ಕಟಕ್​:ಖದೀಮರನ್ನು ಹಿಡಿದು ಶಿಕ್ಷೆಗೆ ಗುರಿಯಾಗಿಸಿ ಸರಿ ದಾರಿಗೆ ತರಬೇಕಾದ ಕರ್ತವ್ಯ ಪೊಲೀಸರದ್ದು. ಆದರೆ, ಕೆಲ ಪೊಲೀಸರೇ ಕಳ್ಳತನಕ್ಕೆ ಇಳಿದಾಗ ಅದಕ್ಕಿಂತ ನಾಚಿಕಿಗೇಡಿನ ಸಂಗತಿ ಬೇರೊಂದಿಲ್ಲ. ಒಂದು ರೀತಿಯಲ್ಲಿ ಬೇಲಿಯೇ ಎದ್ದು ಹೊಲ ಮೇಯ್ದಂತಾಗುವುದು. ಇದೇ ರೀತಿಯ ಪ್ರಸಂಗ ಒಡಿಶಾದಲ್ಲಿ ಜರುಗಿದೆ.
ತಪ್ಪು ಮಾಡುವ ಜನರಿಗೆ ಬುದ್ಧಿವಾದ ಹೇಳುವ ಸ್ಥಾನದಲ್ಲಿರುವ ಪೊಲೀಸರಿಬ್ಬರು ಸ್ವತಃ ಕಳ್ಳತನ ಮಾಡಿ ಸಿಕ್ಕಿಬಿದ್ದಿದ್ದಾರೆ. ಕೇವಲ ನುಗ್ಗೆಕಾಯಿ ಕದಿಯುವ ಮೂಲಕ ಪೊಲೀಸ್​ ಸಿಬ್ಬಂದಿ ತನ್ನ ಸಣ್ಣತನ ಪ್ರದರ್ಶಿಸಿದ್ದಾರೆ.
ಅಂದಹಾಗೆ ಈ ಘಟನೆ ನಡೆದಿರುವುದು ಒಡಿಶಾದ ಕಟಕ್​ ನಗರದ ಸಿಡಿಎ ಸೆಕ್ಟರ್​-7 ಏರಿಯಾದಲ್ಲಿ. ಈ ಪ್ರದೇಶದಲ್ಲಿ ವಾಸವಿರುವ ಹಿರಿಯ ನಾಗರಿಕ ಬಾಸುದೇವ್​ ಮಿಶ್ರಾ ಎಂಬುವರ ಮನೆಯಲ್ಲಿ ಒಡಿಶಾ ಸಹಾಯಕ ಪೊಲೀಸ್ ಪಡೆ (ಒಎಪಿಎಫ್​)ಯ ಸಿಬ್ಬಂದಿ ಕಳ್ಳತನ ಮಾಡಿದ್ದಾರೆ. ಇಷ್ಟೇ ಅಲ್ಲದೆ, ಮಿಶ್ರಾ ಜತೆ ಸಿಬ್ಬಂದಿ ಅನುಚಿತವಾಗಿ ವರ್ತಿಸಿದ್ದಾರೆ.
ಇದನ್ನೂ ಓದಿರಿ:ಹೆಂಡತಿಯನ್ನು ಸೇರಲೊಪ್ಪದ ಗಂಡ, ಆಕೆಗೆ ದೆವ್ವ ಹಿಡಿದಿದೆ ಎಂದು ಕಿರುಕುಳ ಕೊಟ್ಟ; ಪತಿ, ಅತ್ತೆ-ಮಾವನ ವಿರುದ್ಧ ದೂರಿತ್ತ ಮಹಿಳೆ
ಈ ಬಗ್ಗೆ ಮಾತನಾಡಿರುವ ಮಿಶ್ರಾ, ಇಬ್ಬರು ಒಎಪಿಎಫ್ ಸಿಬ್ಬಂದಿ ಎರಡು ಪಿಸಿಆರ್​ ಬೈಕ್​ನಲ್ಲಿ ಮಾರ್ಚ್​ 4ರ ಬೆಳಗ್ಗೆ ನನ್ನ ಮನೆಯ ಬಳಿ ಬಂದರು. ನನ್ನ ಮನೆಯೆದುರು ನಾನು ಬೆಳೆಸಿದ್ದ ನುಗ್ಗೆ ಮರದಲ್ಲಿ ನುಗ್ಗೆಕಾಯಿಯನ್ನು ಕೀಳಲು ಆರಂಭಿಸಿದರು. ಅವರು ಕದಿಯುವುದು ನನ್ನ ಗಮನಕ್ಕೆ ಬಂದು ಅದನ್ನು ವಿರೋಧಿಸಿದೆ. ಆದರೆ, ಅವರು ನನ್ನೊಂದಿಗೆ ಅನುಚಿತವಾಗಿ ವರ್ತಿಸಿದರು. ಸುಮಾರು 25 ಕೆಜಿ ತೂಕದ ನುಗ್ಗೆಕಾಯ ಕಿತ್ತುಕೊಂಡು ಬೈಕ್​ನಲ್ಲಿ ಹೊರಟು ಹೋದರು ಎಂದು ಆರೋಪಿಸಿದ್ದಾರೆ.
ಮಿಶ್ರಾ ಅವರು ಈ ಬಗ್ಗೆ ಮರ್ಕಾತ್​ ನಗರ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಕಟಕ್​ ನಗರದ ಡಿಸಿಪಿ ಘಟನೆ ಸಂಬಂಧ ಆದಷ್ಟು ಬೇಗ ಉತ್ತರ ನೀಡುವಂತೆ ಮರ್ಕಾತ್​ ನಗರ ಠಾಣೆಯನ್ನು ಕೇಳಿದ್ದಾರೆ.(ಏಜೆನ್ಸೀಸ್​)
ನಾನು ಅಪ್ಪ-ಅಮ್ಮನಿಗೆ ಹುಟ್ಟಿದ ಮಗ, ಹಾಸನದವ, ಇಮೇಜ್​ ನೋಡುತ್ತ ಕೂರೋಕೆ ಆಗಲ್ಲ: ಯಶ್​ ಗರಂ

ಸದನದಲ್ಲಿ ಬಟ್ಟೆ ಬಿಚ್ಚಿದ ಸಂಗಮೇಶ್ ವಿರುದ್ಧ ಹಕ್ಕುಚ್ಯುತಿ ಮಂಡನೆ; ನಾನು ಅಂಗಿ ಬಿಚ್ಚಿಲ್ಲ ಎಂದು ಗೂಳಿಹಟ್ಟಿ ಶೇಖರ್ ಸ್ಪಷ್ಟನೆ

ರಾಮನನ್ನು ನೀವು ಗುತ್ತಿಗೆ ಪಡೆದಿದ್ದೀರಾ? ನನ್ನ ಹೆಸರಲ್ಲೇ ರಾಮನಿದ್ದಾನೆ: ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine + sixteen =
Remember me
