ನವದೆಹಲಿ:ಕರೊನಾ ವೈರಸ್​ ತುಂಬ ವೇಗವಾಗಿ ಪಸರಿಸುತ್ತಿದೆ. ಭಾರತದಲ್ಲೂ ದಿನೇದಿನೆ ಪೀಡಿತರ ಸಂಖ್ಯೆ ಹೆಚ್ಚುತ್ತಲೇ ಇದೆ. ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು ಅಂದರೆ 42 ಮಂದಿಗೆ ಕರೊನಾ ವೈರಸ್ ತಗುಲಿದೆ.
ದೆಹಲಿಯಲ್ಲಿ ಓರ್ವ ವಿದೇಶಿಗ ಸೇರಿ ಒಟ್ಟು 10 ಮಂದಿಯಲ್ಲಿ ವೈರಸ್ ದೃಢಪಟ್ಟಿದ್ದು, ಅವರನ್ನೆಲ್ಲ ವಿವಿಧ ಆಸ್ಪತ್ರೆಗಳ ಐಸೋಲೇಶನ್​ ವಾರ್ಡ್​ನಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಈ ಮಧ್ಯೆ ದೆಹಲಿಯ ಸಫ್ದರ್​ಜಂಗ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಶಂಕಿತ ಕರೊನಾ ವೈರಸ್​ ಸೋಂಕಿತ ರೋಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಸುಮಾರು 35 ವರ್ಷದ ವ್ಯಕ್ತಿ ಇಂದು ಬೆಳಗ್ಗೆ 9ಗಂಟೆಗೆ ಸಫ್ದರ್​ಜಂಗ್ ಆಸ್ಪತ್ರೆಗೆ ದಾಖಲಾಗಿದ್ದ. ಸಂಜೆ ಆಸ್ಪತ್ರೆಯ ಏಳನೇ ಮಹಡಿಯಿಂದ ಕೆಳಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರಿಗೆ ವೈದ್ಯರು ಮಾಹಿತಿ ನೀಡಿದ್ದಾರೆ.
ಈತ ಆಸ್ಟ್ರೇಲಿಯಾದ ಸಿಡ್ನಿಯಿಂದ ವಾಪಸ್​ ಆಗಿದ್ದ. ಏರ್​ಪೋರ್ಟ್​ನಲ್ಲಿ ಸ್ಕ್ರೀನಿಂಗ್​ ತಪಾಸಣೆ ಮಾಡಿದಾಗ ಕರೊನಾ ಲಕ್ಷಣಗಳು ಕಂಡುಬಂದಿದ್ದವು. ಆತನಿಗೆ ತೀವ್ರ ತಲೆನೋವು ಕೂಡ ಕಾಡುತ್ತಿತ್ತು. ವಿಮಾನನಿಲ್ದಾಣದಿಂದ ಆಸ್ಪತ್ರೆಗೆ ಕರೆದುಕೊಂಡು ಬಂದು ಪ್ರತ್ಯೇಕ ವಾರ್ಡ್​ನಲ್ಲಿ ದಾಖಲಿಸಿಕೊಳ್ಳಲಾಗಿತ್ತು. ರಕ್ತ ಹಾಗೂ ಗಂಟಲಿನ ಮಾದರಿಯನ್ನು ಲ್ಯಾಬ್​ಗೆ ಕಳಿಸಲಾಗಿದೆ. ಇನ್ನೂ ವರದಿಯೇ ಬಂದಿರಲಿಲ್ಲ. ಆದರೆ ಸಂಜೆಯಷ್ಟರಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. (ಏಜೆನ್ಸೀಸ್)
ಮಹಾರಾಷ್ಟ್ರದಲ್ಲಿ ಮತ್ತೆ ನಾಲ್ವರಲ್ಲಿ ಕರೊನಾ ವೈರಸ್​; ಭಾರತದಲ್ಲಿ ಏರುತ್ತಲೇ ಇದೆ ಸೋಂಕು ಪೀಡಿತರ ಸಂಖ್ಯೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × five =
Remember me
