಲ್ಗಾಮ್​ ಜಿಲ್ಲೆಯ ರೆಡ್ವಾನಿ ಪ್ರದೇಶದಲ್ಲಿ ಎನ್‌ಕೌಂಟರ್ ಸೈಟ್‌ನ ಸಮೀಪವಿರುವ ಮನೆಗಳ ಹುಡುಕಾಟದ ಸಮಯದಲ್ಲಿ, ಅಲ್ಲಿ ಅಡಗಿದ್ದ ಭಯೋತ್ಪಾದಕನೊಂದಿಗೆ ಗುಂಡಿನ ಚಕಮಕಿ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ವೇಳೆ ಹೆಚ್ಚಿನ ಪಡೆಗಳು ಸ್ಥಳಕ್ಕೆ ಧಾವಿಸಿದ್ದು, ಓರ್ವ ಉಗ್ರನನ್ನು ಹತ್ಯೆ ಮಾಡಲಾಗಿದೆ.
#BREAKING: Encounter with Islamist terrorists resumes in Kulgam of South Kashmir. 1 or 2 terrorists likely trapped in the area. Earlier terrorist commander Basit Dar was killed in the same area by security forces. Dar was responsible for several attacks on forces and minorities.pic.twitter.com/iHnqGXkh4D
— Aditya Raj Kaul (@AdityaRajKaul)May 8, 2024

ಸೋಮವಾರ ರಾತ್ರಿ (ಮೇ 6) ಭದ್ರತಾ ಪಡೆಗಳು ಈ ಪ್ರದೇಶದಲ್ಲಿ ಭಯೋತ್ಪಾದಕರ ಉಪಸ್ಥಿತಿಯ ಬಗ್ಗೆ ಮಾಹಿತಿ ಪಡೆದ ನಂತರ ಈ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು. ಮಂಗಳವಾರ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಲಷ್ಕರ್-ಎ-ತೊಯ್ಬಾದ ವಾಂಟೆಡ್ ಭಯೋತ್ಪಾದಕ ಬಸಿತ್ ದಾರ್ ಸೇರಿದಂತೆ ಇಬ್ಬರು ಉಗ್ರರು ಹತರಾಗಿದ್ದಾರೆ.
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ: ಸಿಬಿಐ ತನಿಖೆಗೆ ಕೊಡುವ ಅಗತ್ಯವಿಲ್ಲ ಎಂದ ಪರಮೇಶ್ವರ್​

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:three × 5 =
Remember me
