ಪುಣೆ: ಕರೊನಾ COVID19 ಸೋಂಕು ಮತ್ತು ಅದಕ್ಕೆ ಸಂಬಂಧಿತ ವಿಷಯಗಳನ್ನು ಮುಂದಿಟ್ಟುಕೊಂಡು ಏಪ್ರಿಲ್ 1ರಂದು ಯಾರನ್ನೂ ಮೂರ್ಖರನ್ನಾಗಿ ಮಾಡಲು ಹೊರಡಬೇಡಿ. ಸಾಮಾಜಿಕ ಜಾಲತಾಣಗಳಲ್ಲೂ ಸುಳ್ಳು ಸುದ್ದಿಗಳನ್ನು ಹರಡಬೇಡಿ. ಇದು ಮೂರ್ಖರನ್ನಾಗಿಸುವ ಸಂದರ್ಭವಲ್ಲ ಎಂದು ಮಹಾರಾಷ್ಟ್ರ ಪೊಲೀಸರು ಎಚ್ಚರಿಸಿದ್ದಾರೆ.
ಈ ಸಂಬಂಧ ಪುಣೆ ಗ್ರಾಮಾಂತರ ಪೊಲೀಸರು ಪ್ರಕಟಣೆಯನ್ನು ಹೊರಡಿಸಿದ್ದು, ಒಂದೊಮ್ಮೆ ಸಾಮಾಜಿಕ ಜಾಲತಾಣಗಳಲ್ಲಿ ಏಪ್ರಿಲ್ ಒಂದು ಎಂದುಕೊಂಡು ಜನರನ್ನು ಮೂರ್ಖರನ್ನಾಗಿಸಲು ಸುಳ್ಳು ಸುದ್ದಿ ಹಬ್ಬಿಸಿದರೆ ಐಪಿಸಿ ಸೆಕ್ಷನ್​ 188ರ ಪ್ರಕಾರ ಅಂಥ ವ್ಯಕ್ತಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.
ಸೆಕ್ಷನ್ 188ರ ಪ್ರಕಾರ, ಸರ್ಕಾರಿ ಅಧಿಕಾರಿ ಹೊರಡಿಸಿರುವ ಯಾವುದೇ ಆದೇಶವನ್ನು ಉಲ್ಲಂಘಿಸಿದರೆ ನೀಡಬಹುದಾದ ಶಿಕ್ಷೆಯ ವಿವರ ಇದರಲ್ಲಿದೆ. ಇದರಂತೆ, ಗರಿಷ್ಠ 6 ತಿಂಗಳು ಸಜೆ ಅಥವಾ 1,000 ರೂಪಾಯಿ ದಂಡ ಅಥವಾ ಎರಡನ್ನೂ ವಿಧಿಸುವ ಅವಕಾಶವಿದೆ.
ಸಾಮಾನ್ಯವಾಗಿ ಏಪ್ರಿಲ್ 1ರಂದು ಜನ ತಮ್ಮ ಸ್ನೇಹಿತರು, ಕುಟುಂಬ ವರ್ಗವನ್ನು ಮೂರ್ಖರನ್ನಾಗಿಸುವುದು ವಾಡಿಕೆ. ಇಂಥ ಆಟಗಳು ಈ ಸಂದರ್ಭದಲ್ಲಿ ಅತಿರೇಕಕ್ಕೆ ಹೋಗುವ ಸಾಧ್ಯತೆ ಇದೆ. ಹೀಗಾಗಿ ಈ ಬಾರಿ ಅದಕ್ಕೆ ಅವಕಾಶವಿಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ. (ಏಜೆನ್ಸೀಸ್)
ವಾವ್​… ನನ್ನ ಟೀ-ಶರ್ಟ್​ ಮೇಲೇಕೆ ನಿಮ್ಮ ಲುಕ್​ : ಸನ್ನಿ ಲಿಯೋನ್​ ಅವರ ಒಗಟಿನ ಮಾತಿಗೂ ಲಾಕ್​ಡೌನ್​ಗೂ ಇದೆ ಲಿಂಕ್!​

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:five × 5 =
Remember me
