ಬೆಂಗಳೂರು:ನಿನ್ನೆ ಸಂಜೆ 5 ಗಂಟೆಯಿಂದ ಇಂದು 12 ಗಂಟೆಯವರೆಗೆ ರಾಜ್ಯದಲ್ಲಿ 22 ಹೊಸ ಕರೊನಾ ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಈ ಪೈಕಿ ಹೆಚ್ಚಿನವು ಪರ ಊರುಗಳಿಂದ ಬಂದವರೇ ಆಗಿವೆ.
ಈ ಮೂಲಕ ಮುಂಬೈ ಹಾಗೂ ಅಹಮದಾಬಾದ್​ ಸೇರಿದಂತೆ ಕೆಲವು ಊರುಗಳಿಂದ ಬಂದವರಿಂದಾಗಿಯೇ ರಾಜ್ಯದಲ್ಲಿ ಸೋಂಕಿತರ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚುತ್ತಲಿದೆ. ಇಲ್ಲಿಯವರೆಗೆ ಒಟ್ಟು 981 ಸೋಂಕು ಪ್ರಕರಣಗಳು ದಾಖಲಾಗಿವೆ. ಈ ಪೈಕಿ 456 ಮಂದಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದರೆ, ಇದಾಗಲೇ ಈ ಮಹಾಮಾರಿ 35 ಜೀವಗಳನ್ನು ಬಲಿ ಪಡೆದಿದೆ.
ಇದನ್ನೂ ಓದಿ:ವಿಮಾನ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಾರಾಟಕ್ಕೆ ಮುಹೂರ್ತ ಫಿಕ್ಸ್​- ಇಲ್ಲಿದೆ ನೋಡಿ ಸಂಪೂರ್ಣ ವಿವರ
ಮುಂಬೈನಿಂದ ಮಂಡ್ಯಕ್ಕೆ ಬಂದಿರುವ ನಾಲ್ವರಲ್ಲಿ, ಬೀದರ್​ಗೆ ಬಂದಿರುವ 45 ವರ್ಷದ ಮಹಿಳೆಯಲ್ಲಿ ಹಾಗೂ ಬೆಳಗಾವಿಗೆ ಬಂದಿರುವ ಓರ್ವ ಯುವತಿಯಲ್ಲಿ ಹೊಸದಾಗಿ ಸೋಂಕು ಕಾಣಿಸಿಕೊಂಡಿದ್ದರೆ, ಅಹಮದಾಬಾದ್​ನಿಂದ ಗದಗಕ್ಕೆ ಬಂದಿರುವ ನಾಲ್ವರಲ್ಲಿ ಸೋಂಕು ಪತ್ತೆಯಾಗಿದೆ.
ಬೀದರ್​ನ ಕಂಟೈನ್​ಮೆಂಟ್​ ಝೋನ್​ನಲ್ಲಿರುವ ಸಂಪರ್ಕಕ್ಕೆ ಬಂದಿರುವ ಮೂವರಲ್ಲಿ ಸೋಂಕು ಕಾಣಿಸಿಕೊಂಡಿದೆ.ಇದನ್ನು ಹೊರತುಪಡಿಸಿದರೆ, ಬೆಂಗಳೂರು ನಗರದಲ್ಲಿ ಐದು, ಬಾಗಲಕೋಟೆಯಲ್ಲಿ ಒಂದು ಹಾಗೂ ದಾವಣಗೆರೆಯಲ್ಲಿ ಮೂರು ಹೊಸ ಪ್ರಕರಣಗಳು ಬೆಳಕಿಗೆ ಬಂದಿವೆ.
ಇದನ್ನೂ ಓದಿ:VIDEO: ಕೋಲಿನಿಂದ ಮರುಜೀವ ಪಡೆದ ಯುವಕ! ವೀಡಿಯೋ ಭಾರಿ ವೈರಲ್​
ನಿಜಾಮುದ್ದೀನ್‌ ಮರ್ಕಜ್‌ ಮಸೀದಿಯಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿರುವ ಪ್ರತಿಯೊಬ್ಬರೂ ಉಚಿತ ಆರೋಗ್ಯ ಸಹಾಯವಾಣಿ 080-29711171 ಸಂಪರ್ಕಿಸುವಂತೆ ಸರ್ಕಾರ ಸೂಚಿಸಿದೆ.
ಸೋಂಕಿತರ ಪ್ರಯಾಣದ ಮಾಹಿತಿ ಬೇಕಿದ್ದರೆ www.karnataka.gov.in. ಮೊಬೈಲ್‌ ಅಪ್ಲಿಕೇಷ್‌ ಡೌನ್‌ಲೋಡ್‌ ಮಾಡಿಕೊಳ್ಳುವಂತೆ ಸರ್ಕಾರದ ಪ್ರಕಟಣೆ ತಿಳಿಸಿದೆ. ಕರೊನಾ ವೈರಸ್‌ ಉಚಿತ ಆರೋಗ್ಯ ಸಹಾಯವಾಣಿ ಸಂಖ್ಯೆ: 104/ 9745697456.
ಸಂಪೂರ್ಣ ವಿವರ ಇಲ್ಲಿದೆ:

ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:1 × two =
Remember me
